Homeಚಳವಳಿಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

- Advertisement -
- Advertisement -

ಉತ್ತರ ಭಾರತದ ರೈತರು ಗ್ರಾಮ ಬಂದ್ ಪ್ರತಿಭಟನೆಯ ಹೋರಾಟ ಆರಂಭಿಸಿದ್ದಾರೆ. ತಮ್ಮ ಯಾವುದೇ ಉತ್ಪನ್ನವನ್ನೂ ಮಂಡಿಗಳಿಗೆ ಕಳಿಸುವುದಿಲ್ಲ; ಇಲ್ಲೇ ಕೊಳೆಯಲಿ ಪರವಾಗಿಲ್ಲ ಎಂಬ ವಿನೂತನ ಪ್ರತಿಭಟನೆ ಇದು. ಹಾಲು, ತರಕಾರಿ, ಹಣ್ಣುಗಳ ಪೂರೈಕೆ ನಗರಗಳಿಗೆ ಬಂದ್ ಆದಾಗಲೇ ನಗರಿಗರಿಗೆ ರೈತರ ಕಷ್ಟ ಗೊತ್ತಾಗುವುದು.
ಈ ಪ್ರತಿಭಟನೆ ಉತ್ತರ ಭಾರತದಲ್ಲಿ, ಅದರಲ್ಲೂ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಢ, ಮಹಾರಾಷ್ಟ್ರ ಮತ್ತು ಪಂಜಾಬುಗಳಲ್ಲಿ ತೀವ್ರ ಸ್ವರೂಪ ಪಡೆದಿದೆ. ಈ ಹೋರಾಟ ಭಾಜಪ ಆಳ್ವಿಕೆಯ ರಾಜ್ಯಗಳಲ್ಲಿ ತೀವ್ರವಾಗಿದೆ ಎನ್ನುವುದು ಕಾಕತಾಳೀಯ ಅಲ್ಲ; ಹಾಗೆಂದು ಅದು ರಾಜಕೀಯ ಕುತಂತ್ರದ ಆಟವೂ ಅಲ್ಲ. ಈ ರಾಜ್ಯಗಳ ಸರಕಾರಗಳು ರೈತರ ಬಗ್ಗೆ ಸತತವಾಗಿ ತಾತ್ಸಾರದ ಧೋರಣೆ ತಳೆದ ಕಾರಣ ರೈತರ ಬೇಗುದಿ ಹೆಚ್ಚಿದೆ. ಈ ಹೋರಾಟ ಏಕಾಏಕಿ ಹುಟ್ಟಿಕೊಂಡದ್ದೂ ಅಲ್ಲ, ಯಾವುದೋ ಭಾವನಾತಕ ಕಾರಣಕ್ಕೇ ಭುಗಿಲೆದ್ದ ಪ್ರತಿಭಟನೆಯೂ ಅಲ್ಲ. ಇದು ಭೂಕಂಪದ ಮೊದಲಿನ ಸರಣಿ ಗುರುಗಾಟದ ಹಾಗೆ; ಕಳೆದ ಕೆಲವು ವರ್ಷಗಳಿಂದ ಅಲ್ಲಿಇಲ್ಲಿ ವ್ಯಕ್ತವಾಗುತ್ತಲೇ ಇದೆ.
