Homeಮುಖಪುಟಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

ಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

- Advertisement -
- Advertisement -

ʻನೀಂ ಕಡು ಕಾಫಿ ಬಲ್ಲೆ, ಕಡು ಖೋಟಾ ಬಲ್ಲೆಯಾ?ʼ

ʻನಿನ್ನೆ ಹುಟ್ಟಿದವನಿಗಿಂತ ಇವತ್ತು ಹುಟ್ಟಿದವ ಶಾಣ್ಯಾʼ ಅಂತ ಒಂದು ಗಾದಿ ಮಾತು ಅದ. ಅದು ಬ್ಯಾರೆ ಎಲ್ಲೆರ ಇದು ಸುಳ್ಳು ಆಗಬಹುದು, ಆದರ ತಂತ್ರಜ್ಞಾನದ ವಿಷಯದಾಗ ಅಗದೀ ಖರೆ.

ನಮ್ಮ ಯುವ ಸಾಫ್ಟವೇರು ತಂತ್ರಜ್ಞರು ಒಂದು ಕಂಪ್ಯೂಟರು, ಒಂದು ಇಂಟರನೆಟ್ಟು ಇಟಗೊಂಡು ಏನೇನೆಲ್ಲಾ ಮಾಡತಾರ ಅಂದರ ಕೇಳಬ್ಯಾಡರಿ. ಅವರ ಮಾಡಿದ ಒಂದೊಂದ ಕೆಲಸದ ಪರಿಣಾಮ ತಿಳಕೊಳ್ಳಿಕ್ಕೆ ನಮಗ ಭಾಳ ಟೈಂ ಬೇಕಾಗತದ. ಒಂದು ತಿಳಕೊಳ್ಳೋದರಾಗ ಇನ್ನೊಂದ ಬಂದಿರತದ.

ಕೆಲವೊಮ್ಮೆ ತಿಳಿಯಂಗೇ ಇಲ್ಲ.

ಈಗ ಅಂಥಾದ್ದೊಂದ ಬಂದದ. ಅದರ ಹೆಸರು ಕಡು ಖೋಟಾ. ಖೋಟಾ ಅನ್ನೋದು ನಮಗ ಎಲ್ಲಾರಿಗೂ ಗೊತ್ತು. ದಿನಾ ಅದನ್ನ ನೋಡತೇವಿ, ಕೇಳತೇವಿ, ನಂಬತೇವಿ. ಈಗ ಇದೇನಪಾ ಕಡು ಖೋಟಾ?

ಕಡು ಖೋಟಾ ಅಥವಾ ಡೀಪ್ ಫೇಕು ಅನ್ನೋ ತಂತ್ರಜ್ಞಾನ ನಮ್ಮ ಎಲ್ಲಾ ನಂಬಿಕೆಗಳನ್ನ, ತಿಳಿವಳಿಕೆಯನ್ನ ಬುಡಮೇಲು ಮಾಡುವಷ್ಟು ಶಕ್ತಿ ಇರುವಂಥಾದ್ದು. ಇದು ಮುಂದೆ ಎಂದೋ ಬರೋದಲ್ಲಾ. ಈಗಾಗಲೇ ಬಂದು ಬಿಟ್ಟದ. ಬರೇ ಇಂಗ್ಲಂಡು- ಅಮೆರಿಕಾದಾಗ ಬಂದಿಲ್ಲಾ, ನಮ್ಮ ಭಾರತ ವರ್ಷದಾಗ ಬಂದು ಬಿಟ್ಟದ.

ಮೊನ್ನೆ ದೆಹಲಿ ಚುನಾವಣೆಯೊಳಗ ಇದರ ಉಪಯೋಗ ಆಗೇದ ಅಂತ ತಂತ್ರಜ್ಞಾನ ಕಂಪನಿ ವೈಸ್ ವರದಿ ಮಾಡೇದ.

