Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...