Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...