Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...