Homeಸಿನಿಮಾಕ್ರೀಡೆಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

ಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ಇಂದು ನಡೆಯಲಿವೆ. ಇಂದು ಸಂಜೆ 7.30ಕ್ಕೆ ಆರಂಭವಾಗುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ.

ಅದೇ ರೀತಿ ಇಂದು ರಾತ್ರಿ 8.30ಕ್ಕೆ ಆರಂಭವಾಗುವ ಎರಡನೇ ಎಲಿಮಿನೇಟರ್ ಪಂದ್ಯ ಬೆಂಗಳೂರು ಬುಲ್ಸ್ v/s ಗುಜರಾತ್ ಗೈಂಟ್ಸ್ ನಡುವೆ ನಡೆಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಗುಜರಾತ್‌ ಸೆಮಿಫೈಣಲ್ ಪ್ರವೇಶಿಸುತ್ತದೆ. ಫೈನಲ್ ಪಂದ್ಯ ಫೆಬ್ರವರಿ 25ರ ಶುಕ್ರವಾರ ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಹೊರ ಹುರುಪಿನಲ್ಲಿ ಬೆಂಗಳೂರು ಬುಲ್ಸ್

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ತನ್ನ ಕೊನೆಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 22 ಪಾಯಿಂಟ್‌ಗಳ ಬೃಹತ್ ಗೆಲುವು ದಾಖಲಿಸಿತ್ತು. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ರೈಡಿಂಗ್‌ನಲ್ಲಿ ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...