Homeಕರ್ನಾಟಕಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

- Advertisement -
- Advertisement -

ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್ ಜಾದೂಗಾರ್ ಹೇಳಿದ್ದಾರೆ.

ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಶ್ ಮೇಸ್ತಾ ಪ್ರಕರಣದಲ್ಲಿ ಸುಮಾರು 95 ಯುವಕರ ಮೇಲೆ ಕೇಸ್ ಹಾಕಲಾಗಿತ್ತು. ಇನ್ನೂ ಕೋರ್ಟ್ ಕಚೇರಿ ಎಂದು ತಿರುಗಾಡುತ್ತಿದ್ದೇವೆ. ಯಾವ ಬಿಜೆಪಿ ಮುಖಂಡರೂ ನಮ್ಮ ಸಹಾಯಕ್ಕೆ ಬಂದಿಲ್ಲ. ಚುನಾವಣೆ ಬಂದಾಗ ಮಾತ್ರ ಪರೇಶ್ ಮೇಸ್ತಾ ಪ್ರಕರಣ ಇವರಿಗೆ ನೆನಪಿಗೆ ಬರುತ್ತದೆ. ಕಾಗೇರಿಯವರು ಆ ಸಂದರ್ಭದಲ್ಲಿ ನಮಗೆ ಏನು ಸಹಾಯ ಮಾಡಿದ್ದಾರೆ ಎಂದು ತಿಳಿಸಲಿ. ನಮ್ಮನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲು ಹೊರಟಿರುವುದು ಅತೀವ ಬೇಸರ ತರಿಸಿದೆ ಎಂದಿದ್ದಾರೆ.

ಪರೇಶ್ ಪ್ರಕರಣದ ಸಂದರ್ಭ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಕಾಗೇರಿಯವರು ಹೇಳುತ್ತಾರೆ. ಹಾಗಿದ್ದರೆ ಕಾಗೇರಿಯವರು ಅಂದು ಸರಿಯಾಗಿ ತನಿಖೆ ಮಾಡುವಂತೆ ಎಷ್ಟು ಪತ್ರ ಬರೆದಿದ್ದಾರೆ? ಯಾರೊಂದಿಗೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ? ಪರೇಶ್ ಮೇಸ್ತಾ ಪ್ರಕರಣದಲ್ಲಿ ಕೇಸು ಹಾಕಿಸಿಕೊಂಡ ನಂತರ ನಮ್ಮ ಸಹಾಯಕ್ಕೆ ಯಾವ ಬಿಜೆಪಿಗರು ಬರದೇ ಪರದಾಡಿದ್ದೇವೆ. ಚುನಾವಣೆಯ ಸಂದರ್ಭದಲ್ಲಿ ಕಂಡವರ ಮನೆಯ ಮಕ್ಕಳನ್ನು ಬಾವಿಗೆ ತಳ್ಳುವ ಕೆಲಸ ಕಾಗೇರಿಯವರು ಮಾಡಬಾರದು ಎಂದು ಶ್ರೀರಾಮ್ ಜಾದೂಗಾರ್ ಹೇಳಿದ್ದಾರೆ.

ಕಳೆದ ಬಾರಿ ಸ್ಪೀಕರ್ ಆಗಿದ್ದಾಗ ನಮ್ಮ ಪರ ಕಾಗೇರಿಯವರು ಏನು ಮಾಡಿದ್ದಾರೆ? ಏಳು ವರ್ಷದಿಂದ ನಾವು ಕೋರ್ಟ್‌ಗೆ ಓಡಾಡುತ್ತಿದ್ದೇವೆ. ಹಿಂದೂ ಕಾರ್ಯಕರ್ತರಾದ ನಾವು ಸದ್ಯ ನೆಮ್ಮದಿಯಾಗಿ ಇದ್ದೇವೆ. ಚುನಾವಣೆಗಾಗಿ ಮತ್ತೆ ನಮ್ಮನ್ನು ಎಳೆದು ತಂದು ಕಂಡವರ ಮನೆಯ ಬಾವಿಗೆ ದಬ್ಬಬೇಡಿ. ಪರೇಶ್ ಮೇಸ್ತಾ ಹತ್ಯೆಯಾದಾಗ ನಾವು ಗಲಭೆಯಲ್ಲಿ ಪಾಲ್ಗೊಂಡಿದ್ದೆವು ಎಂದು ಕೇಸು ಹಾಕಿದ್ದರು. ನಂತರ ಸಿಬಿಐಗೆ ವಹಿಸಿದಾಗ ಬಿಜೆಪಿ ನೇತೃತ್ವದ ಕೇಂದ್ರ ‌ಸರ್ಕಾರ ಇದ್ದರೂ ನ್ಯಾಯ ಕೊಡಿಸಲಾಗಿಲ್ಲ. ಈಗ ಚುನಾವಣೆಗಾಗಿ, ತಮ್ಮ ತೆವಲಿಗಾಗಿ ನಮ್ಮನ್ನು ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೊಡ್ಡ ನಾಯಕರು ಗಲಾಟೆ ಆದಾಗ ಕಾರಿನಲ್ಲಿ ಕುಳಿತು ನಾಪತ್ತೆಯಾದರು. ಲಾಠಿ ಚಾರ್ಜ್ ಎಂದಾಗ ಹೊಡೆತ ತಿಂದವರು ಹಿಂದುಳಿದ ವರ್ಗದ ನಾವುಗಳು. ಬಿಜೆಪಿ ಅಧಿಕಾರಕ್ಕೆ ಬಂದ ನಂತರವೂ 2020ರಲ್ಲಿ ಕಲಂ 107 ಅಡಿ ನಮ್ಮ‌ ಮೇಲೆ ದೂರು ದಾಖಲಿಸಲಾಗಿದೆ. ಶಾಸಕ ದಿನಕರ ಶೆಟ್ಟಿ ಈವರೆಗೆ ನಮಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ನಿತ್ಯಾನಂದ ಪಾಲೇಕರ್ ಮಾತನಾಡಿ, ಸಮಾಜಕ್ಕೆ ಒಳ್ಳೆಯದಾಗುವ ಅಭಿವೃದ್ಧಿ ವಿಚಾರ ಇಟ್ಟುಕೊಂಡು ರಾಜಕೀಯ ಮಾಡಿ. ದ್ವೇಷ ಮೂಡಿಸುವಂತಹ, ಪರಸ್ಪರ ಜಗಳ ಮಾಡುವಂತಹ ರಾಜಕೀಯ ಮಾಡಬೇಡಿ. ಕೋಮು ಗಲಭೆ ಕಿಚ್ಚು ಹಚ್ಚಿಸುವ ಬದಲು ಅಭಿವೃದ್ಧಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದ್ದಾರೆ.

ವಿಕ್ರಂ, ರಾಮ್, ನಾಗರಾಜ, ಪ್ರದೀಪ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...