Homeಮುಖಪುಟಕೆ.ಬಿ.ಸಿದ್ದಯ್ಯ ಸಾಹಿತ್ಯ ಮತ್ತು ಚಳವಳಿಯ ದಾರಿ

ಕೆ.ಬಿ.ಸಿದ್ದಯ್ಯ ಸಾಹಿತ್ಯ ಮತ್ತು ಚಳವಳಿಯ ದಾರಿ

ಕೆ.ಬಿ.ಸಿದ್ದಯ್ಯನವರು ತೊಂಬತ್ತರ ದಶಕದಿಂದೀಚೆಗೆ ಅಕ್ಷರಮುಖಿ ಅಭಿವ್ಯಕ್ತಿಗೆ ಒಡ್ಡಿಕೊಂಡರು.

- Advertisement -
- Advertisement -

| ಹುಲಿಕುಂಟೆ ಮೂರ್ತಿ |

ಕೆ.ಬಿ.ಸಿದ್ದಯ್ಯನವರು ತೊಂಬತ್ತರ ದಶಕದಿಂದೀಚೆಗೆ ಅಕ್ಷರಮುಖಿ ಅಭಿವ್ಯಕ್ತಿಗೆ ಒಡ್ಡಿಕೊಂಡರು. ಅವರ ಈ ಅಕ್ಷರಮುಖಿ ನಡಿಗೆ ದಲಿತ ಜಾನಪದ ಲೋಕದ ಬೇರುಗಳ ಜತೆ ಇದ್ದಿದ್ದರಿಂದ ಅವರೊಟ್ಟಿಗೆ ಕನ್ನಡಕ್ಕೊಂದು ಹೊಸ ದಿಕ್ಕು ತೆರೆದುಕೊಂಡಿತು. ಅವರ ಬಕಾಲ, ದಕ್ಲಕಥಾ ದೇವಿ, ಗಲ್ಲೇಬಾನಿ ಮತ್ತು ಅನಾತ್ಮ ಕಾವ್ಯಗಳು ಕನ್ನಡ ಪ್ರಜ್ಞೆಯ ಅಂತರ್ಮುಖಿ ಧಾರೆಯಾಗಿದ್ದ ಜನಪದಕ್ಕೆ ದಲಿತ ಕಣ್ಣೋಟವನ್ನೂ, ದಲಿತ ಬದುಕಿನ ಆದಿಮ ಘನತೆಯನ್ನೂ ಕಸಿ ಮಾಡುವಲ್ಲಿ ಯಶಸ್ವಿಯಾದವು.

ದು.ಸರಸ್ವತಿ ಅಕ್ಕನ ‘ಜೀವಸಂಪಿಗೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನಾನೂ ಪದ್ಯ ಓದಬೇಕಿತ್ತು. ಪದ್ಯ ಓದುವ ಮೊದಲು ‘ನಾನು ಕವಿಯಲ್ಲ’ ಅಂದು ‘ಎಬಿಸಿಡಿ ಎಂದರೆ..’ ಪದ್ಯ ಓದಿದೆ. ಆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ದಯ್ಯನವರು ‘ಕವಿಯಲ್ಲ ಅಂತನೇ ಒಳ್ಳೇ ಪದ್ಯ ಓದ್ದಲ್ಲೋ’ ಎಂದು ನಕ್ಕಿದ್ದರು. ಅದಾದಮೇಲೆ ಅವರು ಅಧ್ಯಕ್ಷತೆ ವಹಿಸಿದ್ದ, ಕವಿತೆ ಓದಿದ ಅನೇಕ ಕವಿಗೋಷ್ಟಿಗಳಲ್ಲಿ ನಾನೂ ಪದ್ಯ ಓದಿದೆ. ಓದಿದ ನಂತರ ‘ಗುಡ್ ಕಣೋ’ ಅಂದು ಅಷ್ಟಗಲ ನಕ್ಕು ಬೆನ್ನು ತಟ್ಟುತ್ತಿದ್ದರು. ಅವರು ವೇದಿಕೆಯಲ್ಲಿದ್ದ ಕಾರ್ಯಕ್ರಮಗಳಲ್ಲಿ ನಾನು ಮಾತನಾಡಿದ ಮೇಲೆ ಹತ್ತಿರ ಕರೆದು ‘ಗುಡ್’ ಹೇಳದೆ ಇರುತ್ತಿರಲಿಲ್ಲ. ಕನ್ನಡದ ದಲಿತ ಸಾಹಿತಿಗಳೆಲ್ಲರಿಗಿಂತ ಅವರೊಂದಿಗೆ ಹೆಚ್ಚು ವೇದಿಕೆ ಹಂಚಿಕೊಂಡ ಖುಷಿ ನನ್ನದು.

