Homeಕರ್ನಾಟಕಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

 

 

ದೇಶದ ರಾಜಕೀಯ ವಿದ್ಯಮಾನಗಳಲ್ಲಿ ಮಹತ್ತರವಾದ ಬದಲಾವಣೆಗಳು ಸಂಭವಿಸುವ ಸೂಚನೆಗಳು ಕಾಣಿಸುತ್ತಿವೆ. ಬಹಳಷ್ಟು ಚುನಾವಣಾ ವಿಶ್ಲೇಷಕರ ಪ್ರಕಾರ ಈ ಬಾರಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟವಾದ ಬಹುಮತ ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತೆ ಯಾವುದಾದರೂ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಸಾಮಾನ್ಯವಾಗಿ ಯು.ಪಿ.ಎ ಅಥವಾ ಎನ್.ಡಿ.ಎ ಕೂಟ ಅಧಿಕಾರ ವಹಿಸಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಚುನಾವಣೆ ಮುಗಿಯುತ್ತ ಬಂದಂತೆ ಗೆಲುವು ಸೋಲಿನ ಲೆಕ್ಕಾಚಾರಗಳ ಮೂಲಕ ಯಾವ ಪಕ್ಷ ಯಾವ ಒಕ್ಕೂಟದ ಜೊತೆ ಹೋಗಲಿದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆ.ಸಿ.ಆರ್) ಪ್ರಾದೇಶಿಕ ಪಕ್ಷಗಳ ಹೊಸ ಒಕ್ಕೂಟವೊಂದನ್ನು ರಚಿಸಲು ಅಖಾಡಕ್ಕಿಳಿದಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿದ್ದಾರೆ.

ಕೇರಳ ಮತ್ತು ತಮಿಳುನಾಡು ದೇವಸ್ಥಾನಗಳ ಪ್ರವಾಸದ ಭಾಗವಾಗಿ ನಿನ್ನೆ ಮಧ್ಯಾಹ್ನ ಹೈದರಾಬಾದ್‍ನಿಂದ ಹೊರಟ ಕೆಸಿಆರ್ ಸಂಜೆ 6 ಗಂಟೆಗೆ ಸರಿಯಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತನ್ನ ಕನಸಿನ ‘ಫೆಡರಲ್ ಫ್ರಂಟ್’ನ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳು ಒಂದಾಗಿ ಒಕ್ಕೂಟವೊಂದನ್ನು ರಚಿಸಿಕೊಂಡು ಸರ್ಕಾರವನ್ನು ನಡೆಸಿದರೆ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಹಿತಾಸಕ್ತಿಗಳನ್ನು ಹತ್ತಿಕ್ಕುವ ಧೋರಣೆಯನ್ನು ಕಡಿಮೆ ಮಾಡಬಹುದು ಎಂಬ ಚರ್ಚೆ ಹೊಸದಲ್ಲ.

ಕೆಸಿಆರ್ 2018ರ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೊದಲಬಾರಿಗೆ ಫೆಡರಲ್ ಫ್ರೆಂಟ್ ಎಂಬ ವಿಷಯವನ್ನು ಎತ್ತಿದ್ದರು. ಆ ಚುನಾವಣೆಯಲ್ಲಿ ನಾವು ಬಹುಮತ ಪಡೆಯಲಿದ್ದೇವೆ ಎಂದು ಕೆಸಿಆರ್ ದೃಢವಾಗಿ ಹೇಳುತ್ತಿದ್ದರೂ, ಎಲ್ಲಾ ಸಮೀಕ್ಷೆಗಳು ಟಿ.ಆರ್.ಎಸ್ ಪಕ್ಷದ ವಿರುದ್ದವೇ ಇದ್ದವು. ಹೀಗಿದ್ದೂ 3/2ರಷ್ಟು ಬಹುಮತದೊಂದಿಗೆ ಅವರು ಗೆದ್ದರು. ಆಗ ರಾಷ್ಟ್ರೀಯ ಮಾಧ್ಯಮಗಳು ಇದರ ಬಗ್ಗೆ ಗಮನ ಹರಿಸಿ ಮಾತನಾಡಿಸಲು ಆರಂಭಿಸಿದ್ದವು. ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳೇ ಮುಖ್ಯವಾಗಲಿವೆ. 2019ರ ಚುನಾವಣೆಯಲ್ಲಿ ಟಿ.ಆರ್.ಎಸ್ ಮುಂಚೂಣಿಯಲ್ಲಿ ನಿಂತು ಫೆಡರಲ್ ಫ್ರಂಟ್ ರಚನೆಯಾಗಲಿದೆ ಎಂಬರ್ಥದಲ್ಲಿ ಬಲವಾಗಿ ಹೇಳಿದ್ದರು. ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ 150ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ, ಕಾಂಗ್ರೆಸ್ ಕೂಡ 100 ಸೀಟುಗಳ ಅಂತರದಲ್ಲಿ ನಿಲ್ಲಲಿದೆ ಎಂದಿದ್ದರು. ಈ ಬಾರಿ 17 ಲೋಕಸಭಾ ಸ್ಥಾನಗಳಲ್ಲಿ ಟಿಆರ್ ಎಸ್ 16 ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಮತ್ತೊಂದು ಸ್ಥಾನ ಟಿಆರ್.ಎಸ್‍ನ ಮೈತ್ರಿ ಪಕ್ಷ ಎ.ಐ.ಎಮ್.ಐ.ಮ್‍ಗೆ ಬಿಟ್ಟುಕೊಡಲಾಗಿತ್ತು.

