Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...