ಕಡು ಖೋಟಾ ಅಂದರ ತುಂಬ ತೀಕ್ಷ್ಣ ತಂತ್ರಜ್ಞಾನ ಉಪಯೋಗಿಸಿ ಸುಳ್ಳು ಸುಳ್ಳು ವಿಡಿಯೋಗಳನ್ನು ತಯಾರು ಮಾಡೋದು. ಯಾವುದು ಅಸಾಧ್ಯವೋ, ಯಾವುದು ಆಗಲಿಕ್ಕೆ ಸಾಧ್ಯವೇ ಇಲ್ಲವೋ ಅದನ್ನ ಆಗೇ ಬಿಟ್ಟದ ಅನ್ನೋಹಂಗ ತೋರಸೋದು. ಇದು ಸಣ್ಣ ಹುಡುಗರ ವಿಡಿಯೋಗೇಮೋ, ಅನಿಮೇಷನ್ ಕಾರ್ಟೂನೋ ಇದ್ದರ ಸಮಸ್ಯೆ ಇರಲಿಲ್ಲ. ಆದರ ಇದು ಆಗತಾ ಇರೋದು ಸುದ್ದಿ ಮಾಧ್ಯಮದಾಗ. ಕಮಲ ಹಾಸನ ಅವರ ಇಂಡಿಯನ್ ಸಿನಿಮಾದಾಗ ನೇತಾಜಿ ಜೊತೆಗೆ ಚಿತ್ರದ ನಾಯಕ ಓಡಾಡಿದಂಗ ಮಾಡಿದ್ದರು. ಆದರ ಅದು ಕೃತಕ ಅಂತ ಗೊತ್ತಾಗತಿತ್ತು. ಕಡು ಖೋಟಾ ಅಂದರ ಗೊತ್ತೇ ಆಗದ ಹಂಗ ಕಲಬೆರಕೆ ಮಾಡೋ ಕಲೆ. ಇದು ಎಷ್ಟು ಅಪಾಯಕಾರಿ ಅಂತ ಸ್ವಲ್ಪ ವಿಚಾರ ಮಾಡಿದರ ತಿಳೀತದ.

ಉದಾಹರಣೆಗೆ ಕಳೆದ ವಾರ ಇಂಗ್ಲಂಡಿನ ಇಂಜಿನಿಯರು ಒಬ್ಬ ಕನ್ಸರ್ವೇಟಿವ್ ಪಕ್ಷದ ಬೋರಿಸ ಜಾನಸನ್ ಅವರು ಲಿಬರಲ್ ಪಕ್ಷದ ಸಭೆಯೊಳಗ ಭಾಷಣ ಮಾಡಿದಂಗ, ಲಿಬರಲ್ ಪಕ್ಷದ ಜಿಮ್ಮಿ ಕಾರ್ಬಿನ್ ಅವರು ವಿರೋಧ ಪಕ್ಷದ ಸಮಾರಂಭದಾಗ ಸನ್ಮಾನ ಸ್ವೀಕರಿಸಿದ ಹಂಗ ವಿಡಿಯೋ ತಯಾರು ಮಾಡಿಬಿಟ್ಟ. ಇದನ್ನ ಭಾಳ ಮಂದಿ ನಂಬಿ ಷೇರು, ಲೈಕು, ಕಾಮೆಂಟು ಮಾಡಿದರು.

ಗ್ಯಾಬೋನ್ ದೇಶದ ಅಧ್ಯಕ್ಷ ಅಲಿ ಬೊಂಗೋ ಅವರು ಮಾಡಿದ ಭಾಷಣದ ವಿಡಿಯೋ ತುಣುಕಿನಿಂದ ಅವರ ದೇಶದಾಗ ಒಂದು ಕ್ಷಿಪ್ರಕ್ರಾಂತಿ ಆತು. ಹಿಂಸಾಚಾರ ಆತು. ಆದರ ಆ ಭಾಷಣ ಅವರು ಮಾಡಿರಲೇ ಇಲ್ಲ. ಅವರ ಹಳೇ ವಿಡಿಯೋಗಳ ತುಣುಕುಗಳನ್ನು ಸೇರಿಸಿ, ಅವಕ್ಕೆ ಹೊಸಾ ಅಂಗಿ- ಪ್ಯಾಂಟು ಹಾಕಿ ಖೋಟಾ ವಿಡಿಯೋ ತಯಾರು ಮಾಡಲಾಯಿತು. ಅದು ಇಷ್ಟೆಲ್ಲಾ ಘೋಟಾಲಾ ಮಾಡಿತು.

