Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...