Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...