Homeಮುಖಪುಟಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ 'ಡೋಂಟ್‌ ಕೇರ್' ಎನ್ನುತ್ತಿರುವ ಬಿಜೆಪಿ...

ಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ ‘ಡೋಂಟ್‌ ಕೇರ್’ ಎನ್ನುತ್ತಿರುವ ಬಿಜೆಪಿ ಶಾಸಕ

- Advertisement -
- Advertisement -

ಭಾರೀ ಪೈಪೋಟಿಯ ನಡುವೆಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಜಿ ಸಚಿವ ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ. ಆದರೆ, ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸ್ವಪಕ್ಷೀಯರ ವಿರೋಧ ತಲೆನೋವಾಗಿ ಪರಿಣಮಿಸಿದೆ.

ಇಡೀ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದು, ಶಾಸಕ ಎಸ್‌.ಆರ್‌. ವಿಶ್ವನಾಥ್ ಅವರು ಸುಧಾಕರ್ ಸ್ಫರ್ಧೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗ ಅಲೋಕ್‌ ಅವರಿಗೆ ಟಿಕೆಡ್ ಕೊಡಿಸುವಲ್ಲಿ ವಿಫಲರಾಗಿರುವ ಯಲಹಂಕ ಬಿಜೆಪಿ ಶಾಸಕರು, ಸುಧಾಕರ್ ಜತಗೆ ವೇದಿಕೆ ಹಂಚಿಕೊಳ್ಳುವುದಿಲ್ಲ, ಅವರ ಪರ ಪ್ರಚಾರ ನಡೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಹಲವು ಭಾರಿ ಕರೆ ಮಾಡಿದರೂ ಉತ್ತರಿಸದ ವಿಶ್ವನಾಥ್, ಸುಧಾಕರ್ ಮನೆ ಬಾಗಿಲಿಗೆ ಬಂದರೂ ಭೇಟಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಯಲಹಂಕ ಶಾಸಕರ ಈ ನಡೆಯು ಸುಧಾಕರ್‌ಗೆ ಭಾರೀ ಮುಜುಗರ ಉಂಟು ಮಾಡಿರುವುದರ ಜತೆಗೆ, ಸೋಲಿನ ಭೀತಿಗೂ ಕಾರಣವಾಗಿದೆ.

ಚಿಕ್ಕಬಳ್ಳಾಪುರದಿಂದ ಕೆ ಸುಧಾಕರ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲ ನಾಯಕರಿಗೆ ಟಿಕೆಟ್ ನಿರಾಕರಿಸಿರುವುದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ.ಸುಧಾಕರ್ ಅವರನ್ನು ಕಣಕ್ಕಿಳಿಸುವ ಪಕ್ಷದ ನಿರ್ಧಾರ ಯಲಹಂಕದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಬೆಂಬಲಿಗರು ಇನ್ನೂ ಒಪ್ಪಿಕೊಂಡಿಲ್ಲ.

