Homeಚಳವಳಿಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

- Advertisement -
- Advertisement -

ಉತ್ತರ ಭಾರತದ ರೈತರು ಗ್ರಾಮ ಬಂದ್ ಪ್ರತಿಭಟನೆಯ ಹೋರಾಟ ಆರಂಭಿಸಿದ್ದಾರೆ. ತಮ್ಮ ಯಾವುದೇ ಉತ್ಪನ್ನವನ್ನೂ ಮಂಡಿಗಳಿಗೆ ಕಳಿಸುವುದಿಲ್ಲ; ಇಲ್ಲೇ ಕೊಳೆಯಲಿ ಪರವಾಗಿಲ್ಲ ಎಂಬ ವಿನೂತನ ಪ್ರತಿಭಟನೆ ಇದು. ಹಾಲು, ತರಕಾರಿ, ಹಣ್ಣುಗಳ ಪೂರೈಕೆ ನಗರಗಳಿಗೆ ಬಂದ್ ಆದಾಗಲೇ ನಗರಿಗರಿಗೆ ರೈತರ ಕಷ್ಟ ಗೊತ್ತಾಗುವುದು.
ಈ ಪ್ರತಿಭಟನೆ ಉತ್ತರ ಭಾರತದಲ್ಲಿ, ಅದರಲ್ಲೂ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಢ, ಮಹಾರಾಷ್ಟ್ರ ಮತ್ತು ಪಂಜಾಬುಗಳಲ್ಲಿ ತೀವ್ರ ಸ್ವರೂಪ ಪಡೆದಿದೆ. ಈ ಹೋರಾಟ ಭಾಜಪ ಆಳ್ವಿಕೆಯ ರಾಜ್ಯಗಳಲ್ಲಿ ತೀವ್ರವಾಗಿದೆ ಎನ್ನುವುದು ಕಾಕತಾಳೀಯ ಅಲ್ಲ; ಹಾಗೆಂದು ಅದು ರಾಜಕೀಯ ಕುತಂತ್ರದ ಆಟವೂ ಅಲ್ಲ. ಈ ರಾಜ್ಯಗಳ ಸರಕಾರಗಳು ರೈತರ ಬಗ್ಗೆ ಸತತವಾಗಿ ತಾತ್ಸಾರದ ಧೋರಣೆ ತಳೆದ ಕಾರಣ ರೈತರ ಬೇಗುದಿ ಹೆಚ್ಚಿದೆ. ಈ ಹೋರಾಟ ಏಕಾಏಕಿ ಹುಟ್ಟಿಕೊಂಡದ್ದೂ ಅಲ್ಲ, ಯಾವುದೋ ಭಾವನಾತಕ ಕಾರಣಕ್ಕೇ ಭುಗಿಲೆದ್ದ ಪ್ರತಿಭಟನೆಯೂ ಅಲ್ಲ. ಇದು ಭೂಕಂಪದ ಮೊದಲಿನ ಸರಣಿ ಗುರುಗಾಟದ ಹಾಗೆ; ಕಳೆದ ಕೆಲವು ವರ್ಷಗಳಿಂದ ಅಲ್ಲಿಇಲ್ಲಿ ವ್ಯಕ್ತವಾಗುತ್ತಲೇ ಇದೆ.
