Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...