Homeಮುಖಪುಟಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

ಕಡುಖೋಟಾ ಅನ್ನೋ ಡೀಫ್ ಫೇಕು : ದೆಹಲಿಯಲ್ಲಿ ಬಿಜೆಪಿಯ ಮನೋಜ್‌ ತಿವಾರಿ ಮಾಡಿದ ಮೋಡಿ ಗೊತ್ತೆ?

- Advertisement -
- Advertisement -

ʻನೀಂ ಕಡು ಕಾಫಿ ಬಲ್ಲೆ, ಕಡು ಖೋಟಾ ಬಲ್ಲೆಯಾ?ʼ

ʻನಿನ್ನೆ ಹುಟ್ಟಿದವನಿಗಿಂತ ಇವತ್ತು ಹುಟ್ಟಿದವ ಶಾಣ್ಯಾʼ ಅಂತ ಒಂದು ಗಾದಿ ಮಾತು ಅದ. ಅದು ಬ್ಯಾರೆ ಎಲ್ಲೆರ ಇದು ಸುಳ್ಳು ಆಗಬಹುದು, ಆದರ ತಂತ್ರಜ್ಞಾನದ ವಿಷಯದಾಗ ಅಗದೀ ಖರೆ.

ನಮ್ಮ ಯುವ ಸಾಫ್ಟವೇರು ತಂತ್ರಜ್ಞರು ಒಂದು ಕಂಪ್ಯೂಟರು, ಒಂದು ಇಂಟರನೆಟ್ಟು ಇಟಗೊಂಡು ಏನೇನೆಲ್ಲಾ ಮಾಡತಾರ ಅಂದರ ಕೇಳಬ್ಯಾಡರಿ. ಅವರ ಮಾಡಿದ ಒಂದೊಂದ ಕೆಲಸದ ಪರಿಣಾಮ ತಿಳಕೊಳ್ಳಿಕ್ಕೆ ನಮಗ ಭಾಳ ಟೈಂ ಬೇಕಾಗತದ. ಒಂದು ತಿಳಕೊಳ್ಳೋದರಾಗ ಇನ್ನೊಂದ ಬಂದಿರತದ.

ಕೆಲವೊಮ್ಮೆ ತಿಳಿಯಂಗೇ ಇಲ್ಲ.

ಈಗ ಅಂಥಾದ್ದೊಂದ ಬಂದದ. ಅದರ ಹೆಸರು ಕಡು ಖೋಟಾ. ಖೋಟಾ ಅನ್ನೋದು ನಮಗ ಎಲ್ಲಾರಿಗೂ ಗೊತ್ತು. ದಿನಾ ಅದನ್ನ ನೋಡತೇವಿ, ಕೇಳತೇವಿ, ನಂಬತೇವಿ. ಈಗ ಇದೇನಪಾ ಕಡು ಖೋಟಾ?

ಕಡು ಖೋಟಾ ಅಥವಾ ಡೀಪ್ ಫೇಕು ಅನ್ನೋ ತಂತ್ರಜ್ಞಾನ ನಮ್ಮ ಎಲ್ಲಾ ನಂಬಿಕೆಗಳನ್ನ, ತಿಳಿವಳಿಕೆಯನ್ನ ಬುಡಮೇಲು ಮಾಡುವಷ್ಟು ಶಕ್ತಿ ಇರುವಂಥಾದ್ದು. ಇದು ಮುಂದೆ ಎಂದೋ ಬರೋದಲ್ಲಾ. ಈಗಾಗಲೇ ಬಂದು ಬಿಟ್ಟದ. ಬರೇ ಇಂಗ್ಲಂಡು- ಅಮೆರಿಕಾದಾಗ ಬಂದಿಲ್ಲಾ, ನಮ್ಮ ಭಾರತ ವರ್ಷದಾಗ ಬಂದು ಬಿಟ್ಟದ.

ಮೊನ್ನೆ ದೆಹಲಿ ಚುನಾವಣೆಯೊಳಗ ಇದರ ಉಪಯೋಗ ಆಗೇದ ಅಂತ ತಂತ್ರಜ್ಞಾನ ಕಂಪನಿ ವೈಸ್ ವರದಿ ಮಾಡೇದ.

