Homeಚಳವಳಿಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

ಉತ್ತರದಾದ್ಯಂತ ಪ್ರಶ್ನೆ ಕೇಳುತ್ತಿರುವ ರೈತರು

- Advertisement -
- Advertisement -

ಉತ್ತರ ಭಾರತದ ರೈತರು ಗ್ರಾಮ ಬಂದ್ ಪ್ರತಿಭಟನೆಯ ಹೋರಾಟ ಆರಂಭಿಸಿದ್ದಾರೆ. ತಮ್ಮ ಯಾವುದೇ ಉತ್ಪನ್ನವನ್ನೂ ಮಂಡಿಗಳಿಗೆ ಕಳಿಸುವುದಿಲ್ಲ; ಇಲ್ಲೇ ಕೊಳೆಯಲಿ ಪರವಾಗಿಲ್ಲ ಎಂಬ ವಿನೂತನ ಪ್ರತಿಭಟನೆ ಇದು. ಹಾಲು, ತರಕಾರಿ, ಹಣ್ಣುಗಳ ಪೂರೈಕೆ ನಗರಗಳಿಗೆ ಬಂದ್ ಆದಾಗಲೇ ನಗರಿಗರಿಗೆ ರೈತರ ಕಷ್ಟ ಗೊತ್ತಾಗುವುದು.
ಈ ಪ್ರತಿಭಟನೆ ಉತ್ತರ ಭಾರತದಲ್ಲಿ, ಅದರಲ್ಲೂ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಢ, ಮಹಾರಾಷ್ಟ್ರ ಮತ್ತು ಪಂಜಾಬುಗಳಲ್ಲಿ ತೀವ್ರ ಸ್ವರೂಪ ಪಡೆದಿದೆ. ಈ ಹೋರಾಟ ಭಾಜಪ ಆಳ್ವಿಕೆಯ ರಾಜ್ಯಗಳಲ್ಲಿ ತೀವ್ರವಾಗಿದೆ ಎನ್ನುವುದು ಕಾಕತಾಳೀಯ ಅಲ್ಲ; ಹಾಗೆಂದು ಅದು ರಾಜಕೀಯ ಕುತಂತ್ರದ ಆಟವೂ ಅಲ್ಲ. ಈ ರಾಜ್ಯಗಳ ಸರಕಾರಗಳು ರೈತರ ಬಗ್ಗೆ ಸತತವಾಗಿ ತಾತ್ಸಾರದ ಧೋರಣೆ ತಳೆದ ಕಾರಣ ರೈತರ ಬೇಗುದಿ ಹೆಚ್ಚಿದೆ. ಈ ಹೋರಾಟ ಏಕಾಏಕಿ ಹುಟ್ಟಿಕೊಂಡದ್ದೂ ಅಲ್ಲ, ಯಾವುದೋ ಭಾವನಾತಕ ಕಾರಣಕ್ಕೇ ಭುಗಿಲೆದ್ದ ಪ್ರತಿಭಟನೆಯೂ ಅಲ್ಲ. ಇದು ಭೂಕಂಪದ ಮೊದಲಿನ ಸರಣಿ ಗುರುಗಾಟದ ಹಾಗೆ; ಕಳೆದ ಕೆಲವು ವರ್ಷಗಳಿಂದ ಅಲ್ಲಿಇಲ್ಲಿ ವ್ಯಕ್ತವಾಗುತ್ತಲೇ ಇದೆ.
