Homeಕರ್ನಾಟಕಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

 

 

ದೇಶದ ರಾಜಕೀಯ ವಿದ್ಯಮಾನಗಳಲ್ಲಿ ಮಹತ್ತರವಾದ ಬದಲಾವಣೆಗಳು ಸಂಭವಿಸುವ ಸೂಚನೆಗಳು ಕಾಣಿಸುತ್ತಿವೆ. ಬಹಳಷ್ಟು ಚುನಾವಣಾ ವಿಶ್ಲೇಷಕರ ಪ್ರಕಾರ ಈ ಬಾರಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟವಾದ ಬಹುಮತ ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತೆ ಯಾವುದಾದರೂ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಸಾಮಾನ್ಯವಾಗಿ ಯು.ಪಿ.ಎ ಅಥವಾ ಎನ್.ಡಿ.ಎ ಕೂಟ ಅಧಿಕಾರ ವಹಿಸಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಚುನಾವಣೆ ಮುಗಿಯುತ್ತ ಬಂದಂತೆ ಗೆಲುವು ಸೋಲಿನ ಲೆಕ್ಕಾಚಾರಗಳ ಮೂಲಕ ಯಾವ ಪಕ್ಷ ಯಾವ ಒಕ್ಕೂಟದ ಜೊತೆ ಹೋಗಲಿದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆ.ಸಿ.ಆರ್) ಪ್ರಾದೇಶಿಕ ಪಕ್ಷಗಳ ಹೊಸ ಒಕ್ಕೂಟವೊಂದನ್ನು ರಚಿಸಲು ಅಖಾಡಕ್ಕಿಳಿದಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿದ್ದಾರೆ.

ಕೇರಳ ಮತ್ತು ತಮಿಳುನಾಡು ದೇವಸ್ಥಾನಗಳ ಪ್ರವಾಸದ ಭಾಗವಾಗಿ ನಿನ್ನೆ ಮಧ್ಯಾಹ್ನ ಹೈದರಾಬಾದ್‍ನಿಂದ ಹೊರಟ ಕೆಸಿಆರ್ ಸಂಜೆ 6 ಗಂಟೆಗೆ ಸರಿಯಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತನ್ನ ಕನಸಿನ ‘ಫೆಡರಲ್ ಫ್ರಂಟ್’ನ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳು ಒಂದಾಗಿ ಒಕ್ಕೂಟವೊಂದನ್ನು ರಚಿಸಿಕೊಂಡು ಸರ್ಕಾರವನ್ನು ನಡೆಸಿದರೆ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಹಿತಾಸಕ್ತಿಗಳನ್ನು ಹತ್ತಿಕ್ಕುವ ಧೋರಣೆಯನ್ನು ಕಡಿಮೆ ಮಾಡಬಹುದು ಎಂಬ ಚರ್ಚೆ ಹೊಸದಲ್ಲ.

ಕೆಸಿಆರ್ 2018ರ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೊದಲಬಾರಿಗೆ ಫೆಡರಲ್ ಫ್ರೆಂಟ್ ಎಂಬ ವಿಷಯವನ್ನು ಎತ್ತಿದ್ದರು. ಆ ಚುನಾವಣೆಯಲ್ಲಿ ನಾವು ಬಹುಮತ ಪಡೆಯಲಿದ್ದೇವೆ ಎಂದು ಕೆಸಿಆರ್ ದೃಢವಾಗಿ ಹೇಳುತ್ತಿದ್ದರೂ, ಎಲ್ಲಾ ಸಮೀಕ್ಷೆಗಳು ಟಿ.ಆರ್.ಎಸ್ ಪಕ್ಷದ ವಿರುದ್ದವೇ ಇದ್ದವು. ಹೀಗಿದ್ದೂ 3/2ರಷ್ಟು ಬಹುಮತದೊಂದಿಗೆ ಅವರು ಗೆದ್ದರು. ಆಗ ರಾಷ್ಟ್ರೀಯ ಮಾಧ್ಯಮಗಳು ಇದರ ಬಗ್ಗೆ ಗಮನ ಹರಿಸಿ ಮಾತನಾಡಿಸಲು ಆರಂಭಿಸಿದ್ದವು. ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳೇ ಮುಖ್ಯವಾಗಲಿವೆ. 2019ರ ಚುನಾವಣೆಯಲ್ಲಿ ಟಿ.ಆರ್.ಎಸ್ ಮುಂಚೂಣಿಯಲ್ಲಿ ನಿಂತು ಫೆಡರಲ್ ಫ್ರಂಟ್ ರಚನೆಯಾಗಲಿದೆ ಎಂಬರ್ಥದಲ್ಲಿ ಬಲವಾಗಿ ಹೇಳಿದ್ದರು. ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ 150ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ, ಕಾಂಗ್ರೆಸ್ ಕೂಡ 100 ಸೀಟುಗಳ ಅಂತರದಲ್ಲಿ ನಿಲ್ಲಲಿದೆ ಎಂದಿದ್ದರು. ಈ ಬಾರಿ 17 ಲೋಕಸಭಾ ಸ್ಥಾನಗಳಲ್ಲಿ ಟಿಆರ್ ಎಸ್ 16 ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಮತ್ತೊಂದು ಸ್ಥಾನ ಟಿಆರ್.ಎಸ್‍ನ ಮೈತ್ರಿ ಪಕ್ಷ ಎ.ಐ.ಎಮ್.ಐ.ಮ್‍ಗೆ ಬಿಟ್ಟುಕೊಡಲಾಗಿತ್ತು.