ಕಡು ಖೋಟಾ ಅಂದರ ತುಂಬ ತೀಕ್ಷ್ಣ ತಂತ್ರಜ್ಞಾನ ಉಪಯೋಗಿಸಿ ಸುಳ್ಳು ಸುಳ್ಳು ವಿಡಿಯೋಗಳನ್ನು ತಯಾರು ಮಾಡೋದು. ಯಾವುದು ಅಸಾಧ್ಯವೋ, ಯಾವುದು ಆಗಲಿಕ್ಕೆ ಸಾಧ್ಯವೇ ಇಲ್ಲವೋ ಅದನ್ನ ಆಗೇ ಬಿಟ್ಟದ ಅನ್ನೋಹಂಗ ತೋರಸೋದು. ಇದು ಸಣ್ಣ ಹುಡುಗರ ವಿಡಿಯೋಗೇಮೋ, ಅನಿಮೇಷನ್ ಕಾರ್ಟೂನೋ ಇದ್ದರ ಸಮಸ್ಯೆ ಇರಲಿಲ್ಲ. ಆದರ ಇದು ಆಗತಾ ಇರೋದು ಸುದ್ದಿ ಮಾಧ್ಯಮದಾಗ. ಕಮಲ ಹಾಸನ ಅವರ ಇಂಡಿಯನ್ ಸಿನಿಮಾದಾಗ ನೇತಾಜಿ ಜೊತೆಗೆ ಚಿತ್ರದ ನಾಯಕ ಓಡಾಡಿದಂಗ ಮಾಡಿದ್ದರು. ಆದರ ಅದು ಕೃತಕ ಅಂತ ಗೊತ್ತಾಗತಿತ್ತು. ಕಡು ಖೋಟಾ ಅಂದರ ಗೊತ್ತೇ ಆಗದ ಹಂಗ ಕಲಬೆರಕೆ ಮಾಡೋ ಕಲೆ. ಇದು ಎಷ್ಟು ಅಪಾಯಕಾರಿ ಅಂತ ಸ್ವಲ್ಪ ವಿಚಾರ ಮಾಡಿದರ ತಿಳೀತದ.

ಉದಾಹರಣೆಗೆ ಕಳೆದ ವಾರ ಇಂಗ್ಲಂಡಿನ ಇಂಜಿನಿಯರು ಒಬ್ಬ ಕನ್ಸರ್ವೇಟಿವ್ ಪಕ್ಷದ ಬೋರಿಸ ಜಾನಸನ್ ಅವರು ಲಿಬರಲ್ ಪಕ್ಷದ ಸಭೆಯೊಳಗ ಭಾಷಣ ಮಾಡಿದಂಗ, ಲಿಬರಲ್ ಪಕ್ಷದ ಜಿಮ್ಮಿ ಕಾರ್ಬಿನ್ ಅವರು ವಿರೋಧ ಪಕ್ಷದ ಸಮಾರಂಭದಾಗ ಸನ್ಮಾನ ಸ್ವೀಕರಿಸಿದ ಹಂಗ ವಿಡಿಯೋ ತಯಾರು ಮಾಡಿಬಿಟ್ಟ. ಇದನ್ನ ಭಾಳ ಮಂದಿ ನಂಬಿ ಷೇರು, ಲೈಕು, ಕಾಮೆಂಟು ಮಾಡಿದರು.

ಗ್ಯಾಬೋನ್ ದೇಶದ ಅಧ್ಯಕ್ಷ ಅಲಿ ಬೊಂಗೋ ಅವರು ಮಾಡಿದ ಭಾಷಣದ ವಿಡಿಯೋ ತುಣುಕಿನಿಂದ ಅವರ ದೇಶದಾಗ ಒಂದು ಕ್ಷಿಪ್ರಕ್ರಾಂತಿ ಆತು. ಹಿಂಸಾಚಾರ ಆತು. ಆದರ ಆ ಭಾಷಣ ಅವರು ಮಾಡಿರಲೇ ಇಲ್ಲ. ಅವರ ಹಳೇ ವಿಡಿಯೋಗಳ ತುಣುಕುಗಳನ್ನು ಸೇರಿಸಿ, ಅವಕ್ಕೆ ಹೊಸಾ ಅಂಗಿ- ಪ್ಯಾಂಟು ಹಾಕಿ ಖೋಟಾ ವಿಡಿಯೋ ತಯಾರು ಮಾಡಲಾಯಿತು. ಅದು ಇಷ್ಟೆಲ್ಲಾ ಘೋಟಾಲಾ ಮಾಡಿತು.