ಕಳೆದ ವರ್ಷ ಮಧ್ಯಪ್ರದೇಶದ ಮಾಂಡ್‍ಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಪೋಲೀಸರು ಗೋಲೀಬಾರ್ ಮಾಡಿ ಆರು ರೈತರ ಜೀವ ಹೋಗಿತ್ತು. ಈ ದಮನದ ನೆನಪು ರೈತರಲ್ಲಿ ಇನ್ನೂ ಹಸಿಯಾಗಿದೆ. ಈ ಗೋಲೀಬಾರಿನ ಬಳಿಕ ಸರ್ಕಾರ ಅಷ್ಟಿಷ್ಟು ಕ್ರಮ ಕೈಗೊಂಡರೂ ಮತ್ತೆ ರೈತ ನಿರ್ಲಕ್ಷದ ಜಾಡಿಗೆ ಮರಳಿದೆ. ಈ ಬಾರಿಯ ಗ್ರಾಮ ಬಂದ್ ಹೋರಾಟದ ಭಾಗವಾಗಿ ಮಾಂಡ್‍ಸೂರಿನಲ್ಲಿ ಇದೇ ಜೂನ್ ಆರರಂದು, ಗೋಲೀಬಾರಿನಲ್ಲಿ ಹುತಾತ್ಮರಾದ ರೈತರನ್ನು ಸ್ಮರಿಸುವ ಹುತಾತ್ಮ ದಿನಾಚರಣೆಯೂ ನಡೆಯಲಿದೆ. ಸಾವಿರಾರು ರೈತರು ಸೇರಲಿದ್ದಾರೆ.
ಈ ಹೋರಾಟಕ್ಕೆ ಇನ್ನೊಂದು ಆಯಾಮವಿದೆ. ಇಷ್ಟು ದಿನ ಆಯಾ ರಾಜ್ಯ ಅಥವಾ ಸಂದರ್ಭಗಳಲ್ಲಿ ಬೇಗುದಿ ಅನುಭವಿಸಿದ ರೈತರು ಬೀದಿಗಿಳಿದಾಗ ಉಳಿದ ಸಂಘಟನೆಗಳು ಅದಕ್ಕೆ ಬೆಂಬಲ ನೀಡಿ ಹೋರಾಟದ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದರು. ಕಳೆದ ವರ್ಷದ ಮಧ್ಯಪ್ರದೇಶದ ರೈತ ಹೋರಾಟವಿರಬಹುದು, ಭೂ ಸ್ವಾಧೀನದ ವಿರುದ್ಧ ರಾಜಸ್ತಾನದಲ್ಲಿ ಭುಗಿಲೆದ್ದ ಹೋರಾಟ ಇರಬಹುದು. ಆದರೆ ಈ ಬಾರಿ ಕಳೆದ ಎರಡು ವರ್ಷಗಳಿಂದ ಸಮಾಲೊಚನೆ ನಡೆಸಿ ಸುಮಾರು 150 ರೈತಪರ ಸಂಘಟನೆಗಳ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರೂಪುತಳೆದಿದೆ. ಕಳೆದ ವರ್ಷದ ಜುಲೈನಲ್ಲಿ ಈ ಸಮಿತಿಗೊಂದು ಸಾಂಸ್ಥಿಕ ಸ್ವರೂಪವೂ ದೊರಕಿತು. ಕೃಷಿಕ್ ಮುಕ್ತಿ ಸಂಗ್ರಾಮ ಸಮಿತಿ, ಅಖಿಲ ಭಾರತ ಕಿಸಾನ್ ಸಭಾ, ಆಶಾ, ಕರ್ನಾಟಕ ರಾಜ್ಯ ರೈತ ಸಂಘ, ಜನ ಚಳವಳಿಯ ರಾಷ್ಟ್ರೀಯ ಒಕ್ಕೂಟ, ಸ್ವರಾಜ್ ಅಭಿಯಾನ್ ಸೇರಿ ದೇಶದ ಸುಮಾರು 150 ಮುಖ್ಯ ರೈತಪರ/ ಜನಪರ ಹೋರಾಟಗಳು ಸಂಘಟನೆಗಳು ಈ ಸಮಿತಿಯ ಭಾಗವಾಗಿವೆ.
