Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...