Homeಸಿನಿಮಾಕ್ರೀಡೆಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

ಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ಇಂದು ನಡೆಯಲಿವೆ. ಇಂದು ಸಂಜೆ 7.30ಕ್ಕೆ ಆರಂಭವಾಗುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ.

ಅದೇ ರೀತಿ ಇಂದು ರಾತ್ರಿ 8.30ಕ್ಕೆ ಆರಂಭವಾಗುವ ಎರಡನೇ ಎಲಿಮಿನೇಟರ್ ಪಂದ್ಯ ಬೆಂಗಳೂರು ಬುಲ್ಸ್ v/s ಗುಜರಾತ್ ಗೈಂಟ್ಸ್ ನಡುವೆ ನಡೆಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಗುಜರಾತ್‌ ಸೆಮಿಫೈಣಲ್ ಪ್ರವೇಶಿಸುತ್ತದೆ. ಫೈನಲ್ ಪಂದ್ಯ ಫೆಬ್ರವರಿ 25ರ ಶುಕ್ರವಾರ ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಹೊರ ಹುರುಪಿನಲ್ಲಿ ಬೆಂಗಳೂರು ಬುಲ್ಸ್

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ತನ್ನ ಕೊನೆಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 22 ಪಾಯಿಂಟ್‌ಗಳ ಬೃಹತ್ ಗೆಲುವು ದಾಖಲಿಸಿತ್ತು. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ರೈಡಿಂಗ್‌ನಲ್ಲಿ ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...