Homeಮುಖಪುಟಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

ಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

- Advertisement -
- Advertisement -

ತೆಲಂಗಾಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದಿಂದ, ಅದರ ಸ್ಥಾಪಕ ಕೆ. ಚಂದ್ರಶೇಖರ್ ರಾವ್ ಅವರ ಮಗಳನ್ನು ಅಮಾನತುಗೊಳಿಸಲಾಗಿದೆ. ಅಪ್ಪ ಸ್ಥಾಪಿಸಿದ, ಸಹೋದರ ಅಧ್ಯಕ್ಷನಾಗಿರುವ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಕೆ.ಕವಿತಾ ಅಮಾನತುಗೊಂಡಿದ್ದಾರೆ.

ಅಮಾನತುಗೊಂಡ ಬೆನ್ನಲ್ಲೇ, ಬುಧವಾರ (ಸೆ.3) ಹೈದಾರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕವಿತಾ ಅವರು, ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಬಿಆರ್‌ಎಸ್‌ 2014ರಿಂದ 2024ರವರೆಗೆ 10 ವರ್ಷಗಳ ಕಾಲ ತೆಲಂಗಾಣದಲ್ಲಿ ಆಡಳಿತ ನಡೆಸಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯದ ಹೋರಾಟದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ ಬಿಆರ್‌ಎಸ್‌. ಆರಂಭದಲ್ಲಿ ಟಿಆರ್‌ಎಸ್‌ (ತೆಲಂಗಾಣ ರಾಷ್ಟ್ರ ಸಮಿತಿ) ಎಂದಿದ್ದ ಪಕ್ಷದ ಹೆಸರನ್ನು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಆರ್‌ಎಸ್‌ ಎಂದು ಬದಲಾಯಿಸಲಾಯಿತು. ಬಿಆರ್‌ಎಸ್‌ ಪಕ್ಷದ ಸ್ಥಾಪಕ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) 10 ವರ್ಷದ ತೆಲಂಗಾಣದ ಮುಖ್ಯಮಂತ್ರಿ ಆಗಿದ್ದರು. ಅವರ ಮಗ ಕೆ.ಟಿ ರಾಮರಾವ್ (ಕೆಟಿಆರ್‌) ಪೌರಾಡಳಿತ ಮತ್ತು ಐಟಿಬಿಟಿ ಸಚಿವರಾಗಿದ್ದರು. ಪ್ರಸ್ತುತ ಕೆಟಿಆರ್ ಬಿಆರ್‌ಎಸ್‌ ಪಕ್ಷದ ತೆಲಂಗಾಣ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿದ್ದಾರೆ. ಕೆಸಿಆರ್‌ ಪಕ್ಷದ ರಾಷ್ಟ್ರೀಯ ನಾಯಕ ಎನಿಸಿಕೊಂಡಿದ್ದಾರೆ.

ಕವಿತಾ ಅವರು ಬಿಆರ್‌ಎಸ್‌ ತೊರೆದ ಬಳಿಕ ತಮ್ಮದೇ ಹೊಸ ಪಕ್ಷ ಕಟ್ಟುತ್ತಾರೆಯೇ ಎಂದು ಸ್ಪಷ್ಟವಾಗಿಲ್ಲ. ಆದರೆ, “ತಾನು ಬೇರೆ ಪಕ್ಷಕ್ಕೆ ಸೇರುವ ಬಗ್ಗೆ ಯೋಚನೆ ಮಾಡುವುದಿಲ್ಲ. ನನ್ನ ಜೀವನದ ಕಳೆದ 20 ವರ್ಷಗಳಿಂದ ನಾನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ಕೆಲಸ ಮಾಡಿದ್ದೇನೆ. ನಾನು ತೆಲಂಗಾಣ ಆಂದೋಲನಕ್ಕೆ ಬಂದಾಗ 27 ವರ್ಷ ವಯಸ್ಸಾಗಿತ್ತು, ಈಗ 47 ವರ್ಷ. ನಾನು ನನ್ನ ಜೀವನದ ಬಹುಭಾಗವನ್ನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ನೀಡಿದ್ದೇನೆ” ಎಂದು ಕವಿತಾ ಹೇಳಿದ್ದಾರೆ.

