Homeಕರ್ನಾಟಕಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

- Advertisement -
- Advertisement -

ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್ ಜಾದೂಗಾರ್ ಹೇಳಿದ್ದಾರೆ.

ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಶ್ ಮೇಸ್ತಾ ಪ್ರಕರಣದಲ್ಲಿ ಸುಮಾರು 95 ಯುವಕರ ಮೇಲೆ ಕೇಸ್ ಹಾಕಲಾಗಿತ್ತು. ಇನ್ನೂ ಕೋರ್ಟ್ ಕಚೇರಿ ಎಂದು ತಿರುಗಾಡುತ್ತಿದ್ದೇವೆ. ಯಾವ ಬಿಜೆಪಿ ಮುಖಂಡರೂ ನಮ್ಮ ಸಹಾಯಕ್ಕೆ ಬಂದಿಲ್ಲ. ಚುನಾವಣೆ ಬಂದಾಗ ಮಾತ್ರ ಪರೇಶ್ ಮೇಸ್ತಾ ಪ್ರಕರಣ ಇವರಿಗೆ ನೆನಪಿಗೆ ಬರುತ್ತದೆ. ಕಾಗೇರಿಯವರು ಆ ಸಂದರ್ಭದಲ್ಲಿ ನಮಗೆ ಏನು ಸಹಾಯ ಮಾಡಿದ್ದಾರೆ ಎಂದು ತಿಳಿಸಲಿ. ನಮ್ಮನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲು ಹೊರಟಿರುವುದು ಅತೀವ ಬೇಸರ ತರಿಸಿದೆ ಎಂದಿದ್ದಾರೆ.

ಪರೇಶ್ ಪ್ರಕರಣದ ಸಂದರ್ಭ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಕಾಗೇರಿಯವರು ಹೇಳುತ್ತಾರೆ. ಹಾಗಿದ್ದರೆ ಕಾಗೇರಿಯವರು ಅಂದು ಸರಿಯಾಗಿ ತನಿಖೆ ಮಾಡುವಂತೆ ಎಷ್ಟು ಪತ್ರ ಬರೆದಿದ್ದಾರೆ? ಯಾರೊಂದಿಗೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ? ಪರೇಶ್ ಮೇಸ್ತಾ ಪ್ರಕರಣದಲ್ಲಿ ಕೇಸು ಹಾಕಿಸಿಕೊಂಡ ನಂತರ ನಮ್ಮ ಸಹಾಯಕ್ಕೆ ಯಾವ ಬಿಜೆಪಿಗರು ಬರದೇ ಪರದಾಡಿದ್ದೇವೆ. ಚುನಾವಣೆಯ ಸಂದರ್ಭದಲ್ಲಿ ಕಂಡವರ ಮನೆಯ ಮಕ್ಕಳನ್ನು ಬಾವಿಗೆ ತಳ್ಳುವ ಕೆಲಸ ಕಾಗೇರಿಯವರು ಮಾಡಬಾರದು ಎಂದು ಶ್ರೀರಾಮ್ ಜಾದೂಗಾರ್ ಹೇಳಿದ್ದಾರೆ.

ಕಳೆದ ಬಾರಿ ಸ್ಪೀಕರ್ ಆಗಿದ್ದಾಗ ನಮ್ಮ ಪರ ಕಾಗೇರಿಯವರು ಏನು ಮಾಡಿದ್ದಾರೆ? ಏಳು ವರ್ಷದಿಂದ ನಾವು ಕೋರ್ಟ್‌ಗೆ ಓಡಾಡುತ್ತಿದ್ದೇವೆ. ಹಿಂದೂ ಕಾರ್ಯಕರ್ತರಾದ ನಾವು ಸದ್ಯ ನೆಮ್ಮದಿಯಾಗಿ ಇದ್ದೇವೆ. ಚುನಾವಣೆಗಾಗಿ ಮತ್ತೆ ನಮ್ಮನ್ನು ಎಳೆದು ತಂದು ಕಂಡವರ ಮನೆಯ ಬಾವಿಗೆ ದಬ್ಬಬೇಡಿ. ಪರೇಶ್ ಮೇಸ್ತಾ ಹತ್ಯೆಯಾದಾಗ ನಾವು ಗಲಭೆಯಲ್ಲಿ ಪಾಲ್ಗೊಂಡಿದ್ದೆವು ಎಂದು ಕೇಸು ಹಾಕಿದ್ದರು. ನಂತರ ಸಿಬಿಐಗೆ ವಹಿಸಿದಾಗ ಬಿಜೆಪಿ ನೇತೃತ್ವದ ಕೇಂದ್ರ ‌ಸರ್ಕಾರ ಇದ್ದರೂ ನ್ಯಾಯ ಕೊಡಿಸಲಾಗಿಲ್ಲ. ಈಗ ಚುನಾವಣೆಗಾಗಿ, ತಮ್ಮ ತೆವಲಿಗಾಗಿ ನಮ್ಮನ್ನು ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೊಡ್ಡ ನಾಯಕರು ಗಲಾಟೆ ಆದಾಗ ಕಾರಿನಲ್ಲಿ ಕುಳಿತು ನಾಪತ್ತೆಯಾದರು. ಲಾಠಿ ಚಾರ್ಜ್ ಎಂದಾಗ ಹೊಡೆತ ತಿಂದವರು ಹಿಂದುಳಿದ ವರ್ಗದ ನಾವುಗಳು. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ 2020ರಲ್ಲಿ ಕಲಂ 107 ಅಡಿ ನಮ್ಮ‌ ಮೇಲೆ ದೂರು ದಾಖಲಿಸಲಾಗಿದೆ. ಶಾಸಕ ದಿನಕರ ಶೆಟ್ಟಿ ಈವರೆಗೆ ನಮಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ನಿತ್ಯಾನಂದ ಪಾಲೇಕರ್ ಮಾತನಾಡಿ, ಸಮಾಜಕ್ಕೆ ಒಳ್ಳೆಯದಾಗುವ ಅಭಿವೃದ್ಧಿ ವಿಚಾರ ಇಟ್ಟುಕೊಂಡು ರಾಜಕೀಯ ಮಾಡಿ. ದ್ವೇಷ ಮೂಡಿಸುವಂತಹ, ಪರಸ್ಪರ ಜಗಳ ಮಾಡುವಂತಹ ರಾಜಕೀಯ ಮಾಡಬೇಡಿ. ಕೋಮು ಗಲಭೆ ಕಿಚ್ಚು ಹಚ್ಚಿಸುವ ಬದಲು ಅಭಿವೃದ್ಧಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದ್ದಾರೆ.

ವಿಕ್ರಂ, ರಾಮ್, ನಾಗರಾಜ, ಪ್ರದೀಪ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...