ಕಳೆದ ವರ್ಷ ಮಧ್ಯಪ್ರದೇಶದ ಮಾಂಡ್‍ಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಪೋಲೀಸರು ಗೋಲೀಬಾರ್ ಮಾಡಿ ಆರು ರೈತರ ಜೀವ ಹೋಗಿತ್ತು. ಈ ದಮನದ ನೆನಪು ರೈತರಲ್ಲಿ ಇನ್ನೂ ಹಸಿಯಾಗಿದೆ. ಈ ಗೋಲೀಬಾರಿನ ಬಳಿಕ ಸರ್ಕಾರ ಅಷ್ಟಿಷ್ಟು ಕ್ರಮ ಕೈಗೊಂಡರೂ ಮತ್ತೆ ರೈತ ನಿರ್ಲಕ್ಷದ ಜಾಡಿಗೆ ಮರಳಿದೆ. ಈ ಬಾರಿಯ ಗ್ರಾಮ ಬಂದ್ ಹೋರಾಟದ ಭಾಗವಾಗಿ ಮಾಂಡ್‍ಸೂರಿನಲ್ಲಿ ಇದೇ ಜೂನ್ ಆರರಂದು, ಗೋಲೀಬಾರಿನಲ್ಲಿ ಹುತಾತ್ಮರಾದ ರೈತರನ್ನು ಸ್ಮರಿಸುವ ಹುತಾತ್ಮ ದಿನಾಚರಣೆಯೂ ನಡೆಯಲಿದೆ. ಸಾವಿರಾರು ರೈತರು ಸೇರಲಿದ್ದಾರೆ.
ಈ ಹೋರಾಟಕ್ಕೆ ಇನ್ನೊಂದು ಆಯಾಮವಿದೆ. ಇಷ್ಟು ದಿನ ಆಯಾ ರಾಜ್ಯ ಅಥವಾ ಸಂದರ್ಭಗಳಲ್ಲಿ ಬೇಗುದಿ ಅನುಭವಿಸಿದ ರೈತರು ಬೀದಿಗಿಳಿದಾಗ ಉಳಿದ ಸಂಘಟನೆಗಳು ಅದಕ್ಕೆ ಬೆಂಬಲ ನೀಡಿ ಹೋರಾಟದ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದರು. ಕಳೆದ ವರ್ಷದ ಮಧ್ಯಪ್ರದೇಶದ ರೈತ ಹೋರಾಟವಿರಬಹುದು, ಭೂ ಸ್ವಾಧೀನದ ವಿರುದ್ಧ ರಾಜಸ್ತಾನದಲ್ಲಿ ಭುಗಿಲೆದ್ದ ಹೋರಾಟ ಇರಬಹುದು. ಆದರೆ ಈ ಬಾರಿ ಕಳೆದ ಎರಡು ವರ್ಷಗಳಿಂದ ಸಮಾಲೊಚನೆ ನಡೆಸಿ ಸುಮಾರು 150 ರೈತಪರ ಸಂಘಟನೆಗಳ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರೂಪುತಳೆದಿದೆ. ಕಳೆದ ವರ್ಷದ ಜುಲೈನಲ್ಲಿ ಈ ಸಮಿತಿಗೊಂದು ಸಾಂಸ್ಥಿಕ ಸ್ವರೂಪವೂ ದೊರಕಿತು. ಕೃಷಿಕ್ ಮುಕ್ತಿ ಸಂಗ್ರಾಮ ಸಮಿತಿ, ಅಖಿಲ ಭಾರತ ಕಿಸಾನ್ ಸಭಾ, ಆಶಾ, ಕರ್ನಾಟಕ ರಾಜ್ಯ ರೈತ ಸಂಘ, ಜನ ಚಳವಳಿಯ ರಾಷ್ಟ್ರೀಯ ಒಕ್ಕೂಟ, ಸ್ವರಾಜ್ ಅಭಿಯಾನ್ ಸೇರಿ ದೇಶದ ಸುಮಾರು 150 ಮುಖ್ಯ ರೈತಪರ/ ಜನಪರ ಹೋರಾಟಗಳು ಸಂಘಟನೆಗಳು ಈ ಸಮಿತಿಯ ಭಾಗವಾಗಿವೆ.
