Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...