ವಿಶ್ವನಾಥ್ ಅವರು ಇದೇ ಸ್ಥಾನದಿಂದ ತಮ್ಮ ಪುತ್ರ ಅಲೋಕ್‌ಗೆ ಟಿಕೆಟ್ ನೀಡುವಂತೆ ಕೋರಿದ್ದರು. ಆದರೆ, ಪಕ್ಷವು ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸುಧಾಕರ್ ಅವರನ್ನು ಆಯ್ಕೆ ಮಾಡಿದೆ. ಭಾನುವಾರ ಕೆ.ಸುಧಾಕರ್ ಎಸ್.ಆರ್.ವಿಶ್ವನಾಥ್ ಅವರನ್ನು ಭೇಟಿ ಮಾಡಲು ತೆರಳಿದ್ದರು, ಆದರೆ ಅವರು ಮನೆಯಲ್ಲಿಲ್ಲ ಎಂದು ತಿಳಿಸಿದ ಅವರ ಬೆಂಬಲಿಗರು, ಮನೆ ಒಳಗೂ ಕರೆಯದೇ ವಾಪಸ್ ಕಳುಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಶಾಸಕ ಎಸ್‌ಆರ್ ವಿಶ್ವನಾಥ್ ರೆಬೆಲ್ ಆಗಿದ್ದಾರೆ. ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಕೊಂಡಿರುವ ಅವರು, ವರಿಷ್ಠರ ಮಾತಿಗೂ ಕೇರ್ ಮಾಡದೆ ಸುಧಾಖರ್ ವಿರುದ್ಧವಾಗಿ ನಿಂತಿದ್ದಾರೆ. ಟಿಕೆಟ್ ಘೋಷಣೆಯಾಗಿ ವಾರವಾದರೂ ವಿಶ್ವನಾಥ್ ಮುನಿಸು ತಣಿಸುವಲ್ಲಿ ರಾಜ್ಯ ನಾಯಕರು ಮತ್ತು ಸೂಧಾಖರ್ ವಿಫಲರಾಗಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿನ ಭಿನ್ನಮತ ತೀವ್ರಗೊಂಡಿದ್ದು, ಬಿಜೆಪಿ ನಾಯಕರಲ್ಲಿ ಆತಂಕ ಹೆಚ್ಚಾಗಿದೆ. ಎಸ್‌.ಆರ್. ವಿಶ್ವನಾಥ್ ಭೇಟಿ ಮಾಡಲು ಒಪ್ಪದ ಹಿನ್ನೆಲೆ ಸುಧಾಕರ್‌ಗೆ ಮುಜುಗರವುಂಟಾಗಿ ವಾಪಸ್ ತೆರಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, “ಯಲಹಂಕ ಶಾಸಕರಾದ ಎಸ್‌ಆರ್ ವಿಶ್ವನಾಥ್ ನಮ್ಮ ಸ್ನೇಹಿತರು. ಹಲವಾರು ಸಲ ನಾನು ಕರೆ ಮಾಡಿದ್ದೆ, ಮೆಸೇಜ್ ಮಾಡಿದ್ದೆ. ಅದಕ್ಕೆ ಯಾವುದೇ ಉತ್ತರ ಇಲ್ಲ. ಯಾವುದಕ್ಕೂ ಸ್ಪಂದಿಸಿರಲಿಲ್ಲ. ನಮ್ಮ ನಾಯಕರು ಯಡಿಯೂರಪ್ಪ ಅವರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೇ ಚುನಾವಣೆ ಕೊನೆಯಲ್ಲ. ನಮ್ಮ ನಾಯಕರು ಸಮಸ್ಯೆ ಬಗೆಹರಿಸುತ್ತಾರೆ. ಇದರ ನಡುವೆ ನಮ್ಮ ಅವರ ಭೇಟಿ ಸಾಧ್ಯವಾಗಿಲ್ಲ. ಕೆಲವು ರಾಜಕಾರಣದಲ್ಲಿ ಎಲ್ಲವು ಸರಾಗವಾಗಿ ನಡೆದರೆ ಅದು ರಾಜಕಾರಣವಲ್ಲ. ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಬೇಕು. ನನ್ನ ಮತ್ತು ಅವರ ನಡುವೆ ವೈಯಕ್ತಿಕ ಕಲಹಗಳು ಏನು ಇಲ್ಲ. ನಾನು ಸೇರಿ ಮೋದಿ ಅವರ ಹೆಸರು ಹೇಳಿ ಮತ ಕೇಳುತ್ತಿರೋದು. ಏ.4ರಂದು ನಾಮಪತ್ರ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಅಧಿಕೃತ ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಸುಧಾಕರ್ ನಡೆಗೆ ಎಸ್‌ಆರ್ ವಿಶ್ವನಾಥ್ ಕಿಡಿಕಾರಿದ್ದಾರೆ. “ಮಾಧ್ಯಮದವರಿಗೆ ಮಾಹಿತಿ ನೀಡಿದರೆ ಸಾಕೇ? ನಮ್ಮ ಮನೆಗೆ ಬರುವಾಗ ನನಗೆ ಹೇಳೋದು ಬೇಡ್ವಾ? ನಾನ್ಯಾಕೆ ಒಬ್ಬನೇ ಮಾತಾಡಲಿ? ಹೇಳಿದ್ದರೆ ಕಾರ್ಯಕರ್ತರನ್ನು ಸೇರಿಸಿ ಅವರ ಎದುರೇ ಮಾತನಾಡುತ್ತಿದ್ದೆ. ಅಮಿತ್ ಶಾ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಅಮಿತ್ ಶಾ ಕಾರ್ಯಕ್ರಮದ ತಯಾರಿಗಳನ್ನು ನೋಡಿಕೊಳ್ಳಲು ತೆರಳುತ್ತೇನೆ” ಎಂದರು.

ದೊಡ್ಡಬಳ್ಳಾಪುರ ಬಿಜೆಪಿ ಶಾಸಕರ ಬೆಂಬಲ ಯಾರಿಗೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಎಸ್‌ಆರ್ ವಿಶ್ವನಾಥ್ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ದೊಡ್ಡಬಳ್ಳಾಪುರ ಬಿಜೆಪಿ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರ ನಡೆ ಏನು ಎಂಬುದು ಕುತೂಹಲ ಮೂಡಿದೆ. ಏಕೆಂದರೆ, ಶಾಸಕ ಧೀರಜ್ ಅವರು ವಿಶ್ವನಾಥ್ ಅವರಿಗೆ ಆಪ್ತರಾಗಿದ್ದಾರೆ; ದೊಡ್ಡಬಳ್ಳಾಪುರದಲ್ಲಿ ಧೀರಜ್ ಗೆಲುವಿಗೆ ವಿಶ್ವನಾಥ್ ಸಾಕಷ್ಟು ಶ್ರಮ ಹಾಕಿದ್ದಾರೆ ಎನ್ನಲಾಗಿದ್ದು, ಅವರು ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಕರ್ನಾಟಕದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ,

2019ರ ಸಾರ್ವತ್ರಿಕ ಚುನಾವಣೆ ನಡೆದಾಗ, 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಕೇಜ್ರಿವಾಲ್ ಕಸ್ಟಡಿ ಇಂದು ಅಂತ್ಯ: ಕೋರ್ಟ್‌ಗೆ ಹಾಜರುಪಡಿಸಲಿರುವ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...