ನಮ್ಮದೆರಡೇ ಬೇಡಿಕೆಗಳು
ಕೃಷಿ ಬಿಕ್ಕಟ್ಟಿನ ಎಲ್ಲಾ ಸಮಸ್ಯೆಗಳ ವಿವರ ಈ ಎರಡು ಮೂಲಗಳಲ್ಲಿ ಹುದುಗಿದೆ ಎಂಬ ಸ್ಪಷ್ಟತೆಯನ್ನು ಈ ಸಮನ್ವಯ ಸಮಿತಿ ಅನಾವರಣಗೊಳಿಸಿದೆ. ಈ ಸಮನ್ವಯ ಸಮಿತಿ ಎರಡು ಸ್ಥೂಲ ಬೇಡಿಕೆಗಲನ್ನು ಮುಂದಿಟ್ಟಿದೆ. ಬೆಳೆಗೆ ಲಾಭದಾಯಕ ಬೆಲೆ ಮತ್ತು ಋಣಮುಕ್ತ ರೈತ. ಬೆಳೆಗೆ ಲಾಭದಾಯಕ ಬೆಲೆ ನೀಡಿದರೆ ಸಾಲ ಮನ್ನಾದಂಥಾ ಬೇಡಿಕೆಗಳೇ ಅಸಂಗತವಾಗುತ್ತದೆ ಎಂಬ ನಿಲುವನ್ನು ಬಹುತೇಕ ಆರ್ಥಿಕ ತಜ್ಞರಷ್ಟೇ ಅಲ್ಲ, ರೈತ ನಾಯಕರೂ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವೇ ನೇಮಿಸಿದ ಸ್ವಾಮಿನಾಥನ್ ಸಮಿತಿ ಈ ಕುರಿತ ಶಿಫಾರಸ್ಸುಗಳನ್ನು ಪ್ರಕಟಗೊಳಿಸಿದ್ದು ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸದೇ ನುಣುಚಿಕೊಳ್ಳುತ್ತಿದೆ. ಕಳೆದ ವರ್ಷ ಸರ್ವೋಚ್ಛ ನ್ಯಾಯಾಲಯದಲ್ಲಿ ‘ಈ ಶಿಫಾರಸ್ಸನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ; ಅದು ಬೆಲೆ ಏರಿಕೆಗೆ ಕಾರಣವಾಗುತ್ತದೆ’ ಎಂದು ಅಫಿಡವಿಟ್ ಸಲ್ಲಿಸಿದ್ದ ಮೋದಿ ಈ ವರ್ಷ ರೈತ ಅಸಹನೆಯ ಬಿಸಿ ತಟ್ಟಿದ್ದರಿಂದ ಸ್ವಾಮಿನಾಥನ್ ಶಿಫಾರಸು ಜಾರಿ ಮಾಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಆದರೆ ಮೋದಿ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಚೌಕಟ್ಟು ಪೂರಾ ಲೊಳಲೊಟ್ಟೆ. ಸರ್ಕಾರ ಉತ್ಪಾದನಾ ವೆಚ್ಚ + 50% ಎಂಬ ಸೂತ್ರ ಮುಂದಿಟ್ಟಿರುವುದರಲ್ಲಿ ಭೂಮಿಯ ಬಂಡವಾಳದ ವೆಚ್ಚ ಮತ್ತಿತರ ಪರೋಕ್ಷ ವೆಚ್ಚಗಳು ಸೇರಿಲ್ಲ. ಅಷ್ಟೇಕೆ ಉತ್ಪಾದನಾ ವೆಚ್ಚವನ್ನು ಸರ್ಕಾರ ಲೆಕ್ಕ ಹಾಕಿದ್ದೇ ಅವಾಸ್ತವವಾಗಿದೆ. ಕುಗ್ಗಿದ ಉತ್ಪಾದನಾ ವೆಚ್ಚವನ್ನು ತಾನೇ ತೀರ್ಮಾನಿಸಿ ಅದರ ಆಧಾರದ ಮೇಲೆ ತಾನೇ ಬೆಲೆ ಘೋಷಿಸುವ ಸರ್ಕಾರದ ಅಡ್ಡ ಕಸುಬಿತನ ರೈತ ಮುಖಂಡರಿಗೆ ಅರ್ಥವಾಗಿದೆ.