ಕಡು ಖೋಟಾ ವಿಡಿಯೋ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ಹೇಳಿ ಸ್ಲೋವಾಕಿಯಾದ ಒಬ್ಬ ಪುಣ್ಯಾತ್ಮ ಪ್ರಯತ್ನ ಮಾಡಲಿಕ್ಕೆ ಹತ್ಯಾನ. ಕಂಟ್ರೋಲ್- ಶಿಫ್ಟ್ – ಫೇಸ್ ಅನ್ನೋ ಯೂಟ್ಯೂಬ ವಿಡಿಯೋ ಸರಣಿಯೊಳಗ ಆತ ಇಲ್ಲಿಯವರೆಗೂ 20 ಕಡು ಖೋಟಾ ವಿಡಿಯೋಗಳನ್ನ ಹಾಕ್ಯಾನ. ಅದರಾಗಿನ ಉದಾಹರಣೆ ಅಂದರ 1973 ರಲ್ಲಿ ತೀರಿ ಹೋಗಿರೋ ನಟ ಬ್ರೂಸ್ ಲೀ ಯನ್ನು ಹೀರೋ ಮಾಡಿ 2010 ಸಿನಿಮಾಗಳನ್ನು ಮರು ತಯಾರಿ ಮಾಡೋದು, ಬ್ಯಾಟ ಮ್ಯಾನಿನ ಜೋಕರ ಪಾತ್ರ ತೊಗೊಂಡು ಹೋಗಿ ಇನ್ನಾವುದೋ ಸಂಬಂಧ ಇರಲಾರದ ಸಿನಿಮಾದಾಗ ವಿಲನ್ ಮಾಡೋದು, ಈಗ ಜೀವಂತ ಇರಲಾರದ ಡೇವಿಡ್ ಬೋವಿ ಅವರಂತಹಾ ಪಾಪ್- ರಾಕ್ ಹಾಡುಗಾರರ ಬಾಯಾಗಿಂದಾ ಹೊಸಾ ಹಾಡುಗಳನ್ನು ಹೇಳಿಸೋದು, ಇತ್ಯಾದಿ.

ಉದಾಹರಣೆ ನೋಡಿ:

ನೀವು ಕಲ್ಪನೆ ಮಾಡಿಕೊರಿ. ಇವತ್ತಿನ ಚಲನಚಿತ್ರ ನಟಿಯರು ಕಪ್ಪು- ಬಿಳುಪಿನ ಸಿನಿಮಾದಾಗ ಮಾಡೋದು, ಅಥವಾ ಮೀನಾಕುಮಾರಿ, ಉದಯ ಚಂದ್ರಿಕಾ ಸರ್ವಮಂಗಳಾ ಇವರೆಲ್ಲಾ ಇವನೇ ಶ್ರೀಮನ್ನಾರಾಯಣ, ಕೆಜಿಎಫ್ ನಂತಾ ಸಿನಿಮಾದಾಗ ಮಾಡೋದು ಹೆಂಗಿರತದ?

ಇಂಥದೆಲ್ಲಾ ಮಸ್ತ ಮಜಾ ಇರಬಹದು ಬಿಡ್ರಿ.

ಆದರ ಇಂಥಾದೆಲ್ಲಾ ರಾಜಕೀಯದಾಗ ಬಂದರ? ಏನಾದೀತು?

