Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...