Homeಚಳವಳಿಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು, ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

- Advertisement -
- Advertisement -

ನಮ್ಮೂರಿಗೆ ಬಾರ್‌ ಬೇಡ ಎಂದು ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಮುಂಜಾನೆ ಏಕಾಏಕಿ ಮಹಿಳೆಯರ ಮನೆಗೆ ನುಗ್ಗಿದ ಪೊಲೀಸರು ಬಾಗಿಲು ಮುರಿದು, ಹೆಂಚು ಹೊಡೆದು ಹಾಕಿ ಮಕ್ಕಳು, ಮಹಿಳೆಯರು ಸೇರಿದಂತೆ 7 ಮಹಿಳೆಯರನ್ನು ಎಳೆದೊಯ್ದು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮುಸ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾರ್ ಒಂದನ್ನು ತೆರೆಯಲು ಮುಂದಾಗಿದ್ದರು. ಕೂಲಿ ಕಾರ್ಮಿಕರು, ಬಡವರೇ ಹೆಚ್ಚಿದ್ದು ನಮ್ಮೂರಿನಲ್ಲಿ ಬಾರ್ ತೆರೆದರೆ ಜನರೆಲ್ಲಾ ಕುಡಿದು ಹಾಳಾಗುವುದಲ್ಲದೆ ಮತ್ತಷ್ಟು ತಮ್ಮನ್ನು ಮತ್ತಷ್ಟು ಬಡತನಕ್ಕೆ ನೂಕಲಾಗುತ್ತದೆ ಎಂಬ ಆತಂಕದಿಂದ ಮಹಿಳೆಯರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಹತ್ತಾರು ಪ್ರತಿಭಟನೆಗಳು ನಡೆದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ದಾಖಲಾಗಿತ್ತು.

ಇತ್ತೀಚೆಗಷ್ಟೆ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾರ್ ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಮದ್ಯ ನೀಡುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದರು.

ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಕೇವಲ ಸಿಎಲ್-7 ಪರವಾನಗಿ ಇದ್ದರೂ ಶುಕ್ರವಾರ ಬಾರ್ ತೆರೆಯಲಾಗಿತ್ತು ಎಂದು ಕ್ರೋಧಗೊಂಡ ಮಹಿಳೆಯರು ನವೆಂಬರ್ 12ರ ಶುಕ್ರವಾರದಂದು ಬಾರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾತಿಗೆ ಮಾತು ಬೆಳೆದು ಮಹಿಳೆಯರು ಬಾರ್ ಒಳಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದರು. ಈ ಚಕಮಕಿಯಲ್ಲಿ ಹಲವು ಮಹಿಳೆಯರು ಸಹ ಗಾಯಗೊಂಡು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೂರು, ಪ್ರತಿದೂರು ದಾಖಲಾಗಿ ಪೊಲೀಸರು ಆಸ್ಪತ್ರೆಗೆ ತೆರಳಿ ಒಂದಷ್ಟು ಮಹಿಳೆಯರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಕೋಪಗೊಂಡ ಹಲವು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಮದ್ಯದಂಗಡಿ ಮಾಲೀಕರ ಪರವಾಗಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಸಹ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಸಹ ಪೊಲೀಸ್ ಠಾಣೆಗ ಆಗಮಿಸಿ ಮಹಿಳೆಯರಿಗೆ ತೊಂದರೆ ಕೊಡಬೇಡಿ, ಮದ್ಯದಂಗಡಿ ಮುಚ್ಚಿಸಲು ಯತ್ನಿಸಿ ಎಂದು ಮನವಿ ಮಾಡಿದ್ದರು. ಈ ಕುರಿತು ಸಚಿವ ಗೋಪಾಲಯ್ಯರವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಇದಾದ ನಂತರ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದ್ದರು

ಪೊಲೀಸ್ ದೌರ್ಜನ್ಯ ಆರೋಪ

ಇಂದು ಬೆಳಿಗ್ಗೆ ಏಕಾಏಕಿ ಪಿಎಸ್‌ಐ ರಮ್ಯಾ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದ ಮಹಿಳೆಯರ ಮನೆಗಳಿಗೆ ನುಗ್ಗಿ ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದ ಪೊಲೀಸರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ಮುರಿದು ಹಾಕಿದ್ದಾರೆ. ಬೂಟುಗಾಲಿನಿಂದ ಒದ್ದು ಬಾಗಿಲು ಮುರಿದಿದ್ದು, ಅಶ್ಲೀಲ ಪದಗಳಿಂದ ನಿಂದಿಸಿ, ಮನೆಯಲ್ಲಿದ್ದವರನ್ನು ಕಾರಣವನ್ನೂ ಹೇಳದೇ ಕರೆದುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ.

ಪೊಲೀಸರ ಕೃತ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಡೂರಿನಲ್ಲಿ ಅಕ್ರಮ ಮದ್ಯದಂಗಡಿಗಳ ವಿರುದ್ಧ ಸತತ ಹೋರಾಟ ಕಂಡುಬರುತ್ತಿದೆ. ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಇದನ್ನು ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...