Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

ಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

- Advertisement -
- Advertisement -

ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಳಿಗ್ಗೆ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾದ ಸಿಂಧಿಯಾ ಬಿಜೆಪಿಗೆ ಸೇರುತ್ತಾರೆ ಎಂದು ಉಹಾಪೋಹಗಳನ್ನು ಅವರು ನಿಜಮಾಡಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು 20 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶದ ವಿಧಾನಸಭೆಯ ಸ್ಪೀಕರ್‌ಗೆ ರಾಜೀನಾಮೆ ಪತ್ರಗಳನ್ನು ಸಲ್ಲಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಟಕೀಯ ಬದಲಾವಣೆ ಪ್ರಾರಂಭವಾದಾಗಿನಿಂದ ಸಿಂಧಿಯಾ ಅವರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸೋಮವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು. “ನಾವು ಸಿಂಧಿಯಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆವು ಆದರೆ ಅವರಿಗೆ ಹಂದಿ ಜ್ವರವಿದೆ ಎಂದು ಹೇಳಲಾಗುತ್ತಿದೆ, ಆದ್ದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಶಕ್ತಿ ಪ್ರದರ್ಶನಕ್ಕಾಗಿ ತನ್ನ ಶಾಸಕರನ್ನು ಭೋಪಾಲ್‌ಗೆ ಕರೆಸಿಕೊಂಡಿದ್ದ ಬಿಜೆಪಿ ಸಂಜೆ 6 ಗಂಟೆಗೆ ನಗರದ ಹೋಟೆಲ್‌ವೊಂದರಲ್ಲಿ ಸಭೆ ನಡೆಸಲಿದೆ.

ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಕರಣ್ ಸಿಂಗ್ ಅವರು ಪಕ್ಷದ ಬಿಕ್ಕಟ್ಟು ಶಮನ ಮಾಡಲು ಶ್ರಮಿಸುತ್ತಿದ್ದಾರೆ. “ನಾಯಕರು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಸಮರ್ಥರಾಗಿದ್ದಾರೆ ಮಧ್ಯಪ್ರದೇಶದ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ” ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಸಿಂಧಿಯಾ ಕೆಲವು ಸಮಯದಿಂದ ಹಿರಿಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹಿರಂಗವಾಗಿ ಬೆಂಬಲಿಸಿದ್ದರು.

230 ಸದಸ್ಯರಿರುವ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಸರ್ಕಾರವು ಒಟ್ಟು 120 ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ 114 ಮಂದಿ ಕಾಂಗ್ರೆಸ್ ಮೂಲದವರಾದರೆ, ಇಬ್ಬರು ಬಿಎಸ್ಪಿ, ಒಬ್ಬ ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರಾಗಿದ್ದಾರೆ. ಬಿಜೆಪಿಯಲ್ಲಿ 107 ಶಾಸಕರು ಇದ್ದಾರೆ ಹಾಗು ಎರಡು ಸ್ಥಾನಗಳು ಖಾಲಿ ಇವೆ. ಕಾಗ್ರೇಸ್ ನ 17-20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕಮಲ್ ನಾಥ್ ಸರಕಾರವನ್ನು ಉರುಳಿಸಲು 10 ಶಾಸಕರು ಕಳೆದವಾರ ದೆಹಲಿಯ ರೆಸಾರ್ಟ್ ಒಂದರಲ್ಲಿ ಬೀಡು ಬಿಟ್ಟಿದ್ದರು. ಅದರಲ್ಲಿ ದಿಗ್ವಿಜಯ ಸಿಂಗ್ ಆರು ಜನರನ್ನು ಮರಳಿ ಕರೆಸುವಲ್ಲಿ ಸಫಲಾಗಿದ್ದರು. ಆದರೆ ಉಳಿದಿದ್ದ ನಾಲ್ವರಲ್ಲಿ ಒಬ್ಬರಾದ ಹರ್ದೀಪ್ ಡಾಂಗ್ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಕಳುಹಿಸಿದ ನಂತರ ಕಮಲ್ ನಾಥ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...