ಕಳೆದ ವರ್ಷ ಮಧ್ಯಪ್ರದೇಶದ ಮಾಂಡ್‍ಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಪೋಲೀಸರು ಗೋಲೀಬಾರ್ ಮಾಡಿ ಆರು ರೈತರ ಜೀವ ಹೋಗಿತ್ತು. ಈ ದಮನದ ನೆನಪು ರೈತರಲ್ಲಿ ಇನ್ನೂ ಹಸಿಯಾಗಿದೆ. ಈ ಗೋಲೀಬಾರಿನ ಬಳಿಕ ಸರ್ಕಾರ ಅಷ್ಟಿಷ್ಟು ಕ್ರಮ ಕೈಗೊಂಡರೂ ಮತ್ತೆ ರೈತ ನಿರ್ಲಕ್ಷದ ಜಾಡಿಗೆ ಮರಳಿದೆ. ಈ ಬಾರಿಯ ಗ್ರಾಮ ಬಂದ್ ಹೋರಾಟದ ಭಾಗವಾಗಿ ಮಾಂಡ್‍ಸೂರಿನಲ್ಲಿ ಇದೇ ಜೂನ್ ಆರರಂದು, ಗೋಲೀಬಾರಿನಲ್ಲಿ ಹುತಾತ್ಮರಾದ ರೈತರನ್ನು ಸ್ಮರಿಸುವ ಹುತಾತ್ಮ ದಿನಾಚರಣೆಯೂ ನಡೆಯಲಿದೆ. ಸಾವಿರಾರು ರೈತರು ಸೇರಲಿದ್ದಾರೆ.
ಈ ಹೋರಾಟಕ್ಕೆ ಇನ್ನೊಂದು ಆಯಾಮವಿದೆ. ಇಷ್ಟು ದಿನ ಆಯಾ ರಾಜ್ಯ ಅಥವಾ ಸಂದರ್ಭಗಳಲ್ಲಿ ಬೇಗುದಿ ಅನುಭವಿಸಿದ ರೈತರು ಬೀದಿಗಿಳಿದಾಗ ಉಳಿದ ಸಂಘಟನೆಗಳು ಅದಕ್ಕೆ ಬೆಂಬಲ ನೀಡಿ ಹೋರಾಟದ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದರು. ಕಳೆದ ವರ್ಷದ ಮಧ್ಯಪ್ರದೇಶದ ರೈತ ಹೋರಾಟವಿರಬಹುದು, ಭೂ ಸ್ವಾಧೀನದ ವಿರುದ್ಧ ರಾಜಸ್ತಾನದಲ್ಲಿ ಭುಗಿಲೆದ್ದ ಹೋರಾಟ ಇರಬಹುದು. ಆದರೆ ಈ ಬಾರಿ ಕಳೆದ ಎರಡು ವರ್ಷಗಳಿಂದ ಸಮಾಲೊಚನೆ ನಡೆಸಿ ಸುಮಾರು 150 ರೈತಪರ ಸಂಘಟನೆಗಳ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರೂಪುತಳೆದಿದೆ. ಕಳೆದ ವರ್ಷದ ಜುಲೈನಲ್ಲಿ ಈ ಸಮಿತಿಗೊಂದು ಸಾಂಸ್ಥಿಕ ಸ್ವರೂಪವೂ ದೊರಕಿತು. ಕೃಷಿಕ್ ಮುಕ್ತಿ ಸಂಗ್ರಾಮ ಸಮಿತಿ, ಅಖಿಲ ಭಾರತ ಕಿಸಾನ್ ಸಭಾ, ಆಶಾ, ಕರ್ನಾಟಕ ರಾಜ್ಯ ರೈತ ಸಂಘ, ಜನ ಚಳವಳಿಯ ರಾಷ್ಟ್ರೀಯ ಒಕ್ಕೂಟ, ಸ್ವರಾಜ್ ಅಭಿಯಾನ್ ಸೇರಿ ದೇಶದ ಸುಮಾರು 150 ಮುಖ್ಯ ರೈತಪರ/ ಜನಪರ ಹೋರಾಟಗಳು ಸಂಘಟನೆಗಳು ಈ ಸಮಿತಿಯ ಭಾಗವಾಗಿವೆ.
