Homeಕರ್ನಾಟಕಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

- Advertisement -
- Advertisement -

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, “ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ, ಅದು ಸರ್ಕಾರದ ಅನುದಾನವಲ್ಲ” ಎಂದು ಹೇಳಿದರು.

“ಮುಂದಿನ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಹಣ ನೀಡುತ್ತೇವೆ. ಅದನ್ನು ಕೇಳಲು ಅವರು ಯಾರು” ಎಂದು ಕೆಎನ್‌ ರಾಜಣ್ಣ ಅವರು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್‌ ಅವರನ್ನು ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರಾದ ರಂಗನಾಥ್, ತಮ್ಮ ಕ್ಷೇತ್ರದ ರೈತರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಆದರೆ, ರಂಗನಾಥ್‌ ಅವರ ದುರುಪಯೋಗದ ಆರೋಪಗಳನ್ನು ತಿರಸ್ಕರಿಸಿದ ರಾಜಣ್ಣ, “ಇದು ನನ್ನ ಹಣವಲ್ಲ, ನನ್ನ ವೈಯಕ್ತಿಕ ಹಣವಲ್ಲ, ಸರ್ಕಾರದ ಹಣವಲ್ಲ. ಇದು ಠೇವಣಿದಾರರ ಹಣ. ಜಿಲ್ಲೆಯ ರೈತರು ಮತ್ತು ಠೇವಣಿ ಇಟ್ಟಿರುವ ಎಲ್ಲರಿಗೂ ನಾನು ಅದನ್ನು ನೀಡುತ್ತೇನೆ. ಭವಿಷ್ಯದಲ್ಲಿ ಎರಡು ಪಟ್ಟು ಹೆಚ್ಚು ವಿತರಿಸುತ್ತೇವೆ. ನನ್ನ ಕ್ಷೇತ್ರದಲ್ಲಿ ಶೇ.75 ರಷ್ಟು ದಲಿತರಿದ್ದಾರೆ. ಕುಣಿಗಲ್‌ನಲ್ಲಿ ಶೇ.75ರಷ್ಟು ಒಕ್ಕಲಿಗರಿದ್ದಾರೆ. ನಾವು ಸಿದ್ದರಾಮಯ್ಯ ಅವರ ಸಾಮಾಜಿಕ ನ್ಯಾಯ ತತ್ವವನ್ನು ಪಾಲಿಸುತ್ತಿದ್ದೇವೆ” ಎಂದರು.

ಸರ್ಕಾರವು ದೊಡ್ಡ ಅನುದಾನ ಬಿಡುಗಡೆ ಮಾಡಿದೆ ಎಂಬ ಹೇಳಿಕೆಗಳನ್ನು ರಾಜಣ್ಣ ನಿರಾಕರಿಸಿದರು. “ಅವರು ವೈಯಕ್ತಿಕವಾಗಿ ನನಗೆ 1,000 ಕೋಟಿ ರೂ. ನೀಡಿದ್ದಾರೆಯೇ” ಎಂದು ಅವರು ಕೇಳಿದರು.

ನಿರ್ದಿಷ್ಟ ಪ್ರದೇಶಗಳಿಗೆ ನಿಧಿ ಹಂಚಿಕೆಯನ್ನು ಸಮರ್ಥಿಸಿಕೊಂಡ ರಾಜಣ್ಣ, ಮಧುಗಿರಿ ತಾಲ್ಲೂಕಿನಲ್ಲಿ ಬಿಡುಗಡೆಯಾದ ಸರ್ಕಾರಿ ಹಣವು ಸ್ಥಳೀಯ ಜನರಿಗೆ ಮೀಸಲಾಗಿದೆ ಎಂದು ಹೇಳಿದರು.

“ಇದು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳು ಒಟ್ಟಾಗಿ ಸುಮಾರು 70 ಪ್ರತಿಶತವನ್ನು ಹೊಂದಿರುವ ಕ್ಷೇತ್ರವಾಗಿದೆ. ಕುಣಿಗಲ್‌ಗೆ ಹೋಲಿಸಿದರೆ, ಅಲ್ಲಿ ಜನಸಂಖ್ಯೆಯ ಸುಮಾರು 70 ಪ್ರತಿಶತದಷ್ಟು ಜನರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು” ಎಂದು ಅವರು ಹೇಳಿದರು.

ಇದನ್ನು ಸಾಮಾಜಿಕ ನ್ಯಾಯದ ವಿಷಯ ಎಂದು ಕರೆದ ರಾಜಣ್ಣ, “ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ. ಆ ಬದ್ಧತೆಗೆ ಅನುಗುಣವಾಗಿ, ನಾನು ಈ ಕಾರ್ಯಕ್ರಮಗಳನ್ನು ಯೋಜಿಸಿದ್ದೇನೆ. ಮಧುಗಿರಿ, ಪಾವಗಡ, ಸಿರಾ, ಚಿಕ್ಕನಾಯಕನಹಳ್ಳಿ ಮತ್ತು ಕೊರಟಗೆರೆ ಮುಂತಾದ ತಾಲ್ಲೂಕುಗಳಲ್ಲಿ ಹೆಚ್ಚಿನ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜನಸಂಖ್ಯೆ ಇದೆ” ಎಂದು ಅವರು ಹೇಳಿದರು.

ಪಿಎಸಿಎಸ್ ಅನುದಾನದ ಕುರಿತು ಸದನದಲ್ಲಿ ಚರ್ಚೆ

ಪ್ರಾಥಮಿಕ ಕೃಷಿ ಸಾಲ ಸಹಕಾರ ಸಂಘಗಳಿಗೆ (ಪಿಎಸಿಎಸ್) ಅನುದಾನದ ಕುರಿತು ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ (ಕುಣಿಗಲ್) ಅವರು ಬುಧವಾರ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಸಹಕಾರಿ ಸಂಘಗಳನ್ನು ಬಲಪಡಿಸುವ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಸದಸ್ಯತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಯೋಜನೆಗಳ ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಕುಣಿಗಲ್ ತಾಲ್ಲೂಕಿನ ಪಿಎಸಿಎಸ್‌ಗಳಿಗೆ 90,000 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ಆದರೆ ಡಾ. ರಂಗನಾಥ್ ಅತೃಪ್ತಿ ವ್ಯಕ್ತಪಡಿಸಿ, ಮಧುಗಿರಿಗೆ ಹೋಲಿಸಿದರೆ ಕುಣಿಗಲ್‌ಗೆ ಕಡಿಮೆ ಹಂಚಿಕೆ ಮಾಡಲಾಗಿದೆ ಎಂದರು. ತಾಲ್ಲೂಕುಗಳ ನಡುವಿನ ಎಸ್‌ಸಿ/ಎಸ್‌ಟಿ ಜನಸಂಖ್ಯೆಯಲ್ಲಿನ ವ್ಯತ್ಯಾಸಗಳೇ ಈ ವ್ಯತ್ಯಾಸಕ್ಕೆ ಕಾರಣವೆಂದು ಸಿದ್ದರಾಮಯ್ಯ ಹೇಳಿದರು. ಅಸಮಾನತೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...