Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...