ಕೆ.ಬಿ.ಸಿದ್ದಯ್ಯ ಎಂದರೆ ಥಟ್ಟನೆ ನೆನಪಿಗೆ ಬರುವುದು ‘ಅಲ್ಲಮ’. ಅಲ್ಲಮ ಪ್ರಭು ಕುರಿತು ಅವರು ಮಾತನಾಡಲು ಶುರು ಮಾಡಿದರೆ ನಾವೆಲ್ಲಾ ಬಹಳ ಹಿಂದುಳಿದಿದ್ದೇವೆ ಅನ್ನಿಸುತ್ತಿತ್ತು. ಶರಣ ಚಳವಳಿ ಮತ್ತು ಅಲ್ಲಮನನ್ನು ಅವರು ಅರ್ಥೈಸುತ್ತಿದ್ದ ಕ್ರಮವೇ ವಿಶಿಷ್ಟವಾಗಿತ್ತು. ಅಲ್ಲಮನ ಕುರಿತು ಆಲೋಚಿಸುತ್ತಿದ್ದ ಕೆಲವೇ ವಿದ್ವಾಂಸರಲ್ಲಿ ಕೆ.ಬಿ.ಎಸ್ ವಿಭಿನ್ನವಾಗಿದ್ದರು. ಅವರು ಯಾವ ವಿಷಯವನ್ನಾದರೂ ಮಾತನಾಡುವಾಗ ನೀಳ ಉಸಿರೆಳೆದುಕೊಂಡು ಕಣ್ಮುಚ್ಚಿ ಧ್ಯಾನಿಸಿ ತೂಕ ಹಾಕಿದಂತೆ ಮಾತಾಡುತ್ತಿದ್ದರು. ಅವರ ಮಾತುಗಳನ್ನು ಅವರೇ ಮೆಚ್ಚಿಕೊಳ್ಳುವ ಹಾಗೆ.. ಬೆಳ್ಳಗಿನ ಬಟ್ಟೆ, ಬೆಳ್ಳಗಿನ ಗಡ್ಡ ಮತ್ತು ಬೆಳ್ಳಗಿನ ನಗು ಸಿದ್ದಯ್ಯನವರ ಗುರುತುಗಳು. ಆ ಗುರುತುಗಳೇ ನಮ್ಮಂಥವರನ್ನು ಅವರೆಡೆಗೆ ಸೆಳೆಯುತ್ತಿದ್ದವು.

