Homeಕರ್ನಾಟಕಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

ಬಿಜೆಪಿಯತ್ತ ಕೆ.ಎನ್. ರಾಜಣ್ಣ ಚಿತ್ತ?

- Advertisement -
- Advertisement -

| ಕೆ.ಈ.ಸಿದ್ದಯ್ಯ |

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬೇಲಿ ಮೇಲೆ ಕೂತಿದ್ದಾರೆ. ಯಾವುದೇ ಕ್ಷಣದಲ್ಲಿ ಹೇಗಾದರೂ ಹೊರಳಬಹುದು ಎಂಬುದು ಅವರ ಲೆಕ್ಕಾಚಾರ. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ನಂತರ ಕೆ.ಎನ್.ರಾಜಣ್ಣ ನಡೆ ನಿಗೂಢವಾಗಿದೆ. ಒಮ್ಮೆ ‘ಕಮಲಮುಖಿ’ಯೂ ಮತ್ತೊಮ್ಮೆ ‘ಕೈ’ಮುಗಿಯುವುದು ಮಾಡುತ್ತಲೇ ಬರುತ್ತಿದ್ದಾರೆ.

ಹಿಂದೆ ಜೆಡಿಎಸ್‍ನಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಡಾ.ಎಂ.ಆರ್.ಹುಲಿನಾಯ್ಕರ್ ತಮ್ಮ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅನುಮತಿ ಪಡೆಯಲು ಬಿಜೆಪಿ ಸೇರ್ಪಡೆ ಯಾಗಿದ್ದರು. ಈಗ ಕೆ.ಎನ್.ರಾಜಣ್ಣ ಕೂಡ ತಮಗೆ ಎದುರಾಗಿರುವ ಅಡ್ಡಿಆತಂಕಗಳ ನಿವಾರಣೆಗೆ ಬಿಜೆಪಿ ಸೇರಿದರೆ ಅಚ್ಚರಿ ಇಲ್ಲ. ಇದಕ್ಕೆ ಇತ್ತೀಚಿನ ಬೆಳವಣಿಗೆಗಳು ಮತ್ತು ಅವರ ನಡೆಗಳೇ ಸಾಕ್ಷಿ. ಲೋಕಸಭಾ ಚುನಾವಣೆಯ ಸಮಯದಲ್ಲಿ ಜಿ.ಎಸ್.ಬಸವರಾಜು ಜೊತೆ ಫೋಟೋ ತೆಗೆಸಿಕೊಂಡು ತನ್ನ ಕಡುವೈರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಭಿನ್ನ ಸಂದೇಶ ರವಾನಿಸಿದ್ದರು. ಬಳಿಕ ಯಡಿಯೂರಪ್ಪರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಕೆ.ಎನ್.ಆರ್ ಹಾಜರಿದ್ದರು. ಮತ್ತೊಂದು ಕಾರ್ಯಕ್ರಮದಲ್ಲೂ ಬಿ.ಎಸ್.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡರು. ಇದೇ ಕಾರಣಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಲಿಲ್ಲ..

ಈಗ ಇಬ್ಬರು ಮಾಜಿ ಕಬಡ್ಡಿ ಪಟುಗಳು ಒಂದಾಗಿ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಅದು ಸಹಕಾರಿ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಹಾಗಾದರೆ ಸೊಗಡು ಶಿವಣ್ಣ ಪತ್ರಿಕಾಗೋಷ್ಟಿಯಲ್ಲಿ ಯಾಕೆ? ಎಂಬ ಪತ್ರಕರ್ತರ ಪ್ರಶ್ನೆಗೆ ಶಿವಣ್ಣ ಸಹಕಾರಿ ಅಂದ್ರು. ಅದ್ಯಾವಾಗಿನಿಂದ ಸೊಗಡು ಶಿವಣ್ಣ ‘ಸಹಕಾರಿ’ ಆದರೋ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಲೋಪದೋಷಗಳನ್ನು ಕಟುವಾಗಿ ಟೀಕಿಸಿದರೂ ಕೆ.ಎನ್.ರಾಜಣ್ಣ ಮಾತ್ರ ಬಿಜೆಪಿ ಮುಖಂಡರ ಜೊತೆ ಕುಚುಕು ಕುಚುಕು ಗೆಳೆಯರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದರೂ ಅದರ ಬಗ್ಗೆ ರಾಜಣ್ಣ ಚಕಾರ ಎತ್ತಲಿಲ್ಲ. ಕಾಂಗ್ರೆಸ್ ತಾನು ಯಾರನ್ನು ವಿರೋಧಿಸುತ್ತದೆಯೋ ಆ ಪಕ್ಷದೊಂದಿಗೆ ಕೆಎನ್.ಆರ್ ಹೆಚ್ಚು ಸಖ್ಯ ಬೆಳೆಸಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ಮೂಲದ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತುಮಕೂರಿನ ಕೆ.ಎನ್.ಆರ್ ಮನೆಗೆ ಹಲವು ಬಾರಿ ಭೇಟಿ ನೀಡಿ ಚರ್ಚೆ ಮಾಡಿಯೂ ಹೋಗಿದ್ದಾರೆ.