ಈ ರೀತಿ ಅತಾರ್ಕಿಕವಾದ ಕನಿಷ್ಠ ಬೆಂಬಲ ಬೆಲೆಯೂ ರೈತರಿಗೆ ದಕ್ಕುತ್ತಿಲ್ಲ ಎಂಬುದನ್ನು ಸಾಬೀತುಪಡಿಸಲು ಈ ಸಮಿತಿಯು ದೇಶದ ಬಹುತೇಕ ಮಾರುಕಟ್ಟೆಗಳಿಗೆ ಹೋಗಿ ಅಧ್ಯಯನ ನಡೆಸಿದೆ. ಎಲ್ಲಾ ಕಡೆ ಒಂದೇ ಚಿತ್ರಣ. ಕನಿಷ್ಠ ಬೆಂಬಲ ಬೆಲೆ ಎನ್ನುವುದೇ ದೊಡ್ಡ ಮೋಸ. ಆದ್ದರಿಂದಲೇ ಲಾಭದಾಯಕ ಬೆಲೆ ಕುರಿತಂತೆ ನಿಷ್ಕರ್ಷೆಗೆ ಬರಲು ಕಾನೂನು ರೂಪಿಸಲೂ ಈ ಸಮಿತಿ ಒತ್ತಾಯಿಸುತ್ತಿದೆ. ಬೆಲೆ ಕುಸಿತದ ಸಮಯದಲ್ಲಿ ಸರ್ಕಾರದ ಮಧ್ಯಪ್ರವೇಶ, ಮಾರುಕಟ್ಟೆ ಬೆಲೆ ಮತ್ತು ಸರ್ಕಾರದ ಬೆಲೆಯ ಮಧ್ಯೆಯ ವ್ಯತ್ಯಾಸವನ್ನು ರೈತರಿಗೆ ಸಬ್ಸಿಡಿ ರೂಪದಲ್ಲಿ ನೀಡುವುದು ಎಲ್ಲಾ ಈ ಬೇಡಿಕೆಗಳಲ್ಲಿ ಸೇರಿದೆ.
ಈ ಸಮಿತಿ ಗಹನವಾಗಿ ಯೋಚಿಸಿರುವ ಇನ್ನೊಂದು ಆಯಾಮ ಸಾಲದ್ದು. ಋಣಮುಕ್ತ ರೈತ ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿರುವ ಸಮಿತಿ, ರೈತ ಸಂಕುಲ ಯಾವುದೇ ಋಣ ಬಾಧೆಯಿಂದ ನರಳದಂತೆ ಮಾಡುವ ಮಾರ್ಗೋಪಾಯಗಳನ್ನು ಸರ್ಕಾರ ರಚಿಸಬೇಕು ಎಂದು ಒತ್ತಾಯಿಸಿದೆ. ಮುಖ್ಯ ಅಂಶವೆಂದರೆ ಈ ಬೇಡಿಕೆ ಯಾಕೆ ಎಂಬುದಷ್ಟೇ ಅಲ್ಲ, ಇದನ್ನು ಹೇಗೆ ಮಾಡಬಹುದು ಎಂಬು ಅನುಷ್ಠಾನ ಯೊಗ್ಯ ಸಲಹೆಗಳೂ ಈ ಸಮಿತಿಯಲ್ಲಿದೆ. ಸರ್ಕಾರಗಳು ನುಣುಚಿಕೊಳ್ಳಲು ಸಾದ್ಯವೇ ಇಲ್ಲ!
ಹಾಗಿದ್ದರೆ ಸರ್ಕಾರಗಳು ಯಾಕೆ ನುಣುಚಿಕೊಳ್ಳುತ್ತಿವೆ?