ಎಪ್ಪತ್ತರ ದಶಕದಲ್ಲಿ ಕರ್ನಾಟಕದಲ್ಲಿ ಕಟ್ಟಿದ ಎಚ್ಚರದ ಹಾದಿಯಲ್ಲಿ ಸ್ವಾಭಿಮಾನದ ಅಕ್ಷರಗಳ ಕೆಂಡ ಹಾದವರಲ್ಲಿ ಕೆ.ಬಿ.ಸಿದ್ದಯ್ಯ ಒಬ್ಬರು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಕೋಟಿಗಾನಹಳ್ಳಿ ರಾಮಯ್ಯ, ಇಂದೂಧರ ಹೊನ್ನಾಪುರ, ಎಚ್.ಗೋವಿಂದಯ್ಯ ಮುಂತಾದವರೊಟ್ಟಿಗೆ ದಲಿತ ಹೋರಾಟಕ್ಕೆ ಅಗತ್ಯವಿದ್ದ ಸಾಹಿತ್ಯವನ್ನು ಒದಗಿಸುವ ಕೆಲಸವನ್ನು ಮಾಡಿದರು. ಅವರ ‘ಈ ನಾಡ ಮಣ್ಣಿನಲ್ಲಿ ಮಣ್ಣಾದ ಜನಗಳ ಕತೆಯ..’ ಹಾಡು ದಲಿತರ ಬದುಕಿನ ನೋವನ್ನು ಚಿತ್ರಿಸಿತ್ತು. ಕೋಲಾರ ಶೇಷಗಿರಿಯಪ್ಪನ ಕೊಲೆ ಪ್ರಕರಣ, ಬೆಂಡಿಗೇರಿ ಮಲ ತಿನ್ನಿಸಿದ ಪ್ರಕರಣಗಳಲ್ಲಿ ಇಡೀ ರಾಜ್ಯದ ಮೂಲೆಮೂಲೆಯಲ್ಲಿ ಹೋರಾಟ ಕಟ್ಟಿದ ದಸಂಸ ಹಿಂದೆ ಸಿದ್ದಯ್ಯನವರೂ ಇದ್ದರು. ದಲಿತ ಸಂಘರ್ಷ ಸಮಿತಿಯ ಹೋರಾಟಗಳ ಜೊತೆಗೆ ಈ ಮಹನೀಯರು ಸೃಷ್ಟಿಸಿದ ಸಾಹಿತ್ಯ ನಾಡಿನ ದಲಿತೇತರರ ಎದೆಗಳಲ್ಲೂ ಜಾತಿವಿನಾಶದ ಕಿಡಿಯನ್ನು ಹೊತ್ತಿಸಿದ್ದು ಸುಳ್ಳಲ್ಲ.

ಇಂಥಾ ಹಾದಿಯಲ್ಲಿ ನಡೆದುಬಂದ ಕೆ.ಬಿ.ಸಿದ್ದಯ್ಯನವರು ತೊಂಬತ್ತರ ದಶಕದಿಂದೀಚೆಗೆ ಅಕ್ಷರಮುಖಿ ಅಭಿವ್ಯಕ್ತಿಗೆ ಒಡ್ಡಿಕೊಂಡರು. ಅವರ ಈ ಅಕ್ಷರಮುಖಿ ನಡಿಗೆ ದಲಿತ ಜಾನಪದ ಲೋಕದ ಬೇರುಗಳ ಜತೆ ಇದ್ದಿದ್ದರಿಂದ ಅವರೊಟ್ಟಿಗೆ ಕನ್ನಡಕ್ಕೊಂದು ಹೊಸ ದಿಕ್ಕು ತೆರೆದುಕೊಂಡಿತು. ಅವರ ಬಕಾಲ, ದಕ್ಲಕಥಾ ದೇವಿ, ಗಲ್ಲೇಬಾನಿ ಮತ್ತು ಅನಾತ್ಮ ಕಾವ್ಯಗಳು ಕನ್ನಡ ಪ್ರಜ್ಞೆಯ ಅಂತರ್ಮುಖಿ ಧಾರೆಯಾಗಿದ್ದ ಜನಪದಕ್ಕೆ ದಲಿತ ಕಣ್ಣೋಟವನ್ನೂ, ದಲಿತ ಬದುಕಿನ ಆದಿಮ ಘನತೆಯನ್ನೂ ಕಸಿ ಮಾಡುವಲ್ಲಿ ಯಶಸ್ವಿಯಾದವು. ಅದಾಗಲೇ ಸದ್ದು ಮಾಡುತ್ತಿದ್ದ ಮಂಟೇಸ್ವಾಮಿ, ಮಾದಪ್ಪ, ಮೈಲಾರಲಿಂಗ ಮೊದಲಾದ ಜನಪದ ಮಹಾಕಾವ್ಯಗಳ ಮರು ಓದಿನ ಜೊತೆಗೆ ಸಿದ್ದಯ್ಯನವರ ಸಂಶೋಧನಾತ್ಮಕ ಜನಪದ ಸಂಕಥನಗಳು ಸೇರಿಕೊಂಡವು. ಇದರಿಂದಾಗಿ ದಲಿತ ಬದುಕುಗಳ ಸಾಂಸ್ಕೃತಿಕ ಅಧ್ಯಯನಕ್ಕೆ ಹೊಸ ದಿಕ್ಕು ಗೋಚರಿಸಿತು. ಈ ಮೂಲಕ ಸಿದ್ದಯ್ಯನವರ ಅಭಿಮಾನಿ ಬಳಗವೂ ಹುಟ್ಟಿಕೊಂಡಿತು. ಆ ನಂತರದಲ್ಲಿ ಕರ್ನಾಟಕದ ಸಾಹಿತ್ಯ, ಹೋರಾಟ ಮತ್ತು ರಾಜಕಾರಣದಲ್ಲಿ ಸಿದ್ದಯ್ಯನವರು ಸೇರಿಹೋದರು.

