Homeಚಳವಳಿಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು, ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

- Advertisement -
- Advertisement -

ನಮ್ಮೂರಿಗೆ ಬಾರ್‌ ಬೇಡ ಎಂದು ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಮುಂಜಾನೆ ಏಕಾಏಕಿ ಮಹಿಳೆಯರ ಮನೆಗೆ ನುಗ್ಗಿದ ಪೊಲೀಸರು ಬಾಗಿಲು ಮುರಿದು, ಹೆಂಚು ಹೊಡೆದು ಹಾಕಿ ಮಕ್ಕಳು, ಮಹಿಳೆಯರು ಸೇರಿದಂತೆ 7 ಮಹಿಳೆಯರನ್ನು ಎಳೆದೊಯ್ದು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮುಸ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾರ್ ಒಂದನ್ನು ತೆರೆಯಲು ಮುಂದಾಗಿದ್ದರು. ಕೂಲಿ ಕಾರ್ಮಿಕರು, ಬಡವರೇ ಹೆಚ್ಚಿದ್ದು ನಮ್ಮೂರಿನಲ್ಲಿ ಬಾರ್ ತೆರೆದರೆ ಜನರೆಲ್ಲಾ ಕುಡಿದು ಹಾಳಾಗುವುದಲ್ಲದೆ ಮತ್ತಷ್ಟು ತಮ್ಮನ್ನು ಮತ್ತಷ್ಟು ಬಡತನಕ್ಕೆ ನೂಕಲಾಗುತ್ತದೆ ಎಂಬ ಆತಂಕದಿಂದ ಮಹಿಳೆಯರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಹತ್ತಾರು ಪ್ರತಿಭಟನೆಗಳು ನಡೆದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ದಾಖಲಾಗಿತ್ತು.

ಇತ್ತೀಚೆಗಷ್ಟೆ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾರ್ ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಮದ್ಯ ನೀಡುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದರು.

ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಕೇವಲ ಸಿಎಲ್-7 ಪರವಾನಗಿ ಇದ್ದರೂ ಶುಕ್ರವಾರ ಬಾರ್ ತೆರೆಯಲಾಗಿತ್ತು ಎಂದು ಕ್ರೋಧಗೊಂಡ ಮಹಿಳೆಯರು ನವೆಂಬರ್ 12ರ ಶುಕ್ರವಾರದಂದು ಬಾರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾತಿಗೆ ಮಾತು ಬೆಳೆದು ಮಹಿಳೆಯರು ಬಾರ್ ಒಳಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದರು. ಈ ಚಕಮಕಿಯಲ್ಲಿ ಹಲವು ಮಹಿಳೆಯರು ಸಹ ಗಾಯಗೊಂಡು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೂರು, ಪ್ರತಿದೂರು ದಾಖಲಾಗಿ ಪೊಲೀಸರು ಆಸ್ಪತ್ರೆಗೆ ತೆರಳಿ ಒಂದಷ್ಟು ಮಹಿಳೆಯರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಕೋಪಗೊಂಡ ಹಲವು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಮದ್ಯದಂಗಡಿ ಮಾಲೀಕರ ಪರವಾಗಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಸಹ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಸಹ ಪೊಲೀಸ್ ಠಾಣೆಗ ಆಗಮಿಸಿ ಮಹಿಳೆಯರಿಗೆ ತೊಂದರೆ ಕೊಡಬೇಡಿ, ಮದ್ಯದಂಗಡಿ ಮುಚ್ಚಿಸಲು ಯತ್ನಿಸಿ ಎಂದು ಮನವಿ ಮಾಡಿದ್ದರು. ಈ ಕುರಿತು ಸಚಿವ ಗೋಪಾಲಯ್ಯರವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಇದಾದ ನಂತರ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದ್ದರು

ಪೊಲೀಸ್ ದೌರ್ಜನ್ಯ ಆರೋಪ

ಇಂದು ಬೆಳಿಗ್ಗೆ ಏಕಾಏಕಿ ಪಿಎಸ್‌ಐ ರಮ್ಯಾ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದ ಮಹಿಳೆಯರ ಮನೆಗಳಿಗೆ ನುಗ್ಗಿ ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದ ಪೊಲೀಸರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ಮುರಿದು ಹಾಕಿದ್ದಾರೆ. ಬೂಟುಗಾಲಿನಿಂದ ಒದ್ದು ಬಾಗಿಲು ಮುರಿದಿದ್ದು, ಅಶ್ಲೀಲ ಪದಗಳಿಂದ ನಿಂದಿಸಿ, ಮನೆಯಲ್ಲಿದ್ದವರನ್ನು ಕಾರಣವನ್ನೂ ಹೇಳದೇ ಕರೆದುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ.

ಪೊಲೀಸರ ಕೃತ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಡೂರಿನಲ್ಲಿ ಅಕ್ರಮ ಮದ್ಯದಂಗಡಿಗಳ ವಿರುದ್ಧ ಸತತ ಹೋರಾಟ ಕಂಡುಬರುತ್ತಿದೆ. ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಇದನ್ನು ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....