ನಮ್ಮದೆರಡೇ ಬೇಡಿಕೆಗಳು
ಕೃಷಿ ಬಿಕ್ಕಟ್ಟಿನ ಎಲ್ಲಾ ಸಮಸ್ಯೆಗಳ ವಿವರ ಈ ಎರಡು ಮೂಲಗಳಲ್ಲಿ ಹುದುಗಿದೆ ಎಂಬ ಸ್ಪಷ್ಟತೆಯನ್ನು ಈ ಸಮನ್ವಯ ಸಮಿತಿ ಅನಾವರಣಗೊಳಿಸಿದೆ. ಈ ಸಮನ್ವಯ ಸಮಿತಿ ಎರಡು ಸ್ಥೂಲ ಬೇಡಿಕೆಗಲನ್ನು ಮುಂದಿಟ್ಟಿದೆ. ಬೆಳೆಗೆ ಲಾಭದಾಯಕ ಬೆಲೆ ಮತ್ತು ಋಣಮುಕ್ತ ರೈತ. ಬೆಳೆಗೆ ಲಾಭದಾಯಕ ಬೆಲೆ ನೀಡಿದರೆ ಸಾಲ ಮನ್ನಾದಂಥಾ ಬೇಡಿಕೆಗಳೇ ಅಸಂಗತವಾಗುತ್ತದೆ ಎಂಬ ನಿಲುವನ್ನು ಬಹುತೇಕ ಆರ್ಥಿಕ ತಜ್ಞರಷ್ಟೇ ಅಲ್ಲ, ರೈತ ನಾಯಕರೂ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವೇ ನೇಮಿಸಿದ ಸ್ವಾಮಿನಾಥನ್ ಸಮಿತಿ ಈ ಕುರಿತ ಶಿಫಾರಸ್ಸುಗಳನ್ನು ಪ್ರಕಟಗೊಳಿಸಿದ್ದು ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸದೇ ನುಣುಚಿಕೊಳ್ಳುತ್ತಿದೆ. ಕಳೆದ ವರ್ಷ ಸರ್ವೋಚ್ಛ ನ್ಯಾಯಾಲಯದಲ್ಲಿ ‘ಈ ಶಿಫಾರಸ್ಸನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ; ಅದು ಬೆಲೆ ಏರಿಕೆಗೆ ಕಾರಣವಾಗುತ್ತದೆ’ ಎಂದು ಅಫಿಡವಿಟ್ ಸಲ್ಲಿಸಿದ್ದ ಮೋದಿ ಈ ವರ್ಷ ರೈತ ಅಸಹನೆಯ ಬಿಸಿ ತಟ್ಟಿದ್ದರಿಂದ ಸ್ವಾಮಿನಾಥನ್ ಶಿಫಾರಸು ಜಾರಿ ಮಾಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಆದರೆ ಮೋದಿ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಚೌಕಟ್ಟು ಪೂರಾ ಲೊಳಲೊಟ್ಟೆ. ಸರ್ಕಾರ ಉತ್ಪಾದನಾ ವೆಚ್ಚ + 50% ಎಂಬ ಸೂತ್ರ ಮುಂದಿಟ್ಟಿರುವುದರಲ್ಲಿ ಭೂಮಿಯ ಬಂಡವಾಳದ ವೆಚ್ಚ ಮತ್ತಿತರ ಪರೋಕ್ಷ ವೆಚ್ಚಗಳು ಸೇರಿಲ್ಲ. ಅಷ್ಟೇಕೆ ಉತ್ಪಾದನಾ ವೆಚ್ಚವನ್ನು ಸರ್ಕಾರ ಲೆಕ್ಕ ಹಾಕಿದ್ದೇ ಅವಾಸ್ತವವಾಗಿದೆ. ಕುಗ್ಗಿದ ಉತ್ಪಾದನಾ ವೆಚ್ಚವನ್ನು ತಾನೇ ತೀರ್ಮಾನಿಸಿ ಅದರ ಆಧಾರದ ಮೇಲೆ ತಾನೇ ಬೆಲೆ ಘೋಷಿಸುವ ಸರ್ಕಾರದ ಅಡ್ಡ ಕಸುಬಿತನ ರೈತ ಮುಖಂಡರಿಗೆ ಅರ್ಥವಾಗಿದೆ.