ಉದಾಹರಣೆಗೆ ರಾಹುಲ ಗಾಂಧಿ ನರೇಂದ್ರಮೋದಿ ಚುನಾವಣಾ ಪ್ರಚಾರಕ್ಕ ನಿಂತರ? ದೇವೇಗೌಡರೂ- ಅಮಿತ ಷಾ ಆಲಿಂಗನ ಮಾಡಿಕೊಂಡ ವಿಡಿಯೋ ನಿಮ್ಮ ಫೋನಿನ್ಯಾಗ ಒಡಮೂಡಿದರ? ನೆಹರೂ – ಜಿನ್ನಾ ಇಬ್ಬರೂ ಅಣ್ಣ- ತಮ್ಮಾ ಅಂತ ವಾಟ್ಸಪ್ಪು ಮೆಸೇಜು ಈಗಾಗಲೇ ಬರಲಿಕ್ಕೆ ಹತ್ತೇದ. ಅವರಿಬ್ಬರೂ ನಾವು ಒಂದೇ ತಾಯಿಯ ಮಕ್ಕಳು ಅಂತ ಹೇಳೋ ವಿಡಿಯೋ ಹುಟ್ಟಿಗೊಂಡರ? ನನ್ನನ್ನ ಯಾರೂ ಹತ್ಯೆ ಮಾಡಿಲ್ಲ. ಸುಳ್ಳ ಸುಳ್ಳ ಯರ‍್ಯಾರನ್ನೋ ಬಯ್ಯಬ್ಯಾಡ್ರಿ. ಸಬಕೋ ಸನಮತಿ ದೇ ಭಗವಾನ ಅಂತ ಗಾಂಧಿ ದೇಶವನ್ನು ಸಂಬೋಧಿಸಿ ಮಾತಾಡೋ ವಿಡಿಯೋ ನಾಳೆ ಟೀವಿಯೊಳಗ ಪ್ರಸಾರ ಆದರ? ಇಂಥಾವೆಲ್ಲಾ ಸುರು ಆದರ ಸ್ವರ್ಗಕ್ಕೆ ಕಿಚ್ಚು ಹಚ್ಚೋದು ಅಲ್ಲಾ, ನರಕಕ್ಕೆ ಕಿಚ್ಚು ಹಚ್ಚೋದು ಆಗತೇತಿ.

ಯಾವುದು ಕಡು ಖೋಟಾ, ಯಾವುದು ಅಲ್ಲಾ ಅಂತ ಕಂಡುಹಿಡಿಯೋ ತಂತ್ರಜ್ಞಾನ ಇನ್ನೂ ಬಂದಿಲ್ಲಂತ. ಕೃತಕ ಬುದ್ಧಿಮತ್ತೆ ಕ್ಷೇತ್ರ ಬೆಳದಂಗ ಬರಬಹುದಂತ. ಆದರ ಪೇಪರು- ಫೋನಿನ್ಯಾಗ ಬಂದ ಖೋಟಾ ಸುದ್ದಿಗಳನ್ನು ವರೆಗೆ ಹಚ್ಚಲು ನಮ್ಮ ಜನಾ ತಯಾರಿಲ್ಲಾ ಎಲ್ಲಾನೂ ಹುಯ್ಯ ಅಂತ ನಂಬತಾರ. ಇನ್ನ ಕಡು ಖೋಟಾ ವಿಡಿಯೋ ಪ್ರಸಾರ ಆಗಲಿಕ್ಕೆ ಹತ್ತಿದವಂದರ ಏನಾದೀತ?

ಅಂದಂಗ ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ ತಿವಾರಿ ಅವರು ಬೇರೆ ಬೇರೆ ಪೋಷಾಕು ಧರಿಸಿ ನಾಲ್ಕು -ಐದು ಭಾಷೆಯೊಳಗ ಮತದಾರರಿಗೆ ಮತ ಕೇಳೋ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರಂತ. ಅವರಿಗೆ ಅಷ್ಟು ಭಾಷಾನ ಬರಂಗಿಲ್ಲ, ಬಂದರೂ ಅಷ್ಟು ಸುಲಲಿತವಾಗಿ ಮಾತಾಡಲಿಕ್ಕೆ ಆಗಂಗಿಲ್ಲ ಅಂತ ಅವರನ್ನ ಬಲ್ಲವರಿಗೆ ಖಾತ್ರಿ ಆತಂತ. ಹಿಂಗಾಗಿ ಅವು ಕಡು ಖೋಟಾ ಅಂತ ಎಲ್ಲಾರಿಗೂ ಗುಮಾನಿ ಬಂತಂತ. ಆ ನಂತರ ವೈಸ್ ಸಂಸ್ಥೆಯ ವರದಿ ಬಂತು, ಅದು ಬ್ಯಾರೆ ವಿಷಯ. ಇದು ಅಂತ್ಯ ಅಲ್ಲ, ಆರಂಭ ಅನ್ನೋದನ್ನ ನಾವು ತಿಳಕೋಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...