ಈ ಚಳವಳಿ ಉತ್ತರಭಾರತದಲ್ಲಿ ಪ್ರಖರವಾಗಿ ಬೆಳೆಯುತ್ತಿರುವುದರ ಹಿಂದೆ ಭಾಜಪದ ರಾಜಕೀಯ ಹಿತಾಸಕ್ತಿಗಳ ಜನದ್ರೋಹ ಇದೆ. ಗ್ರಾಮೀಣ ವರ್ಗವನ್ನು ಭಾವುಕ ವಿಷಯಗಳ ಮೂಲಕ ಹಾದಿ ತಪ್ಪಿಸುತ್ತಾ ಆಡಳಿತದ ತಣ್ಣನೆ ಆಟದಲ್ಲಿ ಕಾರ್ಪೋರೇಟ್ ಹಿತಾಸಕ್ತಿಗೆ ಮಣೆ ಹಾಕುವ ಕೆಲಸ ಭಾಜಪ ಕಾಂಗ್ರೆಸ್ಸಿಗಿಂತಲೂ ತೀವ್ರವಾಗಿ ಮಾಡುತ್ತಿದೆ. ಕಾರ್ಪೋರೇಟ್ ಕುಳಗಳ ಕೆಟ್ಟ ಸಾಲಗಳನ್ನು ನಿರಂತರವಾಗಿ ಮನ್ನಾ ಮಾಡುತ್ತಾ ಬಂದಿರುವ ಈ ಸರ್ಕಾರ ಆ ನಷ್ಟ ತುಂಬಿಸಲು ಬ್ಯಾಂಕುಗಳಿಗೆ ಬಜೆಟ್ ಅನುದಾನ ಬೇರೆ ನೀಡುತ್ತಿದೆ. ಅರ್ಥಾತ್ ಕಾರ್ಪೋರೇಟ್ ನಷ್ಟವನ್ನು ನೇರಾ ನೇರಾ ಸರ್ಕಾರ ತುಂಬಿ ಕೊಡುತ್ತಿದೆ; ಅದೂ ನಮ್ಮ ತೆರಿಗೆ ಮೂಲಕ.
ಈ ಕಳ್ಳಾಟಕ್ಕೆ ಶಾಶ್ವತ ಕೊನೆ ಹೇಳಲು ಈ ಸಂಯುಕ್ತ ಸಮನ್ವಯ ಸಮಿತಿಯ ನೇತೃತ್ವದ ರೈತ ಹೋರಾಟ ನಿರ್ಧರಿಸಿದಂತಿದೆ. ಭಾಜಪ ತನ್ನ ಭಾವನಾತ್ಮಕ ಕೋಮು ಧ್ರುವೀಕರಣದ ಮೂಲಕ ಹುಲುಸು ಬೆಲೆ ಪಡೆದಿರುವ ರಾಜ್ಯಗಳಲ್ಲೇ ಈ ಭೂಕಂಪದ ಅದುರುವಿಕೆ ತೀವ್ರವಾಗುತ್ತಿದೆ. ಮೊದಲೇ ಅಭಿವೃದ್ಧಿ ಕುಂಠಿತವಾಗಿರುವ ಈ ರಾಜ್ಯಗಳಲ್ಲಿ ರೈತ ನಿರ್ಲಕ್ಷ್ಯವೂ ಸೇರಿಕೊಂಡರೆ ಅಧಿಕಾರಸ್ಥ ಪಕ್ಷಕ್ಕೆ ಅದಕ್ಕಿಂತ ದೊಡ್ಡ ಅಪಾಯದ ಸೂಚನೆ ಇಲ್ಲ. ದಕ್ಷಿಣದ ರಾಜ್ಯಗಳಲ್ಲಿ ಅದೂ ಕರ್ನಾಟಕದಲ್ಲಿ ಸ್ಥಳೀಯ ಮಂಥನದ ಸಂಕ್ರಮಣ ಸ್ಥಿತಿಯಲ್ಲಿ ಉತ್ತರದಷ್ಟು ತೀವ್ರ ಹೋರಾಟ ತಕ್ಷಣಕ್ಕೆ ಹೊಮ್ಮದು. ಆದರೆ ಈ ಚಳವಳಿ ರೈತ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಪಡೆವ ಸ್ಪಷ್ಠತೆಯೊಂದಿಗೆ ಹೊರಟಿರುವ ಕಾರಣ ಈ ವರ್ಷ ಅಭೂತಪೂರ್ವ ಚಳವಳಿ ಎಲ್ಲೆಡೆ ಭುಗಿಲೇಳಲಿದೆ. ಕರ್ನಾಟಕವೂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...