ಈ ರೀತಿ ಅತಾರ್ಕಿಕವಾದ ಕನಿಷ್ಠ ಬೆಂಬಲ ಬೆಲೆಯೂ ರೈತರಿಗೆ ದಕ್ಕುತ್ತಿಲ್ಲ ಎಂಬುದನ್ನು ಸಾಬೀತುಪಡಿಸಲು ಈ ಸಮಿತಿಯು ದೇಶದ ಬಹುತೇಕ ಮಾರುಕಟ್ಟೆಗಳಿಗೆ ಹೋಗಿ ಅಧ್ಯಯನ ನಡೆಸಿದೆ. ಎಲ್ಲಾ ಕಡೆ ಒಂದೇ ಚಿತ್ರಣ. ಕನಿಷ್ಠ ಬೆಂಬಲ ಬೆಲೆ ಎನ್ನುವುದೇ ದೊಡ್ಡ ಮೋಸ. ಆದ್ದರಿಂದಲೇ ಲಾಭದಾಯಕ ಬೆಲೆ ಕುರಿತಂತೆ ನಿಷ್ಕರ್ಷೆಗೆ ಬರಲು ಕಾನೂನು ರೂಪಿಸಲೂ ಈ ಸಮಿತಿ ಒತ್ತಾಯಿಸುತ್ತಿದೆ. ಬೆಲೆ ಕುಸಿತದ ಸಮಯದಲ್ಲಿ ಸರ್ಕಾರದ ಮಧ್ಯಪ್ರವೇಶ, ಮಾರುಕಟ್ಟೆ ಬೆಲೆ ಮತ್ತು ಸರ್ಕಾರದ ಬೆಲೆಯ ಮಧ್ಯೆಯ ವ್ಯತ್ಯಾಸವನ್ನು ರೈತರಿಗೆ ಸಬ್ಸಿಡಿ ರೂಪದಲ್ಲಿ ನೀಡುವುದು ಎಲ್ಲಾ ಈ ಬೇಡಿಕೆಗಳಲ್ಲಿ ಸೇರಿದೆ.
ಈ ಸಮಿತಿ ಗಹನವಾಗಿ ಯೋಚಿಸಿರುವ ಇನ್ನೊಂದು ಆಯಾಮ ಸಾಲದ್ದು. ಋಣಮುಕ್ತ ರೈತ ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿರುವ ಸಮಿತಿ, ರೈತ ಸಂಕುಲ ಯಾವುದೇ ಋಣ ಬಾಧೆಯಿಂದ ನರಳದಂತೆ ಮಾಡುವ ಮಾರ್ಗೋಪಾಯಗಳನ್ನು ಸರ್ಕಾರ ರಚಿಸಬೇಕು ಎಂದು ಒತ್ತಾಯಿಸಿದೆ. ಮುಖ್ಯ ಅಂಶವೆಂದರೆ ಈ ಬೇಡಿಕೆ ಯಾಕೆ ಎಂಬುದಷ್ಟೇ ಅಲ್ಲ, ಇದನ್ನು ಹೇಗೆ ಮಾಡಬಹುದು ಎಂಬು ಅನುಷ್ಠಾನ ಯೊಗ್ಯ ಸಲಹೆಗಳೂ ಈ ಸಮಿತಿಯಲ್ಲಿದೆ. ಸರ್ಕಾರಗಳು ನುಣುಚಿಕೊಳ್ಳಲು ಸಾದ್ಯವೇ ಇಲ್ಲ!
ಹಾಗಿದ್ದರೆ ಸರ್ಕಾರಗಳು ಯಾಕೆ ನುಣುಚಿಕೊಳ್ಳುತ್ತಿವೆ?
