Homeಕರ್ನಾಟಕಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿದೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಕೆ. ಎಲ್. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರನ್ನು ಟ್ರಾಫಿಕ್ ನಿಯಮ ಉಲ್ಲಂಘನೆಯ ನೆಪದಲ್ಲಿ ಕೊಪ್ಪ ಪೊಲೀಸರು ಅವಮಾನಿಸಿರುವುದು ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಘಟನೆಯನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ತಮ್ಮ ಕರ್ತವ್ಯ ದಲ್ಲಿ ಲೋಪವೆಸಗಿ ಅಶೋಕ್ ಮತ್ತು ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಹಾಗೂ ಆ ಮೂಲಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಲವಾರು ಸಂಘಟನೆಗಳು ಆಗ್ರಹಿಸಿದೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

“ಇಂತಹ ಕ್ಷುಲ್ಲಕ ಕುತಂತ್ರಗಳಿಂದ ಭಿನ್ನಮತಗಳನ್ನು ಮಟ್ಟಹಾಕಬಹುದು ಎಂದು ಈ ಪೊಲೀಸರು ಭಾವಿಸಿದ್ದಲ್ಲಿ ಅವರು ಖಾಕಿ ಧರಿಸಲು ಅಯೋಗ್ಯರು ಎಂದೇ ಅರ್ಥ. ಇಂತಹ ಜನಕ್ಕೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂಬುದು ಶೀಘ್ರದಲ್ಲೇ ಅರಿವಾಗುವಂತೆ ಮಾಡುವುದು ಜಿಲ್ಲಾ ಎಸ್ ಪಿ ಯವರ ನೈತಿಕ ಜವಾಬ್ದಾರಿಯೂ ಆಗಿದೆ” ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷ ಹೇಳಿದ್ದಾರೆ.

ವಿಜಯಪುರದಲ್ಲಿ ಜನಶಕ್ತಿ, ಮಹಿಳಾ ಮುನ್ನಡೆ, ಕೋಮು ಸೌಹಾರ್ದ ವೇದಿಕೆ, ನಾವೂ ಭಾರತೀಯರು ವೇದಿಕೆ ಜಂಟಿಯಾಗಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಕಿರುಕುಳ ನೀಡಿದ ಪೊಲೀಸರ ವಿರುದ್ದ ಕ್ರಮಕೈಗೊಳ್ಳವಂತೆ ಕೇಳಿಕೊಳ್ಳಲಾಯಿತು.

ಹೋರಾಟಗಾರ ಮತ್ತು ಕಾರಿನಲ್ಲಿದ್ದ ಅವರ ಕುಟುಂಬದ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಪೇದೆ ಹಾಗೂ ಎಸ್ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕೂಡಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪೀಪಲ್ ಲಾಯರ್ಸ್ ಗಿಲ್ಡ್ ಬೆಂಗಳೂರು ಘಟನೆಯನ್ನು ಖಂಡಿಸಿದ್ದು, ಇದರ ರಾಜ್ಯ ಸಂಚಾಲಕ ಕೆ.ಕೆ.ವಕೀಲ “ಇಂತಹ ಘಟನೆ ಸಮಾಜದಲ್ಲಿ ಜನಸಾಮಾನ್ಯರು ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತಾಗುತ್ತದೆ ಇಂತಹ ದುರಂಕಾರಿ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಪೊಲೀಸರಿಂದ ಇಡೀ ಪೊಲೀಸ್ ಸಮೂಹಕ್ಕೆ ಕಪ್ಪುಚುಕ್ಕೆ ಯಾಗಿರುತ್ತದೆ. ಅಶೋಕ್‌ರವರು ತಮ್ಮ ಜೀವನಪೂರ್ತಿ ಬಡ, ನಿರ್ಗತಿಕ, ಅಲ್ಪಸಂಖ್ಯಾತರ, ದಲಿತ ಮತ್ತು ಮಹಿಳೆಯರ ಪರ ಹೋರಾಟ ಮಾಡಿಕೊಂಡು ಬಂದಂತಹ ವ್ಯಕ್ತಿಯಾಗಿದ್ದು ಅವರ ಕುಟುಂಬದ ಸಮ್ಮುಖದಲ್ಲೆ ಸಣ್ಣ ವಿಚಾರವಾಗಿ ಕೆಟ್ಟ ಶಬ್ದ ಉಪಯೋಗಿಸಿ ನಿಂದಿಸಿರುವುದು ಪೊಲೀಸ್ ಗೂಂಡಾಗಿರಿಯಾಗಿರುತ್ತದೆ. ಪೊಲೀಸರ ವರ್ತನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಪೊಲೀಸರ ವಿರುದ್ಧ ಜನ ತಿರುಗಿ ಬೀಳುವುದರಲ್ಲಿ ಅನುಮಾನ ಇಲ್ಲ ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಯವರು ದುರಹಂಕಾರಿ ಕೊಪ್ಪ ಪಿ.ಎಸ್.ಐ ಮತ್ತು ಕಾನ್ ಸ್ಟೇಬಲ್ ಅವರನ್ನು ತಕ್ಷಣವೇ ಅಮಾನತು ಮಾಡಿ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಶಿಕ್ಷೆಗೆ ಗುರಿ ಮಾಡಬೇಕು ಇಲ್ಲದಿದ್ದರೆ ನಾವು ಎಲ್ಲಾ ರೀತಿಯ ಕಾನೂನು ಹೋರಾಟ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...