Homeಸಿನಿಮಾಕ್ರೀಡೆಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

ಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ಇಂದು ನಡೆಯಲಿವೆ. ಇಂದು ಸಂಜೆ 7.30ಕ್ಕೆ ಆರಂಭವಾಗುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ.

ಅದೇ ರೀತಿ ಇಂದು ರಾತ್ರಿ 8.30ಕ್ಕೆ ಆರಂಭವಾಗುವ ಎರಡನೇ ಎಲಿಮಿನೇಟರ್ ಪಂದ್ಯ ಬೆಂಗಳೂರು ಬುಲ್ಸ್ v/s ಗುಜರಾತ್ ಗೈಂಟ್ಸ್ ನಡುವೆ ನಡೆಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಗುಜರಾತ್‌ ಸೆಮಿಫೈಣಲ್ ಪ್ರವೇಶಿಸುತ್ತದೆ. ಫೈನಲ್ ಪಂದ್ಯ ಫೆಬ್ರವರಿ 25ರ ಶುಕ್ರವಾರ ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಹೊರ ಹುರುಪಿನಲ್ಲಿ ಬೆಂಗಳೂರು ಬುಲ್ಸ್

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ತನ್ನ ಕೊನೆಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 22 ಪಾಯಿಂಟ್‌ಗಳ ಬೃಹತ್ ಗೆಲುವು ದಾಖಲಿಸಿತ್ತು. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ರೈಡಿಂಗ್‌ನಲ್ಲಿ ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...