Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....