Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...