Homeಕರ್ನಾಟಕಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

 

 

ದೇಶದ ರಾಜಕೀಯ ವಿದ್ಯಮಾನಗಳಲ್ಲಿ ಮಹತ್ತರವಾದ ಬದಲಾವಣೆಗಳು ಸಂಭವಿಸುವ ಸೂಚನೆಗಳು ಕಾಣಿಸುತ್ತಿವೆ. ಬಹಳಷ್ಟು ಚುನಾವಣಾ ವಿಶ್ಲೇಷಕರ ಪ್ರಕಾರ ಈ ಬಾರಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟವಾದ ಬಹುಮತ ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತೆ ಯಾವುದಾದರೂ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಸಾಮಾನ್ಯವಾಗಿ ಯು.ಪಿ.ಎ ಅಥವಾ ಎನ್.ಡಿ.ಎ ಕೂಟ ಅಧಿಕಾರ ವಹಿಸಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಚುನಾವಣೆ ಮುಗಿಯುತ್ತ ಬಂದಂತೆ ಗೆಲುವು ಸೋಲಿನ ಲೆಕ್ಕಾಚಾರಗಳ ಮೂಲಕ ಯಾವ ಪಕ್ಷ ಯಾವ ಒಕ್ಕೂಟದ ಜೊತೆ ಹೋಗಲಿದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆ.ಸಿ.ಆರ್) ಪ್ರಾದೇಶಿಕ ಪಕ್ಷಗಳ ಹೊಸ ಒಕ್ಕೂಟವೊಂದನ್ನು ರಚಿಸಲು ಅಖಾಡಕ್ಕಿಳಿದಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿದ್ದಾರೆ.

ಕೇರಳ ಮತ್ತು ತಮಿಳುನಾಡು ದೇವಸ್ಥಾನಗಳ ಪ್ರವಾಸದ ಭಾಗವಾಗಿ ನಿನ್ನೆ ಮಧ್ಯಾಹ್ನ ಹೈದರಾಬಾದ್‍ನಿಂದ ಹೊರಟ ಕೆಸಿಆರ್ ಸಂಜೆ 6 ಗಂಟೆಗೆ ಸರಿಯಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತನ್ನ ಕನಸಿನ ‘ಫೆಡರಲ್ ಫ್ರಂಟ್’ನ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳು ಒಂದಾಗಿ ಒಕ್ಕೂಟವೊಂದನ್ನು ರಚಿಸಿಕೊಂಡು ಸರ್ಕಾರವನ್ನು ನಡೆಸಿದರೆ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಹಿತಾಸಕ್ತಿಗಳನ್ನು ಹತ್ತಿಕ್ಕುವ ಧೋರಣೆಯನ್ನು ಕಡಿಮೆ ಮಾಡಬಹುದು ಎಂಬ ಚರ್ಚೆ ಹೊಸದಲ್ಲ.

ಕೆಸಿಆರ್ 2018ರ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೊದಲಬಾರಿಗೆ ಫೆಡರಲ್ ಫ್ರೆಂಟ್ ಎಂಬ ವಿಷಯವನ್ನು ಎತ್ತಿದ್ದರು. ಆ ಚುನಾವಣೆಯಲ್ಲಿ ನಾವು ಬಹುಮತ ಪಡೆಯಲಿದ್ದೇವೆ ಎಂದು ಕೆಸಿಆರ್ ದೃಢವಾಗಿ ಹೇಳುತ್ತಿದ್ದರೂ, ಎಲ್ಲಾ ಸಮೀಕ್ಷೆಗಳು ಟಿ.ಆರ್.ಎಸ್ ಪಕ್ಷದ ವಿರುದ್ದವೇ ಇದ್ದವು. ಹೀಗಿದ್ದೂ 3/2ರಷ್ಟು ಬಹುಮತದೊಂದಿಗೆ ಅವರು ಗೆದ್ದರು. ಆಗ ರಾಷ್ಟ್ರೀಯ ಮಾಧ್ಯಮಗಳು ಇದರ ಬಗ್ಗೆ ಗಮನ ಹರಿಸಿ ಮಾತನಾಡಿಸಲು ಆರಂಭಿಸಿದ್ದವು. ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳೇ ಮುಖ್ಯವಾಗಲಿವೆ. 2019ರ ಚುನಾವಣೆಯಲ್ಲಿ ಟಿ.ಆರ್.ಎಸ್ ಮುಂಚೂಣಿಯಲ್ಲಿ ನಿಂತು ಫೆಡರಲ್ ಫ್ರಂಟ್ ರಚನೆಯಾಗಲಿದೆ ಎಂಬರ್ಥದಲ್ಲಿ ಬಲವಾಗಿ ಹೇಳಿದ್ದರು. ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ 150ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ, ಕಾಂಗ್ರೆಸ್ ಕೂಡ 100 ಸೀಟುಗಳ ಅಂತರದಲ್ಲಿ ನಿಲ್ಲಲಿದೆ ಎಂದಿದ್ದರು. ಈ ಬಾರಿ 17 ಲೋಕಸಭಾ ಸ್ಥಾನಗಳಲ್ಲಿ ಟಿಆರ್ ಎಸ್ 16 ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಮತ್ತೊಂದು ಸ್ಥಾನ ಟಿಆರ್.ಎಸ್‍ನ ಮೈತ್ರಿ ಪಕ್ಷ ಎ.ಐ.ಎಮ್.ಐ.ಮ್‍ಗೆ ಬಿಟ್ಟುಕೊಡಲಾಗಿತ್ತು.