“ಕಲ್ವಕುಂಟ್ಲ ಕುಟುಂಬ (ಕೆಸಿಆರ್‌ ಕುಟುಂಬ) ಮತ್ತು ಬಿಆರ್‌ಎಸ್ ಅನ್ನು ಒಡೆಯಲು ಪಿತೂರಿ ನಡೆಯುತ್ತಿದೆ” ಎಂದ ಕವಿತಾ, “ನಿಮ್ಮನ್ನು ಯಾರು ಸುತ್ತುವರಿದಿದ್ದಾರೆ ಎಂದು ಪರಿಶೀಲಿಸಿಕೊಳ್ಳಿ” ಎಂದು ತಂದೆ ಕೆಸಿಆರ್ ಅವರಿಗೆ ಮನವಿ ಮಾಡಿದ್ದಾರೆ. ಪಕ್ಷದಿಂದ ತನ್ನನ್ನು ಹೊರಹಾಕುವಲ್ಲಿ ತನ್ನ ಸೋದರಸಂಬಂಧಿಗಳು ಮತ್ತು ಬಿಆರ್‌ಎಸ್ ನಾಯಕರಾದ ಟಿ. ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಪಾತ್ರವಿದೆ ಎಂದು ಆರೋಪಿಸಿದ್ದಾರೆ.

ಈ ಇಬ್ಬರ ವಿರುದ್ದ ದೊಡ್ಡ ಮಟ್ಟದ ಭ್ರಷ್ಟಾಚಾರದ ಆರೋಪ ಹೊರಿಸಿದ ಕವಿತಾ, “ಸುವರ್ಣ ತೆಲಂಗಾಣ ಎಂದರೆ ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಅವರ ಮನೆಗಳಿಗೆ ಚಿನ್ನ ತಲುಪುವುದು ಎಂದಲ್ಲ” ಎಂದು ಕಿಡಿಕಾರಿದ್ದಾರೆ.

ಬಿಆರ್‌ಎಸ್‌ ಸರ್ಕಾರದಲ್ಲಿ ಹರೀಶ್ ರಾವ್ ತೆಲಂಗಾಣದ ನೀರಾವರಿ ಸಚಿವರಾಗಿದ್ದರು. ಸಂತೋಷ್ ಕುಮಾರ್ ಪಕ್ಷದ ಮಾಜಿ ರಾಜ್ಯಸಭಾ ಸಂಸದರಾಗಿದ್ದಾರೆ.

“ಇಂದು ನನ್ನನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ. ನಾಳೆ ಕೆಸಿಆರ್ ಸೇರಿದಂತೆ ಯಾರಿಗೂ ಬೇಕಾದರು ಇದೇ ಪರಿಸ್ಥಿತಿ ಎದುರಾಗಬಹುದು. ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲದಿದ್ದರೆ ಹರೀಶ್ ರಾವ್ ಸಂಪತ್ತು ಸಂಗ್ರಹಿಸಿದ್ದು ಹೇಗೆ? ಹರೀಶ್ ರಾವ್ ಭ್ರಷ್ಟಾಚಾರದ ಹಣವನ್ನು ತಮ್ಮ ಚುನಾವಣೆಗೆ ಬಳಸಿಕೊಂಡಿದ್ದಾರೆ” ಎಂದು ಕವಿತಾ ಗುಡುಗಿದ್ದಾರೆ.