ತೆಲಂಗಾಣದ ಚುನಾವಣೆಯನ್ನು ಮುಗಿಸಿಕೊಂಡ ಕೆ.ಸಿ.ಆರ್ ಈಗ ಫೆಡರಲ್ ಫ್ರಂಟ್‍ಗಾಗಿ ಅಖಾಡಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕೇರಳದಿಂದ ತಮಿಳುನಾಡಿಗೆ ಹೊರಟು ಡಿ.ಎಮ್.ಕೆ ಪಕ್ಷದ ಅಧ್ಯಕ್ಷ ಎಮ್.ಕೆ.ಸ್ಟಾಲಿನ್‍ರನ್ನು ಮೇ 13ಕ್ಕೆ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಇದರ ಕುರಿತು ಕರ್ನಾಟಕ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೆಗೌಡ ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೂಡಲೇ ಅವರಿಬ್ಬರನ್ನೂ ಭೇಟಿಯಾಗಿ ಹೊಸ ಒಕ್ಕೂಟದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಕೆ.ಸಿ.ಆರ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ನಾವು ನಿಜವಾದ ಸಂಯುಕ್ತ ಒಕ್ಕೂಟವೊಂದನ್ನು ರಚಿಸಲು ಯತ್ನಿಸುತ್ತಿದ್ದೇವೆ. ಇದು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ ಇಂದು ಇದು ಪ್ರಾರಂಭ ಮಾತ್ರ’ ಎಂದು ಹೇಳಿದ್ದನ್ನು ನೆನಪಿಸಿಕೊಳ್ಳಬಹುದು. ಇದಾದ ನಂತರ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್‍ರನ್ನು ಭುವನೇಶ್ವರ್‍ನಲ್ಲಿ, ಸ್ಟಾಲಿನ್‍ರನ್ನು ಚೆನ್ನೈನ ಅವರ ಮನೆಯಲ್ಲಿಯೇ ಭೇಟಿಯಾಗಿ ಒಕ್ಕೂಟದ ಬಗ್ಗೆ ಚರ್ಚಿಸಿದ್ದರು. ಕೆ.ಸಿ.ಆರ್ ಈಗ ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕಿಂಗ್ ಮೇಕರ್ ಆಗಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳ ಬಲವನ್ನು ತೋರಿಸಿ, ರಾಜಕಾರಣಕ್ಕೆ ಒಂದು ದಿಕ್ಕು ತೋರಿಸುವ ಯತ್ನ ನಡೆಯುತ್ತಿದೆ. ಫಲಿತಾಂಶ ಬಂದ ನಂತರದ ತೀರ್ಮಾನಗಳಿಗೆ ಕೆ.ಸಿ.ಆರ್ ಪ್ರಯತ್ನ ಪೂರಕವಾಗಲಿದೆಯಾ ಅಥವಾ ಇವರ ಪಕ್ಷವೇ ಒಂಟಿಯಾಗಲಿದೆಯಾ ಕಾದು ನೋಡಬೇಕಿದೆ.

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...