ತೆಲಂಗಾಣದ ಚುನಾವಣೆಯನ್ನು ಮುಗಿಸಿಕೊಂಡ ಕೆ.ಸಿ.ಆರ್ ಈಗ ಫೆಡರಲ್ ಫ್ರಂಟ್‍ಗಾಗಿ ಅಖಾಡಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕೇರಳದಿಂದ ತಮಿಳುನಾಡಿಗೆ ಹೊರಟು ಡಿ.ಎಮ್.ಕೆ ಪಕ್ಷದ ಅಧ್ಯಕ್ಷ ಎಮ್.ಕೆ.ಸ್ಟಾಲಿನ್‍ರನ್ನು ಮೇ 13ಕ್ಕೆ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಇದರ ಕುರಿತು ಕರ್ನಾಟಕ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೆಗೌಡ ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೂಡಲೇ ಅವರಿಬ್ಬರನ್ನೂ ಭೇಟಿಯಾಗಿ ಹೊಸ ಒಕ್ಕೂಟದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಕೆ.ಸಿ.ಆರ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ನಾವು ನಿಜವಾದ ಸಂಯುಕ್ತ ಒಕ್ಕೂಟವೊಂದನ್ನು ರಚಿಸಲು ಯತ್ನಿಸುತ್ತಿದ್ದೇವೆ. ಇದು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ ಇಂದು ಇದು ಪ್ರಾರಂಭ ಮಾತ್ರ’ ಎಂದು ಹೇಳಿದ್ದನ್ನು ನೆನಪಿಸಿಕೊಳ್ಳಬಹುದು. ಇದಾದ ನಂತರ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್‍ರನ್ನು ಭುವನೇಶ್ವರ್‍ನಲ್ಲಿ, ಸ್ಟಾಲಿನ್‍ರನ್ನು ಚೆನ್ನೈನ ಅವರ ಮನೆಯಲ್ಲಿಯೇ ಭೇಟಿಯಾಗಿ ಒಕ್ಕೂಟದ ಬಗ್ಗೆ ಚರ್ಚಿಸಿದ್ದರು. ಕೆ.ಸಿ.ಆರ್ ಈಗ ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕಿಂಗ್ ಮೇಕರ್ ಆಗಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳ ಬಲವನ್ನು ತೋರಿಸಿ, ರಾಜಕಾರಣಕ್ಕೆ ಒಂದು ದಿಕ್ಕು ತೋರಿಸುವ ಯತ್ನ ನಡೆಯುತ್ತಿದೆ. ಫಲಿತಾಂಶ ಬಂದ ನಂತರದ ತೀರ್ಮಾನಗಳಿಗೆ ಕೆ.ಸಿ.ಆರ್ ಪ್ರಯತ್ನ ಪೂರಕವಾಗಲಿದೆಯಾ ಅಥವಾ ಇವರ ಪಕ್ಷವೇ ಒಂಟಿಯಾಗಲಿದೆಯಾ ಕಾದು ನೋಡಬೇಕಿದೆ.

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...