ತನ್ನ ಸಹೋದರ ಹಾಗೂ ಬಿಆರ್‌ಎಸ್‌ನ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಅವರು ಪಕ್ಷದಲ್ಲಿನ ತನ್ನ ಸಮಸ್ಯೆಗಳೇನು ಎಂದು ಕೇಳಿಲ್ಲ. ಅವರ ತಂದೆ ಕೂಡ ಬಿಆರ್‌ಎಸ್‌ನಿಂದ ಮುಂದಿನ ಬಾರಿ ಉಚ್ಚಾಟನೆಗೆ ಒಳಗಾಗಬಹುದು ಎಂದು ಕವಿತಾ, “ಪಕ್ಷದ ಪ್ರಧಾನ ಕಚೇರಿಯಾದ ತೆಲಂಗಾಣ ಭವನದಲ್ಲಿ ಕುಳಿತು, ಪಕ್ಷದ ಮಹಿಳಾ ನಾಯಕಿಯಾಗಿ, ಪಕ್ಷದಲ್ಲಿ ನನ್ನನ್ನು ಗುರಿಯಾಗಿಸಿಕೊಂಡಿರುವ ದುಷ್ಟ ಶಕ್ತಿಗಳಿವೆ ಎಂದು ನಾನು ಹೇಳಿದ್ದೆ. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಟಿಆರ್‌ ಈ ಬಗ್ಗೆ ನನಗೆ ಕರೆ ಮಾಡಿ ವಿಚಾರಿಸಬೇಕಿತ್ತು. ಅವರು ಏಕೆ ನನ್ನನ್ನು ಸಂಪರ್ಕಿಸಿಲ್ಲ? ನನ್ನನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ನಾನು ಮೊದಲ ಬಾರಿಗೆ ವಿಷಯ ಪ್ರಸ್ತಾಪಿಸಿ 103 ದಿನಗಳೇ ಕಳೆದಿವೆ ಆದರೂ ಅವರು ಒಂದು ಮಾತು ಏಕೆ ಕೇಳಿಲ್ಲ?” ಎಂದು ಕವಿತಾ ಪ್ರಶ್ನೆ ಹಾಕಿದ್ದಾರೆ.

“ಕೆಸಿಆರ್ ಮತ್ತು ಕೆಟಿಆರ್ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಎ. ರೇವಂತ್ ರೆಡ್ಡಿ ಅವರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸ್ಥಾಪಿತ ಹಿತಾಸಕ್ತಿಗಳು ಸುತ್ತುವರೆದಿವೆ. ಕೆಟಿಆರ್ ಮತ್ತು ಕೆಸಿಆರ್ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತಿದ್ದರೂ, ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಕಾಂಗ್ರೆಸ್ ಬೆಂಬಲವನ್ನು ಪಡೆಯುತ್ತಿದ್ದಾರೆ. ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಅವರ ವಿಷಯಕ್ಕೆ ಬಂದಾಗ ಮೌನವಾಗುತ್ತಿದೆ” ಎಂದು ಕವಿತಾ ಆರೋಪಿಸಿದ್ದಾರೆ.

ತಮ್ಮ ಎನ್‌ಜಿಒ ಮತ್ತು ಸಾಂಸ್ಕೃತಿಕ ಸಂಘಟನೆಯಾದ ತೆಲಂಗಾಣ ಜಾಗೃತಿಯ ಕಚೇರಿಯಲ್ಲಿ ಬೆಂಬಲಿಗರ ಗುಂಪುಗಳ ನಡುವೆ ಕುಳಿತು ಮಾತನಾಡಿದ ಕವಿತಾ, “ನಾನು ಪಕ್ಷಕ್ಕಾಗಿ ನಿರಂತರವಾಗಿ ಕೆಲಸ ಮಾಡಿದ್ದೇನೆ. ತಳಮಟ್ಟದಲ್ಲಿ ಪಕ್ಷವನ್ನು ಕಟ್ಟಿದ್ದೇನೆ. ಗುರುಕುಲ ಶಾಲೆಗಳು, ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಹಲವಾರು ದುರ್ಬಲ ವರ್ಗಗಳಿಗಾಗಿ ಕೆಲಸ ಮಾಡಿದ್ದೇನೆ. ನನ್ನ ಈ ಕೆಲಸಗಳಲ್ಲಿ ಪಕ್ಷ ವಿರೋಧಿ ಯಾವುದು?” ಎಂದು ಕವಿತಾ ಕೇಳಿದ್ದಾರೆ.