ನಮ್ಮದೆರಡೇ ಬೇಡಿಕೆಗಳು
ಕೃಷಿ ಬಿಕ್ಕಟ್ಟಿನ ಎಲ್ಲಾ ಸಮಸ್ಯೆಗಳ ವಿವರ ಈ ಎರಡು ಮೂಲಗಳಲ್ಲಿ ಹುದುಗಿದೆ ಎಂಬ ಸ್ಪಷ್ಟತೆಯನ್ನು ಈ ಸಮನ್ವಯ ಸಮಿತಿ ಅನಾವರಣಗೊಳಿಸಿದೆ. ಈ ಸಮನ್ವಯ ಸಮಿತಿ ಎರಡು ಸ್ಥೂಲ ಬೇಡಿಕೆಗಲನ್ನು ಮುಂದಿಟ್ಟಿದೆ. ಬೆಳೆಗೆ ಲಾಭದಾಯಕ ಬೆಲೆ ಮತ್ತು ಋಣಮುಕ್ತ ರೈತ. ಬೆಳೆಗೆ ಲಾಭದಾಯಕ ಬೆಲೆ ನೀಡಿದರೆ ಸಾಲ ಮನ್ನಾದಂಥಾ ಬೇಡಿಕೆಗಳೇ ಅಸಂಗತವಾಗುತ್ತದೆ ಎಂಬ ನಿಲುವನ್ನು ಬಹುತೇಕ ಆರ್ಥಿಕ ತಜ್ಞರಷ್ಟೇ ಅಲ್ಲ, ರೈತ ನಾಯಕರೂ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವೇ ನೇಮಿಸಿದ ಸ್ವಾಮಿನಾಥನ್ ಸಮಿತಿ ಈ ಕುರಿತ ಶಿಫಾರಸ್ಸುಗಳನ್ನು ಪ್ರಕಟಗೊಳಿಸಿದ್ದು ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸದೇ ನುಣುಚಿಕೊಳ್ಳುತ್ತಿದೆ. ಕಳೆದ ವರ್ಷ ಸರ್ವೋಚ್ಛ ನ್ಯಾಯಾಲಯದಲ್ಲಿ ‘ಈ ಶಿಫಾರಸ್ಸನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ; ಅದು ಬೆಲೆ ಏರಿಕೆಗೆ ಕಾರಣವಾಗುತ್ತದೆ’ ಎಂದು ಅಫಿಡವಿಟ್ ಸಲ್ಲಿಸಿದ್ದ ಮೋದಿ ಈ ವರ್ಷ ರೈತ ಅಸಹನೆಯ ಬಿಸಿ ತಟ್ಟಿದ್ದರಿಂದ ಸ್ವಾಮಿನಾಥನ್ ಶಿಫಾರಸು ಜಾರಿ ಮಾಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಆದರೆ ಮೋದಿ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಚೌಕಟ್ಟು ಪೂರಾ ಲೊಳಲೊಟ್ಟೆ. ಸರ್ಕಾರ ಉತ್ಪಾದನಾ ವೆಚ್ಚ + 50% ಎಂಬ ಸೂತ್ರ ಮುಂದಿಟ್ಟಿರುವುದರಲ್ಲಿ ಭೂಮಿಯ ಬಂಡವಾಳದ ವೆಚ್ಚ ಮತ್ತಿತರ ಪರೋಕ್ಷ ವೆಚ್ಚಗಳು ಸೇರಿಲ್ಲ. ಅಷ್ಟೇಕೆ ಉತ್ಪಾದನಾ ವೆಚ್ಚವನ್ನು ಸರ್ಕಾರ ಲೆಕ್ಕ ಹಾಕಿದ್ದೇ ಅವಾಸ್ತವವಾಗಿದೆ. ಕುಗ್ಗಿದ ಉತ್ಪಾದನಾ ವೆಚ್ಚವನ್ನು ತಾನೇ ತೀರ್ಮಾನಿಸಿ ಅದರ ಆಧಾರದ ಮೇಲೆ ತಾನೇ ಬೆಲೆ ಘೋಷಿಸುವ ಸರ್ಕಾರದ ಅಡ್ಡ ಕಸುಬಿತನ ರೈತ ಮುಖಂಡರಿಗೆ ಅರ್ಥವಾಗಿದೆ.