ಕಡು ಖೋಟಾ ವಿಡಿಯೋ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ಹೇಳಿ ಸ್ಲೋವಾಕಿಯಾದ ಒಬ್ಬ ಪುಣ್ಯಾತ್ಮ ಪ್ರಯತ್ನ ಮಾಡಲಿಕ್ಕೆ ಹತ್ಯಾನ. ಕಂಟ್ರೋಲ್- ಶಿಫ್ಟ್ – ಫೇಸ್ ಅನ್ನೋ ಯೂಟ್ಯೂಬ ವಿಡಿಯೋ ಸರಣಿಯೊಳಗ ಆತ ಇಲ್ಲಿಯವರೆಗೂ 20 ಕಡು ಖೋಟಾ ವಿಡಿಯೋಗಳನ್ನ ಹಾಕ್ಯಾನ. ಅದರಾಗಿನ ಉದಾಹರಣೆ ಅಂದರ 1973 ರಲ್ಲಿ ತೀರಿ ಹೋಗಿರೋ ನಟ ಬ್ರೂಸ್ ಲೀ ಯನ್ನು ಹೀರೋ ಮಾಡಿ 2010 ಸಿನಿಮಾಗಳನ್ನು ಮರು ತಯಾರಿ ಮಾಡೋದು, ಬ್ಯಾಟ ಮ್ಯಾನಿನ ಜೋಕರ ಪಾತ್ರ ತೊಗೊಂಡು ಹೋಗಿ ಇನ್ನಾವುದೋ ಸಂಬಂಧ ಇರಲಾರದ ಸಿನಿಮಾದಾಗ ವಿಲನ್ ಮಾಡೋದು, ಈಗ ಜೀವಂತ ಇರಲಾರದ ಡೇವಿಡ್ ಬೋವಿ ಅವರಂತಹಾ ಪಾಪ್- ರಾಕ್ ಹಾಡುಗಾರರ ಬಾಯಾಗಿಂದಾ ಹೊಸಾ ಹಾಡುಗಳನ್ನು ಹೇಳಿಸೋದು, ಇತ್ಯಾದಿ.

ಉದಾಹರಣೆ ನೋಡಿ:

ನೀವು ಕಲ್ಪನೆ ಮಾಡಿಕೊರಿ. ಇವತ್ತಿನ ಚಲನಚಿತ್ರ ನಟಿಯರು ಕಪ್ಪು- ಬಿಳುಪಿನ ಸಿನಿಮಾದಾಗ ಮಾಡೋದು, ಅಥವಾ ಮೀನಾಕುಮಾರಿ, ಉದಯ ಚಂದ್ರಿಕಾ ಸರ್ವಮಂಗಳಾ ಇವರೆಲ್ಲಾ ಇವನೇ ಶ್ರೀಮನ್ನಾರಾಯಣ, ಕೆಜಿಎಫ್ ನಂತಾ ಸಿನಿಮಾದಾಗ ಮಾಡೋದು ಹೆಂಗಿರತದ?

ಇಂಥದೆಲ್ಲಾ ಮಸ್ತ ಮಜಾ ಇರಬಹದು ಬಿಡ್ರಿ.

ಆದರ ಇಂಥಾದೆಲ್ಲಾ ರಾಜಕೀಯದಾಗ ಬಂದರ? ಏನಾದೀತು?