ಮಂಗಳವಾರ (ಸೆ.2) ಕವಿತಾ ಅವರಿಗೆ ನೀಡಲಾದ ಬಿಆರ್‌ಎಸ್‌ನ ಶಿಸ್ತು ಸಮಿತಿಯ ನೋಟಿಸ್‌ನಲ್ಲಿ, ಅವರ ಮೇಲೆ ‘ಪಕ್ಷ ವಿರೋಧಿ ಚಟುವಟಿಕೆಗಳ’ ಆರೋಪ ಹೊರಿಸಲಾಗಿತ್ತು. ತನ್ನ ತಂದೆ ಮಾರ್ಗದರ್ಶನ ನೀಡಿದಂತೆಯೇ ತಾನು ‘ಜನರ ತೆಲಂಗಾಣ’ ಮತ್ತು ‘ಸುವರ್ಣ ತೆಲಂಗಾಣ’ಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದಿರುವ ಕವಿತಾ, “ಇವುಗಳು ಪಕ್ಷ ವಿರೋಧಿ ಚಟುವಟಿಕೆಗಳಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ಭ್ರಷ್ಟಾಚಾರದ ಸಿಬಿಐ ತನಿಖೆ

ಕಾಳೇಶ್ವರಂ ಏತ ನೀರಾವರಿ ಯೋಜನೆ (Kaleshwaram Lift Irrigation Project – KLIP) ತೆಲಂಗಾಣದ ಅತಿದೊಡ್ಡ ಮತ್ತು ದುಬಾರಿ ಏತ ನೀರಾವರಿ ಯೋಜನೆಯಾಗಿದೆ. ಇದನ್ನು ಗೋದಾವರಿ ನದಿಯ ಮೇಲೆ ನಿರ್ಮಿಸಲಾಗಿದೆ. ಈ ಯೋಜನೆಯ ಉದ್ದೇಶ ತೆಲಂಗಾಣದ ವಿವಿಧ ಜಿಲ್ಲೆಗಳಿಗೆ ನೀರಾವರಿ, ಕುಡಿಯುವ ನೀರು ಮತ್ತು ಕೈಗಾರಿಕಾ ಬಳಕೆಗೆ ನೀರು ಒದಗಿಸುವುದಾಗಿದೆ. ಆದರೆ, ಈ ಯೋಜನೆಯು ತಾಂತ್ರಿಕ ದೋಷಗಳು, ಆರ್ಥಿಕ ಅಕ್ರಮಗಳು ಮತ್ತು ರಾಜಕೀಯ ವಿವಾದಗಳಿಂದಾಗಿ ಗಮನ ಸೆಳೆದಿದೆ.

ಬಿಆರ್‌ಎಸ್‌ ಸರ್ಕಾರ ಮಹತ್ವಕಾಂಕ್ಷಿ ಕಾಳೇಶ್ವರಂ ಏತ ನೀರಾವರಿಯ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ, ಕವಿತಾ ಅವರು ತನ್ನ ವಿರುದ್ದ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮಾಜಿ ನೀರಾವರಿ ಸಚಿವ ಹರೀಶ್ ರಾವ್ ವಿರುದ್ದ ಆರೋಪಗಳನ್ನು ಹೊರಿಸಲಾಗಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣದ ಹಾಲಿ ಸರ್ಕಾರವು ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ.