ಹಾಗೆಯೇ ತನ್ನ ಹಳೆಯ ಕಬಡ್ಡಿ ಸ್ನೇಹಿತ ಸೊಗಡು ಶಿವಣ್ಣ ಜೊತೆಗೆ ಹೆಚ್ಚು ನಿಕಟ ಸಂಬಂಧವಿಟ್ಟುಕೊಂಡಿದ್ದಾರೆ. ರಾಜಣ್ಣ ಅವರಿಗೂ ಕಾಂಗ್ರೆಸ್‍ನಲ್ಲಿ ಸಚಿವ ಆಗಬೇಕೆಂಬ ಆಸೆ ಈಡೇರಲಿಲ್ಲ. ಆ ಕಾರಣವನ್ನಿಟ್ಟುಕೊಂಡೇ ಕೆ.ಎನ್.ಆರ್. ಬಿಜೆಪಿಗೆ ಜಿಗಿಯಲು ಸಿದ್ದತೆ ಮಾಡಿಕೊಂಡಿದ್ದಾರೆ. ಬಿಜೆಪಿಗೂ ರಾಜಣ್ಣ ಬೇಕು. ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಬಿಜೆಪಿಗೂ ಇದೆ. ಕೆ.ಎನ್.ಆರ್ ಬಿಜೆಪಿಗೆ ಬಂದರೆ ಮಧುಗಿರಿಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶವಾಗುತ್ತದೆ. ಇದು ರಾಜಣ್ಣನವರ ನಿರೀಕ್ಷೆಯೂ ಆಗಿದೆ. ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಯಾರೂ ಕೂಡ ರಾಜಣ್ಣ ಬೆಂಬಲಕ್ಕೆ ನಿಲ್ಲುವುದಿಲ್ಲ. ಡಾ.ಪರಮೇಶ್ವರ್, ಟಿ.ಬಿ.ಜಯಚಂದ್ರ ಹೀಗೆ ಯಾರನ್ನೂ ಅವರು ನಂಬುತ್ತಿಲ್ಲ. ಮಾಜಿ ಸಂಸದ ಮುದ್ದಹನುಮೇಗೌಡರು ಕೆಎನ್‍ಆರ್ ಪರ ನಿಂತರೂ ಯಾವುದೇ ಹುದ್ದೆಯನ್ನು ಕೊಡಿಸುವಷ್ಟು ಶಕ್ತರಲ್ಲ.

ಈ ಎಲ್ಲಾ ಲೆಕ್ಕಾಚಾರಗಳನ್ನು ಇಟ್ಟುಕೊಂಡಿರುವ ಕೆಎನ್‍ಆರ್ ‘ಸಹಕಾರಿ’ಯಲ್ಲದ ಸಹವರ್ತಿಯ ಜೊತೆ ಕೈಜೋಡಿಸಿದ್ದಾರೆ. ಸೊಗಡು ಶಿವಣ್ಣ ಮತ್ತು ರಾಜಣ್ಣ ಜೋಡಿಯಾದರೆ ಅಪ್ಪ ಮಗನನ್ನು ಬಗ್ಗುಬಡಿಯಬಹುದು. ಜಿ.ಎಸ್.ಬಸವರಾಜು ಮತ್ತು ಜ್ಯೋತಿಗಣೇಶ್ ಅವರನ್ನು ಬಿಟ್ಟರೆ ಅವರೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲ ಅಷ್ಟಾಗಿ ಇಲ್ಲ. ಜೊತೆಗೆ ಸೊಗಡು ಶಿವಣ್ಣ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಯೂ ಅಲ್ಲ. ಬಸವರಾಜು ಅಷ್ಟು ಸೊಗಡು ಅಪಾಯಕಾರಿಯೂ ಅಲ್ಲ ಎಂಬುದನ್ನು ರಾಜಣ್ಣ ಗಮನದಲ್ಲಿಟ್ಟುಕೊಂಡಿದ್ದು ಬಿಜೆಪಿ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ.

ರಾಜಣ್ಣ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಹೌದು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲೇಬೇಕು. ಇಲ್ಲದಿದ್ದರೆ ಕಿರಿಕಿರಿ ಅನುಭವಿಸುವುದು ತಪ್ಪುವುದಿಲ್ಲ. ಸರ್ಕಾರ ದಿಢೀರ್ ಎಂದು ಯಾವುದಾದರೂ ಕ್ರಮ ಕೈಗೊಳ್ಳಬಹುದು. ಹೀಗಾಗಿ ರಾಜಣ್ಣ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಗೆ ಹೇಳುವುದು ಎನ್ನುತ್ತವೆ ಜಿಲ್ಲೆಯ ಕಾಂಗ್ರೆಸ್ ಮೂಲಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...