ತೆಲಂಗಾಣದ ಚುನಾವಣೆಯನ್ನು ಮುಗಿಸಿಕೊಂಡ ಕೆ.ಸಿ.ಆರ್ ಈಗ ಫೆಡರಲ್ ಫ್ರಂಟ್‍ಗಾಗಿ ಅಖಾಡಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕೇರಳದಿಂದ ತಮಿಳುನಾಡಿಗೆ ಹೊರಟು ಡಿ.ಎಮ್.ಕೆ ಪಕ್ಷದ ಅಧ್ಯಕ್ಷ ಎಮ್.ಕೆ.ಸ್ಟಾಲಿನ್‍ರನ್ನು ಮೇ 13ಕ್ಕೆ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಇದರ ಕುರಿತು ಕರ್ನಾಟಕ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೆಗೌಡ ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೂಡಲೇ ಅವರಿಬ್ಬರನ್ನೂ ಭೇಟಿಯಾಗಿ ಹೊಸ ಒಕ್ಕೂಟದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಕೆ.ಸಿ.ಆರ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ನಾವು ನಿಜವಾದ ಸಂಯುಕ್ತ ಒಕ್ಕೂಟವೊಂದನ್ನು ರಚಿಸಲು ಯತ್ನಿಸುತ್ತಿದ್ದೇವೆ. ಇದು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ ಇಂದು ಇದು ಪ್ರಾರಂಭ ಮಾತ್ರ’ ಎಂದು ಹೇಳಿದ್ದನ್ನು ನೆನಪಿಸಿಕೊಳ್ಳಬಹುದು. ಇದಾದ ನಂತರ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್‍ರನ್ನು ಭುವನೇಶ್ವರ್‍ನಲ್ಲಿ, ಸ್ಟಾಲಿನ್‍ರನ್ನು ಚೆನ್ನೈನ ಅವರ ಮನೆಯಲ್ಲಿಯೇ ಭೇಟಿಯಾಗಿ ಒಕ್ಕೂಟದ ಬಗ್ಗೆ ಚರ್ಚಿಸಿದ್ದರು. ಕೆ.ಸಿ.ಆರ್ ಈಗ ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕಿಂಗ್ ಮೇಕರ್ ಆಗಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳ ಬಲವನ್ನು ತೋರಿಸಿ, ರಾಜಕಾರಣಕ್ಕೆ ಒಂದು ದಿಕ್ಕು ತೋರಿಸುವ ಯತ್ನ ನಡೆಯುತ್ತಿದೆ. ಫಲಿತಾಂಶ ಬಂದ ನಂತರದ ತೀರ್ಮಾನಗಳಿಗೆ ಕೆ.ಸಿ.ಆರ್ ಪ್ರಯತ್ನ ಪೂರಕವಾಗಲಿದೆಯಾ ಅಥವಾ ಇವರ ಪಕ್ಷವೇ ಒಂಟಿಯಾಗಲಿದೆಯಾ ಕಾದು ನೋಡಬೇಕಿದೆ.

ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...