ಈ ಚಳವಳಿ ಉತ್ತರಭಾರತದಲ್ಲಿ ಪ್ರಖರವಾಗಿ ಬೆಳೆಯುತ್ತಿರುವುದರ ಹಿಂದೆ ಭಾಜಪದ ರಾಜಕೀಯ ಹಿತಾಸಕ್ತಿಗಳ ಜನದ್ರೋಹ ಇದೆ. ಗ್ರಾಮೀಣ ವರ್ಗವನ್ನು ಭಾವುಕ ವಿಷಯಗಳ ಮೂಲಕ ಹಾದಿ ತಪ್ಪಿಸುತ್ತಾ ಆಡಳಿತದ ತಣ್ಣನೆ ಆಟದಲ್ಲಿ ಕಾರ್ಪೋರೇಟ್ ಹಿತಾಸಕ್ತಿಗೆ ಮಣೆ ಹಾಕುವ ಕೆಲಸ ಭಾಜಪ ಕಾಂಗ್ರೆಸ್ಸಿಗಿಂತಲೂ ತೀವ್ರವಾಗಿ ಮಾಡುತ್ತಿದೆ. ಕಾರ್ಪೋರೇಟ್ ಕುಳಗಳ ಕೆಟ್ಟ ಸಾಲಗಳನ್ನು ನಿರಂತರವಾಗಿ ಮನ್ನಾ ಮಾಡುತ್ತಾ ಬಂದಿರುವ ಈ ಸರ್ಕಾರ ಆ ನಷ್ಟ ತುಂಬಿಸಲು ಬ್ಯಾಂಕುಗಳಿಗೆ ಬಜೆಟ್ ಅನುದಾನ ಬೇರೆ ನೀಡುತ್ತಿದೆ. ಅರ್ಥಾತ್ ಕಾರ್ಪೋರೇಟ್ ನಷ್ಟವನ್ನು ನೇರಾ ನೇರಾ ಸರ್ಕಾರ ತುಂಬಿ ಕೊಡುತ್ತಿದೆ; ಅದೂ ನಮ್ಮ ತೆರಿಗೆ ಮೂಲಕ.
ಈ ಕಳ್ಳಾಟಕ್ಕೆ ಶಾಶ್ವತ ಕೊನೆ ಹೇಳಲು ಈ ಸಂಯುಕ್ತ ಸಮನ್ವಯ ಸಮಿತಿಯ ನೇತೃತ್ವದ ರೈತ ಹೋರಾಟ ನಿರ್ಧರಿಸಿದಂತಿದೆ. ಭಾಜಪ ತನ್ನ ಭಾವನಾತ್ಮಕ ಕೋಮು ಧ್ರುವೀಕರಣದ ಮೂಲಕ ಹುಲುಸು ಬೆಲೆ ಪಡೆದಿರುವ ರಾಜ್ಯಗಳಲ್ಲೇ ಈ ಭೂಕಂಪದ ಅದುರುವಿಕೆ ತೀವ್ರವಾಗುತ್ತಿದೆ. ಮೊದಲೇ ಅಭಿವೃದ್ಧಿ ಕುಂಠಿತವಾಗಿರುವ ಈ ರಾಜ್ಯಗಳಲ್ಲಿ ರೈತ ನಿರ್ಲಕ್ಷ್ಯವೂ ಸೇರಿಕೊಂಡರೆ ಅಧಿಕಾರಸ್ಥ ಪಕ್ಷಕ್ಕೆ ಅದಕ್ಕಿಂತ ದೊಡ್ಡ ಅಪಾಯದ ಸೂಚನೆ ಇಲ್ಲ. ದಕ್ಷಿಣದ ರಾಜ್ಯಗಳಲ್ಲಿ ಅದೂ ಕರ್ನಾಟಕದಲ್ಲಿ ಸ್ಥಳೀಯ ಮಂಥನದ ಸಂಕ್ರಮಣ ಸ್ಥಿತಿಯಲ್ಲಿ ಉತ್ತರದಷ್ಟು ತೀವ್ರ ಹೋರಾಟ ತಕ್ಷಣಕ್ಕೆ ಹೊಮ್ಮದು. ಆದರೆ ಈ ಚಳವಳಿ ರೈತ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಪಡೆವ ಸ್ಪಷ್ಠತೆಯೊಂದಿಗೆ ಹೊರಟಿರುವ ಕಾರಣ ಈ ವರ್ಷ ಅಭೂತಪೂರ್ವ ಚಳವಳಿ ಎಲ್ಲೆಡೆ ಭುಗಿಲೇಳಲಿದೆ. ಕರ್ನಾಟಕವೂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...