Homeಕರ್ನಾಟಕಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು - ದಿನೇಶ್ ಅಮೀನ್ ಮಟ್ಟು

ಕೆ.ಬಿ ಸಿದ್ದಯ್ಯ ಕವಿಯೂ, ಸಂತನೂ, ರಾಜಕೀಯ ವ್ಯಕ್ತಿಯೂ ಆಗಿದ್ದರು – ದಿನೇಶ್ ಅಮೀನ್ ಮಟ್ಟು

- Advertisement -
- Advertisement -

ಕವಿ ಕೆ.ಬಿ.ಸಿದ್ದಯ್ಯ ಏಕಕಾಲಕ್ಕೆ ಕವಿಯೂ, ಸಂತನೂ, ಸಂಸಾರಿಯೂ ಮತ್ತು ರಾಜಕೀಯ ವ್ಯಕ್ತಿಯಾಗಿ ಕಾಣುತ್ತಿದ್ದರು. ಬಿಳಿಗಡ್ಡ ಮತ್ತು ಬಿಳಿ ಕೂದಲು ಕಂಡರೆ ಎಷ್ಟೇ ಜನರಿರಲಿ ಕೆ.ಬಿ ಅವರನ್ನು ಗುರುತಿಸಬಹುದಾಗಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟರು.

ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನ ಅಮಾನಿಕೆರೆ ಎದುರಿನಲ್ಲಿರುವ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕೆ.ಬಿ.ಸಿದ್ದಯ್ಯನವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆ.ಬಿ. ಪ್ರಯತ್ನಿಸಿದ್ದರೆ ರಾಜ್ಯಸಭಾ ಸದಸ್ಯರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದವು. ಆದರೆ ಕೆಬಿ ಗಂಭೀರವಾಗಿ ಪ್ರಯತ್ನ ಮಾಡಲಿಲ್ಲ ಅನಿಸುತ್ತದೆ ಎಂದರು.

ನಾನು ಕೆ.ಬಿ.ಸಿದ್ದಯ್ಯನವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಸೆ ಇತ್ತು. ಆದರೆ ನುಡಿನಮನ ಸಮಾರಂಭದಲ್ಲಿ ಭಾಗವಹಿಸುತ್ತೇನೆಂಬ ನಂಬಿಕೆ ಇರಲಿಲ್ಲ. ಹೀಗಾಗಿ ಇದು ಹೆಮ್ಮೆಯ, ಸಂತೋಷದ ವಿಚಾರವಲ್ಲ. ನಾನು ತುಮಕೂರುನಲ್ಲಿದ್ದಾಗ ಕೆಬಿ.ಸಿದ್ದಯ್ಯ ಒಡನಾಟವಿದ್ದರೂ ಹೆಚ್ಚು ಭೇಟಿ ಆಗುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಬಿ.ಸಿದ್ದಯ್ಯ ಎಂದೂ ವಿಧಾನಸೌಧದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೆ ಸಿದ್ದರಾಮಯ್ಯ ಮನೆಗೆ ಬರುತ್ತಿದ್ದರು. ಅಲ್ಲಿ ನಾನು ಅವರನ್ನು ನೋಡಿದ್ದೆ. ಅವರ ಬಿಳಿಯ ಗಡ್ಡ, ಬಿಳಿಯ ಕೂದಲ ಮತ್ತು ಇತ್ತೀಗೆ ಹಾಕಿಕೊಳ್ಳುತ್ತಿದ್ದ ಕಪ್ಪು ಕನ್ನಡ ಎಲ್ಲರ ನಡುವೆ ಅವರನ್ನು ಗುರುತಿಸುವಂತಹ ವ್ಯಕ್ತಿತ್ವವಾಗಿತ್ತು. ಅಷ್ಟೇ ಅಲ್ಲ ಅವರಲ್ಲಿ ಆತ್ಮಸ್ಥೈರ್ಯ ಕೂಡ ಇತ್ತು. ಅವರು ಎಂದೂ ತಲೆತಗ್ಗಿಸಿದವರಲ್ಲ. ಬೇಸರದಿಂದ, ನೋವಿನಿಂದ ಅವರು ಇದ್ದದ್ದು ಕಾಣಲಿಲ್ಲ. ಅವರ ಮಾತುಗಳಲ್ಲಿ ನಿರಾಸೆ, ಸಿನಿಕತೆ ಕಾಣಲಿಲ್ಲ ಎಂದು ವಿವರಿಸಿದರು.

ಕೆಬಿಯವರವನ್ನು ನೋಡಿದಾಗ ಅವರ ಗುರು ಅನಂತಮೂರ್ತಿ ನೆನಪಾಗುತ್ತಿದ್ದರು. ಅನಂತಮೂರ್ತಿ ಕೊನೆಯ ದಿನಗಳಲ್ಲಿ ಮುಂದಿನ ಎರಡು ವರ್ಷಗಳ ಹೇಗೆ ನರೇಂದ್ರ ಮೋದಿ ಅವರನ್ನು ಎದರಿಸಬೇಕು ಎಂಬ ಜೀವನೋತ್ಸಾಹ ಇತ್ತು. ಅದೇ ಜೀವನೋತ್ಸಾಹ ಕೆ.ಬಿ.ಸಿದ್ದಯ್ಯ ಅವರಲ್ಲೂ ಇತ್ತು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಾವೂ ನಿರೀಕ್ಷಿಸಿರಲಿಲ್ಲ. ಅವರು ಅದನ್ನು ಅಂದುಕೊಂಡಿರಲಿಲ್ಲ. ಸಾವನ್ನು ಯಾರೂ ನಿರೀಕ್ಷಿಸುವುದಿಲ್ಲವಲ್ಲ ಎಂದರು.