ದಲಿತ ಸಂಘರ್ಷ ಸಮಿತಿಯ ಬಣಗಳು ಹೆಚ್ಚಿದಂತೆ ದಲಿತ ಪ್ರಜ್ಞೆಯ ಮೆದುಳಿನಂತೆ ಕೆಲಸ ಮಾಡುತ್ತಿದ್ದ ದಲಿತ ಹಿರಿಯರೂ ಅಲ್ಲಲ್ಲಿ ಚದುರಿಹೋದರು. ಸಿದ್ದಯ್ಯನವರೂ ದಲಿತರೊಳಗಿನ ಮಾದಿಗ ಸಮುದಾಯಕ್ಕೆ ಸೇರಿದವರಾದ್ದರಿಂದ ‘ಮಾದಿಗ ಮೀಸಲಾತಿ ಹೋರಾಟ ಸಮಿತಿ’ ಪ್ರಾರಂಭಿಸಿದ ‘ಒಳ ಮೀಸಲಾತಿ’ ಹೋರಾಟದ ಭಾಗವಾಗಬೇಕಾಯಿತು. ಅಲ್ಲಿಯವರೆಗೆ ನಂಬಿಕೊಂಡು ಬಂದಿದ್ದ ‘ದಲಿತ’ ಅನ್ನುವ ಶಬ್ಧವನ್ನೇ ‘ದಾರಿ ತಪ್ಪಿಸುವ ಶಬ್ದ’ ಎಂದರು. ಅವರ ಮಾತು ನಿಜವೂ ಆಗಿತ್ತು. ದಲಿತ ಸಾಹಿತಿಗಳ ಸಾಲಿನಲ್ಲಿ ಗುರುತಿಸಿಕೊಳ್ಳುವುದರಿಂದ ಅದಲಿತ ಬಂಧುಗಳಿಗೆ ಬೇಸರವಾಗುತ್ತದೆಂದು ವಾದಿಸಿದರು. ಅವರ ಈ ವಾದಕ್ಕೂ ಇತರ ದಲಿತ ಸಾಹಿತಿಗಳೊಂದಿಗಿನ ಅವರ ಮುನಿಸಿಗೂ ಸಂಬಂಧ ಕಲ್ಪಿಸಲಾಯಿತು. ಅದು ನಿಜವೇನೋ ಎಂಬಂತೆ ತಮ್ಮೊಂದಿಗೆ ಸಂಘಟನೆ ಕಟ್ಟಿ, ಬರೆದು, ದಲಿತ ಪ್ರಜ್ಞೆಯನ್ನು ಹಿಗ್ಗಿಸಿದ ಹಿರಿಯರ ಕುರಿತು ಅಸಹನೆ ವ್ಯಕ್ತಪಡಿಸಿದರು. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯ ವಿರೋಧಿ ಮನುಧರ್ಮ ಶಾಸ್ತ್ರದ ಪ್ರತಿಪಾದಕ ಪೇಜಾವರ ಶ್ರೀ ಸಿದ್ದಯ್ಯನವರ ಮನೆಗೆ ಬಂದುಹೋದರು.

