Homeಕರ್ನಾಟಕಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

- Advertisement -
- Advertisement -

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, “ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ, ಅದು ಸರ್ಕಾರದ ಅನುದಾನವಲ್ಲ” ಎಂದು ಹೇಳಿದರು.

“ಮುಂದಿನ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಹಣ ನೀಡುತ್ತೇವೆ. ಅದನ್ನು ಕೇಳಲು ಅವರು ಯಾರು” ಎಂದು ಕೆಎನ್‌ ರಾಜಣ್ಣ ಅವರು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್‌ ಅವರನ್ನು ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರಾದ ರಂಗನಾಥ್, ತಮ್ಮ ಕ್ಷೇತ್ರದ ರೈತರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಆದರೆ, ರಂಗನಾಥ್‌ ಅವರ ದುರುಪಯೋಗದ ಆರೋಪಗಳನ್ನು ತಿರಸ್ಕರಿಸಿದ ರಾಜಣ್ಣ, “ಇದು ನನ್ನ ಹಣವಲ್ಲ, ನನ್ನ ವೈಯಕ್ತಿಕ ಹಣವಲ್ಲ, ಸರ್ಕಾರದ ಹಣವಲ್ಲ. ಇದು ಠೇವಣಿದಾರರ ಹಣ. ಜಿಲ್ಲೆಯ ರೈತರು ಮತ್ತು ಠೇವಣಿ ಇಟ್ಟಿರುವ ಎಲ್ಲರಿಗೂ ನಾನು ಅದನ್ನು ನೀಡುತ್ತೇನೆ. ಭವಿಷ್ಯದಲ್ಲಿ ಎರಡು ಪಟ್ಟು ಹೆಚ್ಚು ವಿತರಿಸುತ್ತೇವೆ. ನನ್ನ ಕ್ಷೇತ್ರದಲ್ಲಿ ಶೇ.75 ರಷ್ಟು ದಲಿತರಿದ್ದಾರೆ. ಕುಣಿಗಲ್‌ನಲ್ಲಿ ಶೇ.75ರಷ್ಟು ಒಕ್ಕಲಿಗರಿದ್ದಾರೆ. ನಾವು ಸಿದ್ದರಾಮಯ್ಯ ಅವರ ಸಾಮಾಜಿಕ ನ್ಯಾಯ ತತ್ವವನ್ನು ಪಾಲಿಸುತ್ತಿದ್ದೇವೆ” ಎಂದರು.

ಸರ್ಕಾರವು ದೊಡ್ಡ ಅನುದಾನ ಬಿಡುಗಡೆ ಮಾಡಿದೆ ಎಂಬ ಹೇಳಿಕೆಗಳನ್ನು ರಾಜಣ್ಣ ನಿರಾಕರಿಸಿದರು. “ಅವರು ವೈಯಕ್ತಿಕವಾಗಿ ನನಗೆ 1,000 ಕೋಟಿ ರೂ. ನೀಡಿದ್ದಾರೆಯೇ” ಎಂದು ಅವರು ಕೇಳಿದರು.

ನಿರ್ದಿಷ್ಟ ಪ್ರದೇಶಗಳಿಗೆ ನಿಧಿ ಹಂಚಿಕೆಯನ್ನು ಸಮರ್ಥಿಸಿಕೊಂಡ ರಾಜಣ್ಣ, ಮಧುಗಿರಿ ತಾಲ್ಲೂಕಿನಲ್ಲಿ ಬಿಡುಗಡೆಯಾದ ಸರ್ಕಾರಿ ಹಣವು ಸ್ಥಳೀಯ ಜನರಿಗೆ ಮೀಸಲಾಗಿದೆ ಎಂದು ಹೇಳಿದರು.

“ಇದು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳು ಒಟ್ಟಾಗಿ ಸುಮಾರು 70 ಪ್ರತಿಶತವನ್ನು ಹೊಂದಿರುವ ಕ್ಷೇತ್ರವಾಗಿದೆ. ಕುಣಿಗಲ್‌ಗೆ ಹೋಲಿಸಿದರೆ, ಅಲ್ಲಿ ಜನಸಂಖ್ಯೆಯ ಸುಮಾರು 70 ಪ್ರತಿಶತದಷ್ಟು ಜನರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು” ಎಂದು ಅವರು ಹೇಳಿದರು.

ಇದನ್ನು ಸಾಮಾಜಿಕ ನ್ಯಾಯದ ವಿಷಯ ಎಂದು ಕರೆದ ರಾಜಣ್ಣ, “ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ. ಆ ಬದ್ಧತೆಗೆ ಅನುಗುಣವಾಗಿ, ನಾನು ಈ ಕಾರ್ಯಕ್ರಮಗಳನ್ನು ಯೋಜಿಸಿದ್ದೇನೆ. ಮಧುಗಿರಿ, ಪಾವಗಡ, ಸಿರಾ, ಚಿಕ್ಕನಾಯಕನಹಳ್ಳಿ ಮತ್ತು ಕೊರಟಗೆರೆ ಮುಂತಾದ ತಾಲ್ಲೂಕುಗಳಲ್ಲಿ ಹೆಚ್ಚಿನ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜನಸಂಖ್ಯೆ ಇದೆ” ಎಂದು ಅವರು ಹೇಳಿದರು.

ಪಿಎಸಿಎಸ್ ಅನುದಾನದ ಕುರಿತು ಸದನದಲ್ಲಿ ಚರ್ಚೆ

ಪ್ರಾಥಮಿಕ ಕೃಷಿ ಸಾಲ ಸಹಕಾರ ಸಂಘಗಳಿಗೆ (ಪಿಎಸಿಎಸ್) ಅನುದಾನದ ಕುರಿತು ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ (ಕುಣಿಗಲ್) ಅವರು ಬುಧವಾರ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಸಹಕಾರಿ ಸಂಘಗಳನ್ನು ಬಲಪಡಿಸುವ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಸದಸ್ಯತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಯೋಜನೆಗಳ ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಕುಣಿಗಲ್ ತಾಲ್ಲೂಕಿನ ಪಿಎಸಿಎಸ್‌ಗಳಿಗೆ 90,000 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ಆದರೆ ಡಾ. ರಂಗನಾಥ್ ಅತೃಪ್ತಿ ವ್ಯಕ್ತಪಡಿಸಿ, ಮಧುಗಿರಿಗೆ ಹೋಲಿಸಿದರೆ ಕುಣಿಗಲ್‌ಗೆ ಕಡಿಮೆ ಹಂಚಿಕೆ ಮಾಡಲಾಗಿದೆ ಎಂದರು. ತಾಲ್ಲೂಕುಗಳ ನಡುವಿನ ಎಸ್‌ಸಿ/ಎಸ್‌ಟಿ ಜನಸಂಖ್ಯೆಯಲ್ಲಿನ ವ್ಯತ್ಯಾಸಗಳೇ ಈ ವ್ಯತ್ಯಾಸಕ್ಕೆ ಕಾರಣವೆಂದು ಸಿದ್ದರಾಮಯ್ಯ ಹೇಳಿದರು. ಅಸಮಾನತೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...