Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...