ಉದಾಹರಣೆಗೆ ರಾಹುಲ ಗಾಂಧಿ ನರೇಂದ್ರಮೋದಿ ಚುನಾವಣಾ ಪ್ರಚಾರಕ್ಕ ನಿಂತರ? ದೇವೇಗೌಡರೂ- ಅಮಿತ ಷಾ ಆಲಿಂಗನ ಮಾಡಿಕೊಂಡ ವಿಡಿಯೋ ನಿಮ್ಮ ಫೋನಿನ್ಯಾಗ ಒಡಮೂಡಿದರ? ನೆಹರೂ – ಜಿನ್ನಾ ಇಬ್ಬರೂ ಅಣ್ಣ- ತಮ್ಮಾ ಅಂತ ವಾಟ್ಸಪ್ಪು ಮೆಸೇಜು ಈಗಾಗಲೇ ಬರಲಿಕ್ಕೆ ಹತ್ತೇದ. ಅವರಿಬ್ಬರೂ ನಾವು ಒಂದೇ ತಾಯಿಯ ಮಕ್ಕಳು ಅಂತ ಹೇಳೋ ವಿಡಿಯೋ ಹುಟ್ಟಿಗೊಂಡರ? ನನ್ನನ್ನ ಯಾರೂ ಹತ್ಯೆ ಮಾಡಿಲ್ಲ. ಸುಳ್ಳ ಸುಳ್ಳ ಯರ‍್ಯಾರನ್ನೋ ಬಯ್ಯಬ್ಯಾಡ್ರಿ. ಸಬಕೋ ಸನಮತಿ ದೇ ಭಗವಾನ ಅಂತ ಗಾಂಧಿ ದೇಶವನ್ನು ಸಂಬೋಧಿಸಿ ಮಾತಾಡೋ ವಿಡಿಯೋ ನಾಳೆ ಟೀವಿಯೊಳಗ ಪ್ರಸಾರ ಆದರ? ಇಂಥಾವೆಲ್ಲಾ ಸುರು ಆದರ ಸ್ವರ್ಗಕ್ಕೆ ಕಿಚ್ಚು ಹಚ್ಚೋದು ಅಲ್ಲಾ, ನರಕಕ್ಕೆ ಕಿಚ್ಚು ಹಚ್ಚೋದು ಆಗತೇತಿ.

ಯಾವುದು ಕಡು ಖೋಟಾ, ಯಾವುದು ಅಲ್ಲಾ ಅಂತ ಕಂಡುಹಿಡಿಯೋ ತಂತ್ರಜ್ಞಾನ ಇನ್ನೂ ಬಂದಿಲ್ಲಂತ. ಕೃತಕ ಬುದ್ಧಿಮತ್ತೆ ಕ್ಷೇತ್ರ ಬೆಳದಂಗ ಬರಬಹುದಂತ. ಆದರ ಪೇಪರು- ಫೋನಿನ್ಯಾಗ ಬಂದ ಖೋಟಾ ಸುದ್ದಿಗಳನ್ನು ವರೆಗೆ ಹಚ್ಚಲು ನಮ್ಮ ಜನಾ ತಯಾರಿಲ್ಲಾ ಎಲ್ಲಾನೂ ಹುಯ್ಯ ಅಂತ ನಂಬತಾರ. ಇನ್ನ ಕಡು ಖೋಟಾ ವಿಡಿಯೋ ಪ್ರಸಾರ ಆಗಲಿಕ್ಕೆ ಹತ್ತಿದವಂದರ ಏನಾದೀತ?

ಅಂದಂಗ ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ ತಿವಾರಿ ಅವರು ಬೇರೆ ಬೇರೆ ಪೋಷಾಕು ಧರಿಸಿ ನಾಲ್ಕು -ಐದು ಭಾಷೆಯೊಳಗ ಮತದಾರರಿಗೆ ಮತ ಕೇಳೋ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರಂತ. ಅವರಿಗೆ ಅಷ್ಟು ಭಾಷಾನ ಬರಂಗಿಲ್ಲ, ಬಂದರೂ ಅಷ್ಟು ಸುಲಲಿತವಾಗಿ ಮಾತಾಡಲಿಕ್ಕೆ ಆಗಂಗಿಲ್ಲ ಅಂತ ಅವರನ್ನ ಬಲ್ಲವರಿಗೆ ಖಾತ್ರಿ ಆತಂತ. ಹಿಂಗಾಗಿ ಅವು ಕಡು ಖೋಟಾ ಅಂತ ಎಲ್ಲಾರಿಗೂ ಗುಮಾನಿ ಬಂತಂತ. ಆ ನಂತರ ವೈಸ್ ಸಂಸ್ಥೆಯ ವರದಿ ಬಂತು, ಅದು ಬ್ಯಾರೆ ವಿಷಯ. ಇದು ಅಂತ್ಯ ಅಲ್ಲ, ಆರಂಭ ಅನ್ನೋದನ್ನ ನಾವು ತಿಳಕೋಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...