Homeಮುಖಪುಟಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ 'ಡೋಂಟ್‌ ಕೇರ್' ಎನ್ನುತ್ತಿರುವ ಬಿಜೆಪಿ...

ಸುಧಾಕರ್ ಕರೆ ಸ್ವೀಕರಿಸದ ಎಸ್‌.ಆರ್. ವಿಶ್ವನಾಥ್; ಮನೆ ಬಾಗಿಲಿಗೆ ಬಂದ್ರೂ ‘ಡೋಂಟ್‌ ಕೇರ್’ ಎನ್ನುತ್ತಿರುವ ಬಿಜೆಪಿ ಶಾಸಕ

- Advertisement -
- Advertisement -

ಭಾರೀ ಪೈಪೋಟಿಯ ನಡುವೆಯೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಜಿ ಸಚಿವ ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ. ಆದರೆ, ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸ್ವಪಕ್ಷೀಯರ ವಿರೋಧ ತಲೆನೋವಾಗಿ ಪರಿಣಮಿಸಿದೆ.

ಇಡೀ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದು, ಶಾಸಕ ಎಸ್‌.ಆರ್‌. ವಿಶ್ವನಾಥ್ ಅವರು ಸುಧಾಕರ್ ಸ್ಫರ್ಧೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗ ಅಲೋಕ್‌ ಅವರಿಗೆ ಟಿಕೆಡ್ ಕೊಡಿಸುವಲ್ಲಿ ವಿಫಲರಾಗಿರುವ ಯಲಹಂಕ ಬಿಜೆಪಿ ಶಾಸಕರು, ಸುಧಾಕರ್ ಜತಗೆ ವೇದಿಕೆ ಹಂಚಿಕೊಳ್ಳುವುದಿಲ್ಲ, ಅವರ ಪರ ಪ್ರಚಾರ ನಡೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಹಲವು ಭಾರಿ ಕರೆ ಮಾಡಿದರೂ ಉತ್ತರಿಸದ ವಿಶ್ವನಾಥ್, ಸುಧಾಕರ್ ಮನೆ ಬಾಗಿಲಿಗೆ ಬಂದರೂ ಭೇಟಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಯಲಹಂಕ ಶಾಸಕರ ಈ ನಡೆಯು ಸುಧಾಕರ್‌ಗೆ ಭಾರೀ ಮುಜುಗರ ಉಂಟು ಮಾಡಿರುವುದರ ಜತೆಗೆ, ಸೋಲಿನ ಭೀತಿಗೂ ಕಾರಣವಾಗಿದೆ.

ಚಿಕ್ಕಬಳ್ಳಾಪುರದಿಂದ ಕೆ ಸುಧಾಕರ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲ ನಾಯಕರಿಗೆ ಟಿಕೆಟ್ ನಿರಾಕರಿಸಿರುವುದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ.ಸುಧಾಕರ್ ಅವರನ್ನು ಕಣಕ್ಕಿಳಿಸುವ ಪಕ್ಷದ ನಿರ್ಧಾರ ಯಲಹಂಕದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಬೆಂಬಲಿಗರು ಇನ್ನೂ ಒಪ್ಪಿಕೊಂಡಿಲ್ಲ.