ಈ ರೀತಿ ಅತಾರ್ಕಿಕವಾದ ಕನಿಷ್ಠ ಬೆಂಬಲ ಬೆಲೆಯೂ ರೈತರಿಗೆ ದಕ್ಕುತ್ತಿಲ್ಲ ಎಂಬುದನ್ನು ಸಾಬೀತುಪಡಿಸಲು ಈ ಸಮಿತಿಯು ದೇಶದ ಬಹುತೇಕ ಮಾರುಕಟ್ಟೆಗಳಿಗೆ ಹೋಗಿ ಅಧ್ಯಯನ ನಡೆಸಿದೆ. ಎಲ್ಲಾ ಕಡೆ ಒಂದೇ ಚಿತ್ರಣ. ಕನಿಷ್ಠ ಬೆಂಬಲ ಬೆಲೆ ಎನ್ನುವುದೇ ದೊಡ್ಡ ಮೋಸ. ಆದ್ದರಿಂದಲೇ ಲಾಭದಾಯಕ ಬೆಲೆ ಕುರಿತಂತೆ ನಿಷ್ಕರ್ಷೆಗೆ ಬರಲು ಕಾನೂನು ರೂಪಿಸಲೂ ಈ ಸಮಿತಿ ಒತ್ತಾಯಿಸುತ್ತಿದೆ. ಬೆಲೆ ಕುಸಿತದ ಸಮಯದಲ್ಲಿ ಸರ್ಕಾರದ ಮಧ್ಯಪ್ರವೇಶ, ಮಾರುಕಟ್ಟೆ ಬೆಲೆ ಮತ್ತು ಸರ್ಕಾರದ ಬೆಲೆಯ ಮಧ್ಯೆಯ ವ್ಯತ್ಯಾಸವನ್ನು ರೈತರಿಗೆ ಸಬ್ಸಿಡಿ ರೂಪದಲ್ಲಿ ನೀಡುವುದು ಎಲ್ಲಾ ಈ ಬೇಡಿಕೆಗಳಲ್ಲಿ ಸೇರಿದೆ.
ಈ ಸಮಿತಿ ಗಹನವಾಗಿ ಯೋಚಿಸಿರುವ ಇನ್ನೊಂದು ಆಯಾಮ ಸಾಲದ್ದು. ಋಣಮುಕ್ತ ರೈತ ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿರುವ ಸಮಿತಿ, ರೈತ ಸಂಕುಲ ಯಾವುದೇ ಋಣ ಬಾಧೆಯಿಂದ ನರಳದಂತೆ ಮಾಡುವ ಮಾರ್ಗೋಪಾಯಗಳನ್ನು ಸರ್ಕಾರ ರಚಿಸಬೇಕು ಎಂದು ಒತ್ತಾಯಿಸಿದೆ. ಮುಖ್ಯ ಅಂಶವೆಂದರೆ ಈ ಬೇಡಿಕೆ ಯಾಕೆ ಎಂಬುದಷ್ಟೇ ಅಲ್ಲ, ಇದನ್ನು ಹೇಗೆ ಮಾಡಬಹುದು ಎಂಬು ಅನುಷ್ಠಾನ ಯೊಗ್ಯ ಸಲಹೆಗಳೂ ಈ ಸಮಿತಿಯಲ್ಲಿದೆ. ಸರ್ಕಾರಗಳು ನುಣುಚಿಕೊಳ್ಳಲು ಸಾದ್ಯವೇ ಇಲ್ಲ!
ಹಾಗಿದ್ದರೆ ಸರ್ಕಾರಗಳು ಯಾಕೆ ನುಣುಚಿಕೊಳ್ಳುತ್ತಿವೆ?
