Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...