Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...