ಈ ಚಳವಳಿ ಉತ್ತರಭಾರತದಲ್ಲಿ ಪ್ರಖರವಾಗಿ ಬೆಳೆಯುತ್ತಿರುವುದರ ಹಿಂದೆ ಭಾಜಪದ ರಾಜಕೀಯ ಹಿತಾಸಕ್ತಿಗಳ ಜನದ್ರೋಹ ಇದೆ. ಗ್ರಾಮೀಣ ವರ್ಗವನ್ನು ಭಾವುಕ ವಿಷಯಗಳ ಮೂಲಕ ಹಾದಿ ತಪ್ಪಿಸುತ್ತಾ ಆಡಳಿತದ ತಣ್ಣನೆ ಆಟದಲ್ಲಿ ಕಾರ್ಪೋರೇಟ್ ಹಿತಾಸಕ್ತಿಗೆ ಮಣೆ ಹಾಕುವ ಕೆಲಸ ಭಾಜಪ ಕಾಂಗ್ರೆಸ್ಸಿಗಿಂತಲೂ ತೀವ್ರವಾಗಿ ಮಾಡುತ್ತಿದೆ. ಕಾರ್ಪೋರೇಟ್ ಕುಳಗಳ ಕೆಟ್ಟ ಸಾಲಗಳನ್ನು ನಿರಂತರವಾಗಿ ಮನ್ನಾ ಮಾಡುತ್ತಾ ಬಂದಿರುವ ಈ ಸರ್ಕಾರ ಆ ನಷ್ಟ ತುಂಬಿಸಲು ಬ್ಯಾಂಕುಗಳಿಗೆ ಬಜೆಟ್ ಅನುದಾನ ಬೇರೆ ನೀಡುತ್ತಿದೆ. ಅರ್ಥಾತ್ ಕಾರ್ಪೋರೇಟ್ ನಷ್ಟವನ್ನು ನೇರಾ ನೇರಾ ಸರ್ಕಾರ ತುಂಬಿ ಕೊಡುತ್ತಿದೆ; ಅದೂ ನಮ್ಮ ತೆರಿಗೆ ಮೂಲಕ.
ಈ ಕಳ್ಳಾಟಕ್ಕೆ ಶಾಶ್ವತ ಕೊನೆ ಹೇಳಲು ಈ ಸಂಯುಕ್ತ ಸಮನ್ವಯ ಸಮಿತಿಯ ನೇತೃತ್ವದ ರೈತ ಹೋರಾಟ ನಿರ್ಧರಿಸಿದಂತಿದೆ. ಭಾಜಪ ತನ್ನ ಭಾವನಾತ್ಮಕ ಕೋಮು ಧ್ರುವೀಕರಣದ ಮೂಲಕ ಹುಲುಸು ಬೆಲೆ ಪಡೆದಿರುವ ರಾಜ್ಯಗಳಲ್ಲೇ ಈ ಭೂಕಂಪದ ಅದುರುವಿಕೆ ತೀವ್ರವಾಗುತ್ತಿದೆ. ಮೊದಲೇ ಅಭಿವೃದ್ಧಿ ಕುಂಠಿತವಾಗಿರುವ ಈ ರಾಜ್ಯಗಳಲ್ಲಿ ರೈತ ನಿರ್ಲಕ್ಷ್ಯವೂ ಸೇರಿಕೊಂಡರೆ ಅಧಿಕಾರಸ್ಥ ಪಕ್ಷಕ್ಕೆ ಅದಕ್ಕಿಂತ ದೊಡ್ಡ ಅಪಾಯದ ಸೂಚನೆ ಇಲ್ಲ. ದಕ್ಷಿಣದ ರಾಜ್ಯಗಳಲ್ಲಿ ಅದೂ ಕರ್ನಾಟಕದಲ್ಲಿ ಸ್ಥಳೀಯ ಮಂಥನದ ಸಂಕ್ರಮಣ ಸ್ಥಿತಿಯಲ್ಲಿ ಉತ್ತರದಷ್ಟು ತೀವ್ರ ಹೋರಾಟ ತಕ್ಷಣಕ್ಕೆ ಹೊಮ್ಮದು. ಆದರೆ ಈ ಚಳವಳಿ ರೈತ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಪಡೆವ ಸ್ಪಷ್ಠತೆಯೊಂದಿಗೆ ಹೊರಟಿರುವ ಕಾರಣ ಈ ವರ್ಷ ಅಭೂತಪೂರ್ವ ಚಳವಳಿ ಎಲ್ಲೆಡೆ ಭುಗಿಲೇಳಲಿದೆ. ಕರ್ನಾಟಕವೂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...