ಇದೆಲ್ಲದರ ಜೊತೆಗೆ ಸಿದ್ದಯ್ಯನವರು ತುಮಕೂರಿನಲ್ಲಿ ನೆಲೆಯೂರಿದ್ದು ಒಂದು ರೀತಿಯ ಸೀಮಿತ ವಾತಾವರಣವನ್ನು ಸೃಷ್ಟಿಸಿತು. ಅವರು ತುಮಕೂರನ್ನೇ ನಂಬಿ ಕೂತುಬಿಟ್ಟರು ಅಥವಾ ತುಮಕೂರು ಅವರನ್ನು ಕಟ್ಟಿಹಾಕಿಬಿಟ್ಟಿತು. ಅಲ್ಲಿನ ಕಾಲೇಜೊಂದರಲ್ಲಿ ಅವರು ಉಪನ್ಯಾಸಕ ವೃತ್ತಿ ಮಾಡುತ್ತಿದ್ದುದು ಅದಕ್ಕೆ ಕಾರಣವಾಗಿತ್ತು. ರಾಜಕೀಯ ನಾಯಕ ಸಿದ್ಧರಾಮಯ್ಯನವರ ಸ್ನೇಹ, ದಲಿತ ಲೋಕದ ಸಾಹಿತ್ಯಕ ಘನತೆ, ಕನ್ನಡ ಕಾವ್ಯದ ದಿಕ್ಕು ಬದಲಿಸಿದ ಖಂಡಕಾವ್ಯ… ಇದ್ಯಾವುದೂ ಸಿದ್ದಯ್ಯನವರನ್ನು ಅವರು ಏರಬೇಕಿದ್ದ ಎತ್ತರಕ್ಕೆ ಬೆಳೆಸಲಿಲ್ಲ; ಬೇರೆ ಯಾರಿಗಾದರೂ ಇಂಥಾ ಒಂದೇ ಒಂದು ಸಾಧ್ಯತೆ ಇದ್ದರೂ ಪ್ರಾಧಿಕಾರಗಳ ಅಧ್ಯಕ್ಷಗಿರಿ, ಎಂಎಲ್‍ಸಿ ಪಟ್ಟ ಸಿಕ್ಕಿಬಿಡುತ್ತಿತ್ತು. ಸಿದ್ದಯ್ಯನವರು ಅಂಥಾ ಆಸೆಯನ್ನೇನೋ ಇಟ್ಟುಕೊಂಡಿದ್ದರೂ ಅದಕ್ಕೆ ಬೇಕಾದ ಶ್ರಮ ಹಾಕಲಿಲ್ಲ; ಬದಲಿಗೆ ನಿಷ್ಠುರವಾಗಿ ಮಾತನಾಡುವುದನ್ನು ಹೆಚ್ಚು ಮಾಡಿದರು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದಾಗ ಅವರಿಂದ ದೂರವೇ ಉಳಿದರು.