ಕವಿ ಕೆ.ಬಿ.ಸಿದ್ದಯ್ಯ ಸಂತನೋ, ಸಂಸಾರಿಯೋ ರಾಜಕಾರಣಿಯೋ ಏನೆಂದು ತಿಳಿಯುವ ಮೊದಲೇ ಅವರು ಹೊರಟು ಹೋದರು. ಸಾಹಿತಿಗಳ ಸುತ್ತಮುತ್ತ ಒಂದು ಪ್ರಭಾವಳಿ ಇರುತ್ತದೆ. ಆ ಪ್ರಭಾವಳಿಯ ಹತ್ತಿರ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇರುತ್ತದೆ. ಆದರೆ ದೇವನೂರು ಮಹಾದೇವ ಮತ್ತು ಕೆ.ಬಿ.ಸಿದ್ದಯ್ಯ ಅವರಲ್ಲಿ ಅಂತಹ ಯಾವುದೇ ಪ್ರಭಾವಳಿ ಇರಲಿಲ್ಲ. ತುಂಟತನ ಇತ್ತು, ಎಲ್ಲರೊಂದಿಗೆ ಬೆರೆಯುತ್ತಿದ್ದರು ಎಂದು ಹೇಳಿದರು.

ಕೆ.ಬಿ ತುಮಕೂರು ಬಿಟ್ಟು ಬೆಂಗಳೂರಿಗೆ ಬಂದಿದ್ದರೆ ಮಹತ್ವದ ಸ್ಥಾನ ಪಡೆಯುತ್ತಿದ್ದರು. ಬೆಂಗಳೂರಿಗೆ ಬಂದರೆ ಸಂಜೆಗೆ ತುಮಕೂರಿಗೆ ಬರುತ್ತಿದ್ದರು. ಅವರಿಗೆ ತುಮಕೂರು ಸೆಳೆಯುತ್ತಿತ್ತು. ಸಿದ್ದರಾಮಯ್ಯ ಎಷ್ಟೇ ಜನರ ನಡುವೆ ಕೂತು ಮಾತನಾಡುತ್ತಿರಲಿ ಬಿಳಿಗಡ್ಡ ಮತ್ತು ಬಿಳಿತಲೆಯ ಸಿದ್ದಯ್ಯ ಅವರನ್ನು ಕಂಡರೆ ಏನ್ ಪ್ರೊಫೆಸರ್ ಎನ್ನುತ್ತಿದ್ದರು ಎಂದು ನೆನಪಿಸಿದರು.

ಕೆ.ಬಿ. ಸಿದ್ದಯ್ಯ ಭಾಷಣದಲ್ಲಿ ಕಟುವಾಗಿ ಮಾತನಾಡುತ್ತಿದ್ದರೋ ಅವರ ಮನಸ್ಸಿನಲ್ಲಿ ಅಂತಹ ಯಾವುದೇ ಭಾವನೆ ಇರುತ್ತಿರಲಿಲ್ಲ. ಬೇರೆಯವರನ್ನು ಟೀಕೆ ಮಾಡಿ ಏಕೆ ತಮ್ಮ ಮೇಲೆ ಎಳೆದುಕೊಳ್ಳುತ್ತಿರಿ ಎಂದರೆ ಬಿಡೋ ಎನ್ನುತ್ತಿದ್ದರು. ಮೇಲ್ನೋಟಕ್ಕೆ ಕಟುವಾಗಿ ಟೀಕಿಸಿದರೂ ಅವರ ಒಳಗಡೆ ಅಂತಹ ಕಹಿ ಇರಲಿಲ್ಲ. ಇಂತಹ ಸಾಧಕರನ್ನು ನೆನೆಸಿಕೊಳ್ಳುವುದು ಕಡಿಮೆ. ಇಂಥವರು ಬಹಳಷ್ಟು ಮಂದಿ ಇದ್ದಾರೆ. ಅವರು ಇದ್ದಾಗಲೇ ತಮ್ಮ ಸಾಧನೆಗಳನ್ನು ಹೇಳುವ ಕೆಲಸ ಆಗಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಮಾತನಾಡಿ ಕೆ.ಬಿ.ಸಿದ್ದಯ್ಯ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು. ಆದರೆ ಹಾಗೆ ಆಗಲಿಲ್ಲ. ಅವರೊಂದು ಪುಷ್ಪಕವಿಮಾನವಿದ್ದಂತೆ. ಅದರಲ್ಲಿ ಯಾರೂ ಹತ್ತಲಿಲ್ಲ. ಅದು ಮೇಲಕ್ಕೂ ಹೋಗಲಿಲ್ಲ. ಪುಷ್ಪಕ ವಿಮಾನ ಹತ್ತಿದ್ದರೆ ಮೇಲಕ್ಕೆ ಹೋಗುತ್ತಿದ್ದರು ಎಂದು ಮೆಲುಕು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...