Homeಚಳವಳಿಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು, ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

- Advertisement -
- Advertisement -

ನಮ್ಮೂರಿಗೆ ಬಾರ್‌ ಬೇಡ ಎಂದು ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಮುಂಜಾನೆ ಏಕಾಏಕಿ ಮಹಿಳೆಯರ ಮನೆಗೆ ನುಗ್ಗಿದ ಪೊಲೀಸರು ಬಾಗಿಲು ಮುರಿದು, ಹೆಂಚು ಹೊಡೆದು ಹಾಕಿ ಮಕ್ಕಳು, ಮಹಿಳೆಯರು ಸೇರಿದಂತೆ 7 ಮಹಿಳೆಯರನ್ನು ಎಳೆದೊಯ್ದು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮುಸ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾರ್ ಒಂದನ್ನು ತೆರೆಯಲು ಮುಂದಾಗಿದ್ದರು. ಕೂಲಿ ಕಾರ್ಮಿಕರು, ಬಡವರೇ ಹೆಚ್ಚಿದ್ದು ನಮ್ಮೂರಿನಲ್ಲಿ ಬಾರ್ ತೆರೆದರೆ ಜನರೆಲ್ಲಾ ಕುಡಿದು ಹಾಳಾಗುವುದಲ್ಲದೆ ಮತ್ತಷ್ಟು ತಮ್ಮನ್ನು ಮತ್ತಷ್ಟು ಬಡತನಕ್ಕೆ ನೂಕಲಾಗುತ್ತದೆ ಎಂಬ ಆತಂಕದಿಂದ ಮಹಿಳೆಯರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಹತ್ತಾರು ಪ್ರತಿಭಟನೆಗಳು ನಡೆದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ದಾಖಲಾಗಿತ್ತು.

ಇತ್ತೀಚೆಗಷ್ಟೆ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾರ್ ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಮದ್ಯ ನೀಡುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದರು.

ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಕೇವಲ ಸಿಎಲ್-7 ಪರವಾನಗಿ ಇದ್ದರೂ ಶುಕ್ರವಾರ ಬಾರ್ ತೆರೆಯಲಾಗಿತ್ತು ಎಂದು ಕ್ರೋಧಗೊಂಡ ಮಹಿಳೆಯರು ನವೆಂಬರ್ 12ರ ಶುಕ್ರವಾರದಂದು ಬಾರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾತಿಗೆ ಮಾತು ಬೆಳೆದು ಮಹಿಳೆಯರು ಬಾರ್ ಒಳಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದರು. ಈ ಚಕಮಕಿಯಲ್ಲಿ ಹಲವು ಮಹಿಳೆಯರು ಸಹ ಗಾಯಗೊಂಡು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೂರು, ಪ್ರತಿದೂರು ದಾಖಲಾಗಿ ಪೊಲೀಸರು ಆಸ್ಪತ್ರೆಗೆ ತೆರಳಿ ಒಂದಷ್ಟು ಮಹಿಳೆಯರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಕೋಪಗೊಂಡ ಹಲವು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಮದ್ಯದಂಗಡಿ ಮಾಲೀಕರ ಪರವಾಗಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಸಹ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಸಹ ಪೊಲೀಸ್ ಠಾಣೆಗ ಆಗಮಿಸಿ ಮಹಿಳೆಯರಿಗೆ ತೊಂದರೆ ಕೊಡಬೇಡಿ, ಮದ್ಯದಂಗಡಿ ಮುಚ್ಚಿಸಲು ಯತ್ನಿಸಿ ಎಂದು ಮನವಿ ಮಾಡಿದ್ದರು. ಈ ಕುರಿತು ಸಚಿವ ಗೋಪಾಲಯ್ಯರವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಇದಾದ ನಂತರ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದ್ದರು

ಪೊಲೀಸ್ ದೌರ್ಜನ್ಯ ಆರೋಪ

ಇಂದು ಬೆಳಿಗ್ಗೆ ಏಕಾಏಕಿ ಪಿಎಸ್‌ಐ ರಮ್ಯಾ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದ ಮಹಿಳೆಯರ ಮನೆಗಳಿಗೆ ನುಗ್ಗಿ ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದ ಪೊಲೀಸರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ಮುರಿದು ಹಾಕಿದ್ದಾರೆ. ಬೂಟುಗಾಲಿನಿಂದ ಒದ್ದು ಬಾಗಿಲು ಮುರಿದಿದ್ದು, ಅಶ್ಲೀಲ ಪದಗಳಿಂದ ನಿಂದಿಸಿ, ಮನೆಯಲ್ಲಿದ್ದವರನ್ನು ಕಾರಣವನ್ನೂ ಹೇಳದೇ ಕರೆದುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ.

ಪೊಲೀಸರ ಕೃತ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಡೂರಿನಲ್ಲಿ ಅಕ್ರಮ ಮದ್ಯದಂಗಡಿಗಳ ವಿರುದ್ಧ ಸತತ ಹೋರಾಟ ಕಂಡುಬರುತ್ತಿದೆ. ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಇದನ್ನು ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...