Homeರಂಜನೆಕ್ರೀಡೆಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

ಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ಇಂದು ನಡೆಯಲಿವೆ. ಇಂದು ಸಂಜೆ 7.30ಕ್ಕೆ ಆರಂಭವಾಗುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ.

ಅದೇ ರೀತಿ ಇಂದು ರಾತ್ರಿ 8.30ಕ್ಕೆ ಆರಂಭವಾಗುವ ಎರಡನೇ ಎಲಿಮಿನೇಟರ್ ಪಂದ್ಯ ಬೆಂಗಳೂರು ಬುಲ್ಸ್ v/s ಗುಜರಾತ್ ಗೈಂಟ್ಸ್ ನಡುವೆ ನಡೆಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಗುಜರಾತ್‌ ಸೆಮಿಫೈಣಲ್ ಪ್ರವೇಶಿಸುತ್ತದೆ. ಫೈನಲ್ ಪಂದ್ಯ ಫೆಬ್ರವರಿ 25ರ ಶುಕ್ರವಾರ ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಹೊರ ಹುರುಪಿನಲ್ಲಿ ಬೆಂಗಳೂರು ಬುಲ್ಸ್

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ತನ್ನ ಕೊನೆಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 22 ಪಾಯಿಂಟ್‌ಗಳ ಬೃಹತ್ ಗೆಲುವು ದಾಖಲಿಸಿತ್ತು. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ರೈಡಿಂಗ್‌ನಲ್ಲಿ ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...