Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

ಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

- Advertisement -
- Advertisement -

ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಳಿಗ್ಗೆ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾದ ಸಿಂಧಿಯಾ ಬಿಜೆಪಿಗೆ ಸೇರುತ್ತಾರೆ ಎಂದು ಉಹಾಪೋಹಗಳನ್ನು ಅವರು ನಿಜಮಾಡಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು 20 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶದ ವಿಧಾನಸಭೆಯ ಸ್ಪೀಕರ್‌ಗೆ ರಾಜೀನಾಮೆ ಪತ್ರಗಳನ್ನು ಸಲ್ಲಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಟಕೀಯ ಬದಲಾವಣೆ ಪ್ರಾರಂಭವಾದಾಗಿನಿಂದ ಸಿಂಧಿಯಾ ಅವರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸೋಮವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು. “ನಾವು ಸಿಂಧಿಯಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆವು ಆದರೆ ಅವರಿಗೆ ಹಂದಿ ಜ್ವರವಿದೆ ಎಂದು ಹೇಳಲಾಗುತ್ತಿದೆ, ಆದ್ದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಶಕ್ತಿ ಪ್ರದರ್ಶನಕ್ಕಾಗಿ ತನ್ನ ಶಾಸಕರನ್ನು ಭೋಪಾಲ್‌ಗೆ ಕರೆಸಿಕೊಂಡಿದ್ದ ಬಿಜೆಪಿ ಸಂಜೆ 6 ಗಂಟೆಗೆ ನಗರದ ಹೋಟೆಲ್‌ವೊಂದರಲ್ಲಿ ಸಭೆ ನಡೆಸಲಿದೆ.

ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಕರಣ್ ಸಿಂಗ್ ಅವರು ಪಕ್ಷದ ಬಿಕ್ಕಟ್ಟು ಶಮನ ಮಾಡಲು ಶ್ರಮಿಸುತ್ತಿದ್ದಾರೆ. “ನಾಯಕರು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಸಮರ್ಥರಾಗಿದ್ದಾರೆ ಮಧ್ಯಪ್ರದೇಶದ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ” ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಸಿಂಧಿಯಾ ಕೆಲವು ಸಮಯದಿಂದ ಹಿರಿಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹಿರಂಗವಾಗಿ ಬೆಂಬಲಿಸಿದ್ದರು.

230 ಸದಸ್ಯರಿರುವ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಸರ್ಕಾರವು ಒಟ್ಟು 120 ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ 114 ಮಂದಿ ಕಾಂಗ್ರೆಸ್ ಮೂಲದವರಾದರೆ, ಇಬ್ಬರು ಬಿಎಸ್ಪಿ, ಒಬ್ಬ ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರಾಗಿದ್ದಾರೆ. ಬಿಜೆಪಿಯಲ್ಲಿ 107 ಶಾಸಕರು ಇದ್ದಾರೆ ಹಾಗು ಎರಡು ಸ್ಥಾನಗಳು ಖಾಲಿ ಇವೆ. ಕಾಗ್ರೇಸ್ ನ 17-20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕಮಲ್ ನಾಥ್ ಸರಕಾರವನ್ನು ಉರುಳಿಸಲು 10 ಶಾಸಕರು ಕಳೆದವಾರ ದೆಹಲಿಯ ರೆಸಾರ್ಟ್ ಒಂದರಲ್ಲಿ ಬೀಡು ಬಿಟ್ಟಿದ್ದರು. ಅದರಲ್ಲಿ ದಿಗ್ವಿಜಯ ಸಿಂಗ್ ಆರು ಜನರನ್ನು ಮರಳಿ ಕರೆಸುವಲ್ಲಿ ಸಫಲಾಗಿದ್ದರು. ಆದರೆ ಉಳಿದಿದ್ದ ನಾಲ್ವರಲ್ಲಿ ಒಬ್ಬರಾದ ಹರ್ದೀಪ್ ಡಾಂಗ್ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಕಳುಹಿಸಿದ ನಂತರ ಕಮಲ್ ನಾಥ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...