Homeಕರ್ನಾಟಕಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿದೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಕೆ. ಎಲ್. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರನ್ನು ಟ್ರಾಫಿಕ್ ನಿಯಮ ಉಲ್ಲಂಘನೆಯ ನೆಪದಲ್ಲಿ ಕೊಪ್ಪ ಪೊಲೀಸರು ಅವಮಾನಿಸಿರುವುದು ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಘಟನೆಯನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ತಮ್ಮ ಕರ್ತವ್ಯ ದಲ್ಲಿ ಲೋಪವೆಸಗಿ ಅಶೋಕ್ ಮತ್ತು ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಹಾಗೂ ಆ ಮೂಲಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಲವಾರು ಸಂಘಟನೆಗಳು ಆಗ್ರಹಿಸಿದೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

“ಇಂತಹ ಕ್ಷುಲ್ಲಕ ಕುತಂತ್ರಗಳಿಂದ ಭಿನ್ನಮತಗಳನ್ನು ಮಟ್ಟಹಾಕಬಹುದು ಎಂದು ಈ ಪೊಲೀಸರು ಭಾವಿಸಿದ್ದಲ್ಲಿ ಅವರು ಖಾಕಿ ಧರಿಸಲು ಅಯೋಗ್ಯರು ಎಂದೇ ಅರ್ಥ. ಇಂತಹ ಜನಕ್ಕೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂಬುದು ಶೀಘ್ರದಲ್ಲೇ ಅರಿವಾಗುವಂತೆ ಮಾಡುವುದು ಜಿಲ್ಲಾ ಎಸ್ ಪಿ ಯವರ ನೈತಿಕ ಜವಾಬ್ದಾರಿಯೂ ಆಗಿದೆ” ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷ ಹೇಳಿದ್ದಾರೆ.

ವಿಜಯಪುರದಲ್ಲಿ ಜನಶಕ್ತಿ, ಮಹಿಳಾ ಮುನ್ನಡೆ, ಕೋಮು ಸೌಹಾರ್ದ ವೇದಿಕೆ, ನಾವೂ ಭಾರತೀಯರು ವೇದಿಕೆ ಜಂಟಿಯಾಗಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಕಿರುಕುಳ ನೀಡಿದ ಪೊಲೀಸರ ವಿರುದ್ದ ಕ್ರಮಕೈಗೊಳ್ಳವಂತೆ ಕೇಳಿಕೊಳ್ಳಲಾಯಿತು.

ಹೋರಾಟಗಾರ ಮತ್ತು ಕಾರಿನಲ್ಲಿದ್ದ ಅವರ ಕುಟುಂಬದ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಪೇದೆ ಹಾಗೂ ಎಸ್ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕೂಡಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪೀಪಲ್ ಲಾಯರ್ಸ್ ಗಿಲ್ಡ್ ಬೆಂಗಳೂರು ಘಟನೆಯನ್ನು ಖಂಡಿಸಿದ್ದು, ಇದರ ರಾಜ್ಯ ಸಂಚಾಲಕ ಕೆ.ಕೆ.ವಕೀಲ “ಇಂತಹ ಘಟನೆ ಸಮಾಜದಲ್ಲಿ ಜನಸಾಮಾನ್ಯರು ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತಾಗುತ್ತದೆ ಇಂತಹ ದುರಂಕಾರಿ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಪೊಲೀಸರಿಂದ ಇಡೀ ಪೊಲೀಸ್ ಸಮೂಹಕ್ಕೆ ಕಪ್ಪುಚುಕ್ಕೆ ಯಾಗಿರುತ್ತದೆ. ಅಶೋಕ್‌ರವರು ತಮ್ಮ ಜೀವನಪೂರ್ತಿ ಬಡ, ನಿರ್ಗತಿಕ, ಅಲ್ಪಸಂಖ್ಯಾತರ, ದಲಿತ ಮತ್ತು ಮಹಿಳೆಯರ ಪರ ಹೋರಾಟ ಮಾಡಿಕೊಂಡು ಬಂದಂತಹ ವ್ಯಕ್ತಿಯಾಗಿದ್ದು ಅವರ ಕುಟುಂಬದ ಸಮ್ಮುಖದಲ್ಲೆ ಸಣ್ಣ ವಿಚಾರವಾಗಿ ಕೆಟ್ಟ ಶಬ್ದ ಉಪಯೋಗಿಸಿ ನಿಂದಿಸಿರುವುದು ಪೊಲೀಸ್ ಗೂಂಡಾಗಿರಿಯಾಗಿರುತ್ತದೆ. ಪೊಲೀಸರ ವರ್ತನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಪೊಲೀಸರ ವಿರುದ್ಧ ಜನ ತಿರುಗಿ ಬೀಳುವುದರಲ್ಲಿ ಅನುಮಾನ ಇಲ್ಲ ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಯವರು ದುರಹಂಕಾರಿ ಕೊಪ್ಪ ಪಿ.ಎಸ್.ಐ ಮತ್ತು ಕಾನ್ ಸ್ಟೇಬಲ್ ಅವರನ್ನು ತಕ್ಷಣವೇ ಅಮಾನತು ಮಾಡಿ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಶಿಕ್ಷೆಗೆ ಗುರಿ ಮಾಡಬೇಕು ಇಲ್ಲದಿದ್ದರೆ ನಾವು ಎಲ್ಲಾ ರೀತಿಯ ಕಾನೂನು ಹೋರಾಟ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...