ವಿಶ್ವನಾಥ್ ಅವರು ಇದೇ ಸ್ಥಾನದಿಂದ ತಮ್ಮ ಪುತ್ರ ಅಲೋಕ್‌ಗೆ ಟಿಕೆಟ್ ನೀಡುವಂತೆ ಕೋರಿದ್ದರು. ಆದರೆ, ಪಕ್ಷವು ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಸುಧಾಕರ್ ಅವರನ್ನು ಆಯ್ಕೆ ಮಾಡಿದೆ. ಭಾನುವಾರ ಕೆ.ಸುಧಾಕರ್ ಎಸ್.ಆರ್.ವಿಶ್ವನಾಥ್ ಅವರನ್ನು ಭೇಟಿ ಮಾಡಲು ತೆರಳಿದ್ದರು, ಆದರೆ ಅವರು ಮನೆಯಲ್ಲಿಲ್ಲ ಎಂದು ತಿಳಿಸಿದ ಅವರ ಬೆಂಬಲಿಗರು, ಮನೆ ಒಳಗೂ ಕರೆಯದೇ ವಾಪಸ್ ಕಳುಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಶಾಸಕ ಎಸ್‌ಆರ್ ವಿಶ್ವನಾಥ್ ರೆಬೆಲ್ ಆಗಿದ್ದಾರೆ. ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಕೊಂಡಿರುವ ಅವರು, ವರಿಷ್ಠರ ಮಾತಿಗೂ ಕೇರ್ ಮಾಡದೆ ಸುಧಾಖರ್ ವಿರುದ್ಧವಾಗಿ ನಿಂತಿದ್ದಾರೆ. ಟಿಕೆಟ್ ಘೋಷಣೆಯಾಗಿ ವಾರವಾದರೂ ವಿಶ್ವನಾಥ್ ಮುನಿಸು ತಣಿಸುವಲ್ಲಿ ರಾಜ್ಯ ನಾಯಕರು ಮತ್ತು ಸೂಧಾಖರ್ ವಿಫಲರಾಗಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿನ ಭಿನ್ನಮತ ತೀವ್ರಗೊಂಡಿದ್ದು, ಬಿಜೆಪಿ ನಾಯಕರಲ್ಲಿ ಆತಂಕ ಹೆಚ್ಚಾಗಿದೆ. ಎಸ್‌.ಆರ್. ವಿಶ್ವನಾಥ್ ಭೇಟಿ ಮಾಡಲು ಒಪ್ಪದ ಹಿನ್ನೆಲೆ ಸುಧಾಕರ್‌ಗೆ ಮುಜುಗರವುಂಟಾಗಿ ವಾಪಸ್ ತೆರಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, “ಯಲಹಂಕ ಶಾಸಕರಾದ ಎಸ್‌ಆರ್ ವಿಶ್ವನಾಥ್ ನಮ್ಮ ಸ್ನೇಹಿತರು. ಹಲವಾರು ಸಲ ನಾನು ಕರೆ ಮಾಡಿದ್ದೆ, ಮೆಸೇಜ್ ಮಾಡಿದ್ದೆ. ಅದಕ್ಕೆ ಯಾವುದೇ ಉತ್ತರ ಇಲ್ಲ. ಯಾವುದಕ್ಕೂ ಸ್ಪಂದಿಸಿರಲಿಲ್ಲ. ನಮ್ಮ ನಾಯಕರು ಯಡಿಯೂರಪ್ಪ ಅವರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೇ ಚುನಾವಣೆ ಕೊನೆಯಲ್ಲ. ನಮ್ಮ ನಾಯಕರು ಸಮಸ್ಯೆ ಬಗೆಹರಿಸುತ್ತಾರೆ. ಇದರ ನಡುವೆ ನಮ್ಮ ಅವರ ಭೇಟಿ ಸಾಧ್ಯವಾಗಿಲ್ಲ. ಕೆಲವು ರಾಜಕಾರಣದಲ್ಲಿ ಎಲ್ಲವು ಸರಾಗವಾಗಿ ನಡೆದರೆ ಅದು ರಾಜಕಾರಣವಲ್ಲ. ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗಬೇಕು. ನನ್ನ ಮತ್ತು ಅವರ ನಡುವೆ ವೈಯಕ್ತಿಕ ಕಲಹಗಳು ಏನು ಇಲ್ಲ. ನಾನು ಸೇರಿ ಮೋದಿ ಅವರ ಹೆಸರು ಹೇಳಿ ಮತ ಕೇಳುತ್ತಿರೋದು. ಏ.4ರಂದು ನಾಮಪತ್ರ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಅಧಿಕೃತ ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಸುಧಾಕರ್ ನಡೆಗೆ ಎಸ್‌ಆರ್ ವಿಶ್ವನಾಥ್ ಕಿಡಿಕಾರಿದ್ದಾರೆ. “ಮಾಧ್ಯಮದವರಿಗೆ ಮಾಹಿತಿ ನೀಡಿದರೆ ಸಾಕೇ? ನಮ್ಮ ಮನೆಗೆ ಬರುವಾಗ ನನಗೆ ಹೇಳೋದು ಬೇಡ್ವಾ? ನಾನ್ಯಾಕೆ ಒಬ್ಬನೇ ಮಾತಾಡಲಿ? ಹೇಳಿದ್ದರೆ ಕಾರ್ಯಕರ್ತರನ್ನು ಸೇರಿಸಿ ಅವರ ಎದುರೇ ಮಾತನಾಡುತ್ತಿದ್ದೆ. ಅಮಿತ್ ಶಾ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಅಮಿತ್ ಶಾ ಕಾರ್ಯಕ್ರಮದ ತಯಾರಿಗಳನ್ನು ನೋಡಿಕೊಳ್ಳಲು ತೆರಳುತ್ತೇನೆ” ಎಂದರು.

ದೊಡ್ಡಬಳ್ಳಾಪುರ ಬಿಜೆಪಿ ಶಾಸಕರ ಬೆಂಬಲ ಯಾರಿಗೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಎಸ್‌ಆರ್ ವಿಶ್ವನಾಥ್ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ದೊಡ್ಡಬಳ್ಳಾಪುರ ಬಿಜೆಪಿ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರ ನಡೆ ಏನು ಎಂಬುದು ಕುತೂಹಲ ಮೂಡಿದೆ. ಏಕೆಂದರೆ, ಶಾಸಕ ಧೀರಜ್ ಅವರು ವಿಶ್ವನಾಥ್ ಅವರಿಗೆ ಆಪ್ತರಾಗಿದ್ದಾರೆ; ದೊಡ್ಡಬಳ್ಳಾಪುರದಲ್ಲಿ ಧೀರಜ್ ಗೆಲುವಿಗೆ ವಿಶ್ವನಾಥ್ ಸಾಕಷ್ಟು ಶ್ರಮ ಹಾಕಿದ್ದಾರೆ ಎನ್ನಲಾಗಿದ್ದು, ಅವರು ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಕರ್ನಾಟಕದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಸ್ಥಾನಗಳಲ್ಲಿ ಮತ್ತು ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ,

2019ರ ಸಾರ್ವತ್ರಿಕ ಚುನಾವಣೆ ನಡೆದಾಗ, 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಇದನ್ನೂ ಓದಿ; ಕೇಜ್ರಿವಾಲ್ ಕಸ್ಟಡಿ ಇಂದು ಅಂತ್ಯ: ಕೋರ್ಟ್‌ಗೆ ಹಾಜರುಪಡಿಸಲಿರುವ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...