ಇತ್ತ ಕರ್ನಾಟಕದಲ್ಲಿ ದಲಿತ ಯುವಜನತೆಯಲ್ಲಿ ಎಡ – ಬಲದ ಅಂತರ, ಪರಸ್ಪರ ಅಸಹನೆ ಹೆಚ್ಚುತ್ತಿದ್ದಂತೆ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚತೊಡಗಿದವು. ಅಲ್ಲಲ್ಲಿ ಬಿಡಿ ಬಿಡಿ ಪ್ರತಿಭಟನೆಗಳು ನಡೆದರೂ ಎಪ್ಪತ್ತರ ದಶಕದ ಕಾವು ಕಾಣಲೇ ಇಲ್ಲ. ಇದನ್ನು ಸರಿಯಾದ ದಾರಿಯಲ್ಲಿ ನಡೆಸಬೇಕಾದ ಹಿರಿಯರು ಸಿದ್ದಯ್ಯನವರೂ ಸೇರಿದಂತೆ ಪತ್ರಿಕಾ ಹೇಳಿಕೆಗಳಿಗಷ್ಟೇ ಸೀಮಿತವಾದರು. ದಲಿತ ರಾಜಕಾರಣಿ ಜಿ.ಪರಮೇಶ್ವರ್ ಮೇಲಿನ ಸಿದ್ದಯ್ಯನವರ ಸಿಟ್ಟಿಗೆ ಕೆಲವರು ಎಡ -ಬಲದ ಬೋರ್ಡು ನೇತುಹಾಕಿದರೂ ದಲಿತ ಸಾಹಿತ್ಯ ಮತ್ತು ಚಳವಳಿಯ ವಲಯ ಅದನ್ನೇನೂ ಗಂಭೀರವಾಗಿ ಪರಿಗಣಿಸಲಿಲ್ಲ; ಯಾಕೆಂದರೆ ಪರಮೇಶ್ವರ್ ವಿಷಯದಲ್ಲಿ ಸಿದ್ದಯ್ಯನವರ ಸಿಟ್ಟು ಸಕಾರಣವಾಗಿತ್ತು. ಆನಂತರ ಅದು ‘ಕಾಂಗ್ರೆಸ್ಸನ್ನು ಗೆಲ್ಲಿಸುತ್ತೇವೆ; ಪರಮೇಶ್ವರರನ್ನು ಸೋಲಿಸುತ್ತೇವೆ’ ಎಂಬ ಘೋಷವಾಕ್ಯವಾಗುವ ಅತಿಗೆ ಹೋಯಿತು. ಇದು ಮಾದಿಗ ಸಮುದಾಯದವರೇ ಆದ ಆಂಜಿನೇಯ ಅವರ ಸೋಲಿಗೂ ಕಾರಣವಾಯಿತು. ಸದಾಶಿವ ಆಯೋಗದ ವರದಿಯನ್ನು ಜನತೆಯ ಮುಂದೆ ಇಡಿ; ಅದನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಎಂದು ಮಾದಿಗ ಬಂಧುಗಳು ನಡೆಸಿದ ಹೋರಾಟಕ್ಕೆ ಸಿದ್ದಯ್ಯ ಮತ್ತು ಸಿದ್ದರಾಮಯ್ಯನವರ ಸ್ನೇಹ ಹೆಗಲು ನೀಡಲಿಲ್ಲ. ಇದಕ್ಕೆ ಆ ಹೋರಾಟದ ಮುಂಚೂಣಿಯಲ್ಲಿದ್ದ ಕೆಲವರು ಬಿಜೆಪಿ ಸಖ್ಯದಲ್ಲಿದ್ದಾರೆ ಅನ್ನುವ ಸಿದ್ದಯ್ಯನವರ ಕೋಪ ಕಾರಣವಿರಬಹುದು. ಸ್ವಾತಂತ್ರ್ಯ ಉದ್ಯಾನದ ಹತ್ತಿರ ನಡೆಯುತ್ತಿದ್ದ ಮಾದಿಗರ ಹೋರಾಟಕ್ಕೆ ಪ್ರತಿದಿನ ಹಾಜರಾಗುತ್ತಿದ್ದ ಸಿದ್ದಯ್ಯನವರನ್ನು ಹೊರಗೇ ಓಡಾಡಿಕೊಂಡು ಹೋಗುವಂತೆ ಮಾಡಿದ್ದು ಆ ಹೋರಾಟಗಾರರ ದೊಡ್ಡ ನಷ್ಟ. ಒಂದು ದಿನ ಪ್ರತಿಭಟನೆಯ ಪೆಂಡಾಲಿನ ಹೊರಗೆ ಬಿಸಿಲಲ್ಲಿ ನಿಂತಿದ್ದ ಸಿದ್ದಯ್ಯನವರು ಆ ಹೋರಾಟ ಕುರಿತು ರೂಪಕದ ಭಾಷೆಯಲ್ಲಿ ಮಾತನಾಡಿದ್ದು ನನಗಿನ್ನೂ ನೆನಪಿದೆ. ಆವತ್ತು ‘ಯಾಕಣ್ಣಾ ಬಿಸಿಲಲ್ಲಿ ನಿಂತಿದಿರಾ’ ಎಂದು ಕೇಳಿದ ನನ್ನ ಕೆನ್ನೆ ಹಿಂಡಿ ನಕ್ಕಿದ್ದರು. ಅದಾದ ನಂತರ ತುಮಕೂರಿನ ಮಾದಿಗ ಬಂಧುಗಳು ನಡೆಸಿದ ಅದೇ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಇದನ್ನು ಕಂಡು ಅವರಿಗೆ ಸಮುದಾಯದ ಮೇಲಿದ್ದ ಕಾಳಜಿ ದೊಡ್ಡದು ಎಂದು ನಾವು ಗೆಳೆಯರು ಮಾತಾಡಿಕೊಂಡಿದ್ದೆವು.

