Homeಕರ್ನಾಟಕಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿದೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಕೆ. ಎಲ್. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರನ್ನು ಟ್ರಾಫಿಕ್ ನಿಯಮ ಉಲ್ಲಂಘನೆಯ ನೆಪದಲ್ಲಿ ಕೊಪ್ಪ ಪೊಲೀಸರು ಅವಮಾನಿಸಿರುವುದು ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಘಟನೆಯನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ತಮ್ಮ ಕರ್ತವ್ಯ ದಲ್ಲಿ ಲೋಪವೆಸಗಿ ಅಶೋಕ್ ಮತ್ತು ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಹಾಗೂ ಆ ಮೂಲಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಲವಾರು ಸಂಘಟನೆಗಳು ಆಗ್ರಹಿಸಿದೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

“ಇಂತಹ ಕ್ಷುಲ್ಲಕ ಕುತಂತ್ರಗಳಿಂದ ಭಿನ್ನಮತಗಳನ್ನು ಮಟ್ಟಹಾಕಬಹುದು ಎಂದು ಈ ಪೊಲೀಸರು ಭಾವಿಸಿದ್ದಲ್ಲಿ ಅವರು ಖಾಕಿ ಧರಿಸಲು ಅಯೋಗ್ಯರು ಎಂದೇ ಅರ್ಥ. ಇಂತಹ ಜನಕ್ಕೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂಬುದು ಶೀಘ್ರದಲ್ಲೇ ಅರಿವಾಗುವಂತೆ ಮಾಡುವುದು ಜಿಲ್ಲಾ ಎಸ್ ಪಿ ಯವರ ನೈತಿಕ ಜವಾಬ್ದಾರಿಯೂ ಆಗಿದೆ” ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷ ಹೇಳಿದ್ದಾರೆ.

ವಿಜಯಪುರದಲ್ಲಿ ಜನಶಕ್ತಿ, ಮಹಿಳಾ ಮುನ್ನಡೆ, ಕೋಮು ಸೌಹಾರ್ದ ವೇದಿಕೆ, ನಾವೂ ಭಾರತೀಯರು ವೇದಿಕೆ ಜಂಟಿಯಾಗಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಕಿರುಕುಳ ನೀಡಿದ ಪೊಲೀಸರ ವಿರುದ್ದ ಕ್ರಮಕೈಗೊಳ್ಳವಂತೆ ಕೇಳಿಕೊಳ್ಳಲಾಯಿತು.

ಹೋರಾಟಗಾರ ಮತ್ತು ಕಾರಿನಲ್ಲಿದ್ದ ಅವರ ಕುಟುಂಬದ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಪೇದೆ ಹಾಗೂ ಎಸ್ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕೂಡಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪೀಪಲ್ ಲಾಯರ್ಸ್ ಗಿಲ್ಡ್ ಬೆಂಗಳೂರು ಘಟನೆಯನ್ನು ಖಂಡಿಸಿದ್ದು, ಇದರ ರಾಜ್ಯ ಸಂಚಾಲಕ ಕೆ.ಕೆ.ವಕೀಲ “ಇಂತಹ ಘಟನೆ ಸಮಾಜದಲ್ಲಿ ಜನಸಾಮಾನ್ಯರು ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತಾಗುತ್ತದೆ ಇಂತಹ ದುರಂಕಾರಿ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಪೊಲೀಸರಿಂದ ಇಡೀ ಪೊಲೀಸ್ ಸಮೂಹಕ್ಕೆ ಕಪ್ಪುಚುಕ್ಕೆ ಯಾಗಿರುತ್ತದೆ. ಅಶೋಕ್‌ರವರು ತಮ್ಮ ಜೀವನಪೂರ್ತಿ ಬಡ, ನಿರ್ಗತಿಕ, ಅಲ್ಪಸಂಖ್ಯಾತರ, ದಲಿತ ಮತ್ತು ಮಹಿಳೆಯರ ಪರ ಹೋರಾಟ ಮಾಡಿಕೊಂಡು ಬಂದಂತಹ ವ್ಯಕ್ತಿಯಾಗಿದ್ದು ಅವರ ಕುಟುಂಬದ ಸಮ್ಮುಖದಲ್ಲೆ ಸಣ್ಣ ವಿಚಾರವಾಗಿ ಕೆಟ್ಟ ಶಬ್ದ ಉಪಯೋಗಿಸಿ ನಿಂದಿಸಿರುವುದು ಪೊಲೀಸ್ ಗೂಂಡಾಗಿರಿಯಾಗಿರುತ್ತದೆ. ಪೊಲೀಸರ ವರ್ತನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಪೊಲೀಸರ ವಿರುದ್ಧ ಜನ ತಿರುಗಿ ಬೀಳುವುದರಲ್ಲಿ ಅನುಮಾನ ಇಲ್ಲ ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಯವರು ದುರಹಂಕಾರಿ ಕೊಪ್ಪ ಪಿ.ಎಸ್.ಐ ಮತ್ತು ಕಾನ್ ಸ್ಟೇಬಲ್ ಅವರನ್ನು ತಕ್ಷಣವೇ ಅಮಾನತು ಮಾಡಿ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಶಿಕ್ಷೆಗೆ ಗುರಿ ಮಾಡಬೇಕು ಇಲ್ಲದಿದ್ದರೆ ನಾವು ಎಲ್ಲಾ ರೀತಿಯ ಕಾನೂನು ಹೋರಾಟ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...