Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...