ಆಗಸ್ಟ್ 31, 2025 ರಂದು ತೆಲಂಗಾಣ ವಿಧಾನಸಭೆಯಲ್ಲಿ 10 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಚರ್ಚೆಯ ನಂತರ, ಸೆಪ್ಟೆಂಬರ್ 1, 2025 ರಂದು ಸಿಬಿಐ ತನಿಖೆಗೆ ಆದೇಶ ಹೊರಡಿಸಲಾಗಿದೆ. ಜುಲೈ 31, 2025 ರಂದು ನ್ಯಾಯಮೂರ್ತಿ ಪಿ.ಸಿ. ಘೋಷ್ ಆಯೋಗ ಸಲ್ಲಿಸಿದ ವರದಿಗಳನ್ನು ಆಧರಿಸಿ ತನಿಖೆಗೆ ಆದೇಶ ಮಾಡಲಾಗಿದೆ. ಆಗಸ್ಟ್ 31, 2025ರಂದು ವಿಧಾನಸಭೆಯಲ್ಲಿ ವರದಿಯನ್ನು ಮಂಡಿಸಲಾಗಿತ್ತು.

ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ನೇತೃತ್ವದ ಆಯೋಗವು, ಮೇಡಿಗಡ್ಡ, ಅಣ್ಣಾರಾಮ್ ಮತ್ತು ಸುಂಡಿಲ್ಲಾ ಬ್ಯಾರೇಜ್‌ಗಳ ನಿರ್ಮಾಣದಲ್ಲಿ ನಿರ್ಲಕ್ಷ್ಯ, ಆರ್ಥಿಕ ಅಕ್ರಮಗಳು ಮತ್ತು ಕಳಪೆ ಯೋಜನೆ ಸೇರಿದಂತೆ ಗಮನಾರ್ಹ ಲೋಪಗಳನ್ನು ಗುರುತಿಸಿದೆ. ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (NDSA) ವಿನ್ಯಾಸ ದೋಷಗಳು, ಕಳಪೆ ಗುಣಮಟ್ಟದ ನಿಯಂತ್ರಣ ಮತ್ತು ನಿರ್ಮಾಣ ನ್ಯೂನತೆಗಳನ್ನು ವರದಿ ಮಾಡಿದೆ, ವಿಶೇಷವಾಗಿ ಅಕ್ಟೋಬರ್ 21, 2023 ರಂದು ಮೇಡಿಗಡ್ಡ ಬ್ಯಾರೇಜ್‌ನಲ್ಲಿ ಆರು ಕಂಬಗಳು ಮುಳುಗಿದ್ದ ವಿಷಯವನ್ನು ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕವಿತಾ ಬಂಧನ

ದೆಹಲಿ ಮದ್ಯ ನೀತಿ ಅಥವಾ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೆ. ಕವಿತಾ ಅವರನ್ನು ಮಾರ್ಚ್ 15, 2024ರಂದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ನಂತರ, ದೆಹಲಿ ಮದ್ಯ ನೀತಿ ಹಗರಣಕ್ಕೆ ಹೊಂದಿಕೊಂಡಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಕೆ. ಕವಿತಾ ಅವರನ್ನು ತಿಹಾರ್ ಜೈಲಿನಿಂದ ಬಂಧಿಸಿತ್ತು. ಇಡಿ ಬಂಧನದ ನಂತರ  ನ್ಯಾಯಾಂಗ ಬಂಧನದಲ್ಲಿದ್ದ ಕವಿತಾ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು.

ಸರಿಸುಮಾರು ಐದು ತಿಂಗಳುಗಳ ಕಾಲ ಬಂಧನದಲ್ಲಿದ್ದ ನಂತರ, ಆಗಸ್ಟ್ 27, 2024 ರಂದು ಸುಪ್ರೀಂ ಕೋರ್ಟ್ ಕವಿತಾ ಅವರಿಗೆ ಜಾಮೀನು ನೀಡಿತ್ತು.

ಎಐಎಡಿಎಂಕೆ ನಾಯಕರ ನಡುವಿನ ಮಾತುಕತೆ ವಿಫಲ; ಎನ್‌ಡಿಎ ತೊರೆಯುವುದಾಗಿ ಘೋಷಿಸಿದ ಟಿಟಿವಿ ದಿನಕರನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...