Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...