Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...