ಸಿದ್ದಯ್ಯನವರು ಎಲ್ಲರಂತೆ ಮಿತಿಗಳಿದ್ದ ಮನುಷ್ಯ. ಸಾಹಿತ್ಯ ಮತ್ತು ಚಳವಳಿ ಎರಡರಲ್ಲಿ ‘ಸಾಹಿತಿ’ ಎಂದು ಗುರ್ತಿಸಿಕೊಳ್ಳಲು ಅವರು ಆಸೆ ಪಡುತ್ತಿದ್ದ ಹಾಗೆ, ಕನ್ನಡ ಸಾಹಿತ್ಯ ಸಮಾಜ ಅವರನ್ನು ಒಬ್ಬ ‘ಸಾಹಿತಿ’ಯಾಗಿಯೇ ನೋಡಲು ಆಸೆ ಪಡುತ್ತಿತ್ತು. ಇದಕ್ಕೆ ಕಾರಣ ಅವರಿಗಿದ್ದ ಓದಿನ ವಿಸ್ತಾರ ಮತ್ತು ಕಾವ್ಯದ ಮೇಲಿದ್ದ ಆಕರ್ಷಣೆ. ಇದರಿಂದಾಗಿ ಕೇವಲ ಬೀದಿಗಳಲ್ಲಿ ಧಿಕ್ಕಾರ ಕೂಗಿಕೊಂಡು ಬದುಕು ಮುಗಿಸುತ್ತಿದ್ದ ನೂರಾರು ದಲಿತ ಯುವಕ ಯುವತಿಯರನ್ನು ಚಳವಳಿ, ಸಾಹಿತ್ಯ ಮತ್ತು ಅಕಾಡೆಮಿಕ್ ನೆಲೆಗಳಲ್ಲಿ ನಡೆಯುವಂತೆ ನೋಡಿಕೊಂಡರು. ಇದರ ಪರಿಣಾಮವಾಗಿ ಅವರನ್ನು ಪ್ರೀತಿಸುವ ದಲಿತ ಹುಡುಗ ಹುಡುಗಿಯರು ಹೋರಾಟ, ಸಾಹಿತ್ಯ ಎರಡರಲ್ಲೂ ಸಮರ್ಥವಾಗಿ ಹೆಜ್ಜೆ ಇಡುವಂತಾಗಿದೆ.

ಈಗ ಸಿದ್ದಯ್ಯನವರು ಕನ್ನಡ ಸಾಹಿತ್ಯಕ್ಕೆ ಹೇಗೋ ಹಾಗೆ ದಲಿತ ಚಳವಳಿಯ ಹಾದಿಯೂ ಆಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...