Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...